Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ...

ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಒಂದು ತಿಂಗಳಲ್ಲಿ 35 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Dec 2020 4:51 PM IST
share
ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಒಂದು ತಿಂಗಳಲ್ಲಿ 35 ಮಂದಿಯ ಬಂಧನ

ಲಕ್ನೋ,ಡಿ.26: ತಿಂಗಳ ಹಿಂದೆ ವಿವಾದಾತ್ಮಕ ಮತಾಂತರ ವಿರೋಧಿ ಅಧ್ಯಾದೇಶವು ಜಾರಿಗೆ ಬಂದ ನಂತರ ಉತ್ತರ ಪ್ರದೇಶ ಪೊಲೀಸರು ದಿನಕ್ಕೆ ಒಂದಕ್ಕಿಂತಲೂ ಹೆಚ್ಚಿನ ಬಂಧನಗಳನ್ನು ನಡೆಸಿದ್ದು,ಈವರೆಗೆ 35 ಜನರನ್ನು ಬಂಧಿಸಿದ್ದಾರೆ. ನ.27ರಂದು ‘ಅಕ್ರಮ ಮತಾಂತರ ತಡೆ ವಿಧೇಯಕ,2020’ರ ಅಧಿಸೂಚನೆ ಹೊರಬಿದ್ದಾಗಿನಿಂದ ಈವರೆಗೆ ಸುಮಾರು 12 ಎಫ್‌ಆರ್‌ಗಳನ್ನು ದಾಖಲಿಸಲಾಗಿದೆ.

ಇಟಾದಲ್ಲಿ ಎಂಟು,ಸಿತಾಪುರದಲ್ಲಿ ಏಳು,ಗ್ರೇಟರ್ ನೊಯ್ಡದಲ್ಲಿ ನಾಲ್ಕು, ಶಾಹಜಹಾನ್‌ಪುರ ಮತ್ತು ಅಝಮ್‌ಗಡಗಳಲ್ಲಿ ತಲಾ ಮೂವರು, ಮೊರಾದಾಬಾದ್, ಬಿಜ್ನೋರ್ ಮತ್ತು ಕನೌಜ್‌ಗಳಲ್ಲಿ ತಲಾ ಇಬ್ಬರು ಹಾಗೂ ಬರೇಲಿ ಮತ್ತು ಹರ್ದೋಯಿಗಳಲ್ಲಿ ತಲಾ ಓರ್ವ ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ಇಲ್ಲಿ ತಿಳಿಸಿದರು. ಕಾನೂನು ಜಾರಿಗೆ ಬಂದ ಮರುದಿನವೇ ಬರೇಲಿಯಲ್ಲಿ ಮೊದಲ ಬಂಧನ ನಡೆದಿತ್ತು. 20ರ ಹರೆಯದ ಯುವತಿಯ ತಂದೆಯಾಗಿರುವ ಬರೇಲಿಯ ಶರೀಫ್ ನಗರ ಗ್ರಾಮದ ನಿವಾಸಿಯ ದೂರಿನ ಮೇರೆಗೆ ಪೊಲೀಸರು ನೂತನ ಕಾನೂನಿನ ಅಸ್ತ್ರವನ್ನು ಪ್ರಯೋಗಿಸಿದ್ದರು. ತನ್ನ ಪುತ್ರಿಯ ಜೊತೆ ಸ್ನೇಹ ಬೆಳೆಸಿಕೊಂಡಿರುವ ಉವೈಶ್ ಅಹ್ಮದ್(22) ಎಂಬಾತ ಆಕೆಯ ಮತಾಂತರಕ್ಕೆ ಆಮಿಷವನ್ನೊಡ್ಡಲು ಮತ್ತು ಬಲವಂತಗೊಳಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಡಿ.3ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಅಂತರ್‌ಧರ್ಮೀಯ ವಿವಾಹಗಳ ಬಗ್ಗೆ ಮಾಹಿತಿ ಪಡೆದ ಬಳಿಕ ಲಕ್ನೋ ಪೊಲೀಸರು ನಗರದಲ್ಲಿ ನಡೆಯಲಿದ್ದ ವಿವಾಹ ಸಮಾರಂಭವೊಂದನ್ನು ನಿಲ್ಲಿಸಿದ್ದರು ಮತ್ತು ಕಾನೂನು ಅಗತ್ಯಗಳನ್ನು ಮೊದಲು ಪೂರೈಸುವಂತೆ ಜೋಡಿಗೆ ತಿಳಿಸಿದ್ದರು. ವಿವಾಹಿತ ಮಹಿಳೆಯನ್ನು ಮತಾಂತರಗೊಳ್ಳುವಂತೆ ಬಲವಂತಗೊಳಿಸಿದ್ದಕ್ಕಾಗಿ ಡಿ.6ರಂದು ಮುಝಫ್ಫರ್‌ನಗರದಲ್ಲಿ ನದೀಂ ಎಂಬಾತನನ್ನು ಮತ್ತು ಆತನ ಸಹಚರನನ್ನು ಬಂಧಿಸಲಾಗಿತ್ತು. ನದೀಂ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳದಂತೆ ಅಲಹಾಬಾದ್ ಉಚ್ಚ ನ್ಯಾಯಾಲಯವು ಪೊಲೀಸರಿಗೆ ಆದೇಶದ ಬಳಿಕ ಆತ ಬಿಡುಗಡೆಯ ನಿಟ್ಟುಸಿರೆಳೆದಿದ್ದ. ಇದೇ ರೀತಿ ಮೊರಾದಾಬಾದ್‌ನಲ್ಲಿ ಮತಾಂತರ ನಿಗ್ರಹ ಕಾನೂನಿನಡಿ ಬಂಧಿಸಲ್ಪಟ್ಟಿದ್ದ ಇಬ್ಬರು ಸೋದರರು ಸಿಜೆಎಂ ನ್ಯಾಯಾಲಯದ ಆದೇಶದ ಮೇರೆಗೆ ಬಿಡುಗಡೆಗೊಂಡಿ ದ್ದರು.

ರಶೀದ್ ಎಂಬಾತ ಹಿಂದು ಮಹಿಳೆಯೊಡನೆ ತನ್ನ ಮದುವೆಯನ್ನು ನೋಂದಾಯಿಸಲು ಮೊರಾದಾಬಾದ್‌ನ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದಾಗ ಆತನನ್ನು ಮತ್ತು ಜೊತೆಯಲ್ಲಿದ್ದ ಸಲೀಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಮಹಿಳೆಯ ಕುಟುಂಬವು ಪೊಲೀಸರಲ್ಲಿ ದೂರು ದಾಖಲಿಸಿತ್ತು. ಡಿ.3ರಂದು ಮೌ ಜಿಲ್ಲೆಯಲ್ಲಿ ವಿವಾಹಿತ ಶಬಾಬ್ ಖಾನ್ ಅಲಿಯಾಸ್ ರಾಹುಲ್(38) ಎಂಬಾತನನ್ನು ಬಂಧಿಸಿದ್ದ ಪೊಲೀಸರು,27ರ ಹರೆಯದ ಹಿಂದು ಮಹಿಳೆಯ ಮತಾಂತರದ ಉದ್ದೇಶದಿಂದ ಆಕೆಯನ್ನು ಮದುವೆಯ ಮುನ್ನಾದಿನವಾದ ನ.30ರಂದು ಅಪಹರಿಸಿದ್ದ ಆರೋಪದಲ್ಲಿ ಆತನ 13 ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X