Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2ನೆ ಹಂತದ ಕೋವಿಡ್ ಸಿದ್ಧತೆ ವೈಜ್ಞಾನಿಕ...

2ನೆ ಹಂತದ ಕೋವಿಡ್ ಸಿದ್ಧತೆ ವೈಜ್ಞಾನಿಕ ಆಧಾರದಲ್ಲಿರಲಿ: ಶಾಸಕ ಖಾದರ್

ವಾರ್ತಾಭಾರತಿವಾರ್ತಾಭಾರತಿ26 Dec 2020 11:10 PM IST
share
2ನೆ ಹಂತದ ಕೋವಿಡ್ ಸಿದ್ಧತೆ ವೈಜ್ಞಾನಿಕ ಆಧಾರದಲ್ಲಿರಲಿ: ಶಾಸಕ ಖಾದರ್

ಮಂಗಳೂರು, ಡಿ.26: ರಾಜ್ಯದಲ್ಲಿ ಎರಡನೆ ಹಂತದ ಕೋವಿಡ್ ಕುರಿತಂತೆ ಜನಸಾಮಾನ್ಯರ ಆತಂಕಕ್ಕೆ ಪೂರಕವಾಗಿ ವೈಜ್ಞಾನಿಕ ಆಧಾರದಲ್ಲಿ ಸರಕಾರ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಯು.ಟಿ. ಖಾದರ್ ಸಲಹೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗಾಗಲೇ ನೈಟ್ ಕರ್ಫ್ಯೂಗೆ ಸಂಬಂಧಿಸಿ 48 ಗಂಟೆಗಳಲ್ಲಿ ಸರಕಾರ ಮೂರು ಬಾರಿ ತನ್ನ ಆದೇಶ ಬದಲಾಯಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಿತ್ತು. ಸರಕಾರ ಜನರ ಆರೋಗ್ಯದ ಬಗ್ಗೆ ಕೈಗೊಳ್ಳುವ ತೀರ್ಮಾನ ವೈಜ್ಞಾನಿಕ ಆಧಾರದಲ್ಲಿರಬೇಕೇ ಹೊರು ರಾಜಕೀಯವಾಗಿರಬಾರದು ಎಂದರು.

2ನೆ ಹಂತದ ಕೋವಿಡ್ ಎದುರಿಸಲು ಸರಕಾರ ಯಾವ ಸಿದ್ಧತೆ ನಡೆಸಿದೆ, ಜನರಿಗೆ ಯಾವ ರೀತಿಯಲ್ಲಿ ಜಾಗೃತಿ ನೀಡಲಿದೆ ಎಂಬ ಕುರಿತು ಸರಕಾರದ ವೈಜ್ಞಾನಿಕ ಸಮಿತಿ ನೀಡಿರುವ ವರದಿಯನ್ನು ಜನರಿಗೆ ತಿಳಿಸಬೇಕಾಗಿದೆ. ಇದೇ ವೇಳೆ ಲಸಿಕೆ ನೀಡುವ ಕುರಿತಂತೆಯೂ ಸ್ಪಷ್ಟತೆ ಯನ್ನು ನೀಡಬೇಕು. ಸರಕಾರ ನೀಡುವ ಲಸಿಕೆ ಡ್ರಗ್ ಕಂಟ್ರೋಲ್ ಆಫ್ ಇಂಡಿಯಾದಿಂದ ಅನುಮತಿ ಪಡೆದಿದೆಯೇ, ಇದು ಕೋವಿಡ್ ನಿಯಂತ್ರಿಸು ವಲ್ಲಿ ಎಷ್ಟು ಶೇಕಡಾವಾರು ಪರಿಣಾಮಕಾರಿ, ಇದರ ವೆಚ್ಚ ಭರಿಸುವುದು ಹೇಗೆ ಹಾಗೂ ಇದನ್ನು ಜನಸಾಮಾನ್ಯರಿಗೆ ನೀಡುವ ವ್ಯವಸ್ಥೆ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದವರು ಹೇಳಿದರು.

ಪ್ರಸ್ತುತ ಆಯುಷ್ಮಾನ್ ಯೋಜನೆಯಡಿ ಐಸಿಯುಗೆ ದಾಖಲಾದ ಕೋವಿಡ್ ರೋಗಿಗೆ ಮಾತ್ರವೇ ಸೌಲಭ್ಯ ದೊರೆಯುತ್ತಿದೆ. ಆದರೆ ಮುಂದೆ ಒಂದು ವೇಳೆ ಕೋವಿಡ್ ಮತ್ತೆ ವ್ಯಾಪಕವಾದಲ್ಲಿ ಆಯುಷ್ಮಾನ್‌ನಡಿ ಚಿಕಿತ್ಸೆ ದೊರೆಯದೆ ಜನಸಾಮಾನ್ಯರು ತೊಂದರೆಗೊಳಗಾಗಬಹುದು. ಹಾಗಾಗಿ ಹಿಂದಿನಂತೆಯೇ ಕೋವಿಡ್ ರೋಗಿಗಳಿಗೆ ಆಯುಷ್ಮಾನ್‌ನಡಿ ಚಿಕಿತ್ಸೆ ದೊರೆಯುವಂತಹ ಆದೇವನ್ನು ಹೊರಡಿಸಬೇಕು ಎಂದರು.

ಶಿಕ್ಷಣಕ್ಕೆ ಸಂಬಂಧಿಸಿಯೂ ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಯು.ಟಿ.ಖಾದರ್, ಪದವಿ ತರಗತಿ ಗಳನ್ನು ಆರಂಭಗೊಳಿಸಲಾಗಿದ್ದರೂ, ಆಫ್‌ಲೈನ್, ಆನ್‌ಲೈನ್ ಎಂಬ ಗೊಂದಲದಿಂದಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ಗೊಂದಲ್ಲಿದ್ದು, ಈ ಬಗ್ಗೆ ಸ್ಪಷ್ಟತೆಯನ್ನು ಸರಕಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ರೌಡಿಗಳ ಅಟ್ಟಹಾಸ, ಕೊಲೆ, ಹಲ್ಲೆ, ದರೋಡೆ ಪ್ರಕರಣಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಮುಹಮ್ಮದ್ ಮೋನು, ಸದಾಶಿವ ಉಳ್ಳಾಲ್, ಈಶ್ವರ ಉಳ್ಳಾಲ್, ಮುಸ್ತಫಾ, ಜಬ್ಬಾರ್, ಆಯ್ಯೂಬ್, ಉಸ್ಮಾನ್, ಗಿರೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X