ಬಿಜೆಪಿ ಜಾತಿಗಳ ನಡುವೆ ಜಗಳ ಹಚ್ಚುತ್ತಿದೆ: ಸತೀಶ್ ಜಾರಕಿಹೊಳಿ
ಬೆಳಗಾವಿ, ಡಿ.26: ಬಿಜೆಪಿಯು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚಿ ಶಾಂತಿ ಕದಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಜಿಲ್ಲೆಯ ಗೋಕಾಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದವರು ನಿಜವಾದ ದೇಶ ಭಕ್ತರು. ಬ್ರಿಟಿಷರನ್ನು ಕ್ಷಮೆ ಕೇಳಿದವರು ದೇಶಭಕ್ತರಾಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ದೇಶ ಭಕ್ತರು ಯಾರು ಮತ್ತು ನಕಲಿ ದೇಶ ಭಕ್ತರು ಯಾರು ಎಂದು ಜನರು ತೀರ್ಮಾನಿಸುವ ಕಾಲ ಬಂದೇ ಬರುತ್ತದೆ. ಸೇವೆ ಮಾಡುವುದು ಬಿಜೆಪಿಯವರಿಗೆ ಬೇಕಾಗಿಲ್ಲ. ಕೇವಲ ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ ಮತ ಕಿತ್ತಿಕೊಳ್ಳುವುದೇ ಅವರ ಉದ್ದೇಶ ಎಂದು ಟೀಕಿಸಿದರು.
Next Story