Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಿಟನ್‌ನಿಂದ ಆಗಮಿಸಿದ 279 ಮಂದಿ...

ಬ್ರಿಟನ್‌ನಿಂದ ಆಗಮಿಸಿದ 279 ಮಂದಿ ತೆಲಂಗಾಣದಲ್ಲಿ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ27 Dec 2020 9:27 AM IST
share
ಬ್ರಿಟನ್‌ನಿಂದ ಆಗಮಿಸಿದ 279 ಮಂದಿ ತೆಲಂಗಾಣದಲ್ಲಿ ನಾಪತ್ತೆ

ಹೈದರಾಬಾದ್, ಡಿ.27: ಇತ್ತೀಚೆಗೆ ಬ್ರಿಟನ್‌ನಿಂದ ವಾಪಸ್ಸಾಗಿದ್ದ 279 ಮಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ರಾಜ್ಯದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಈ ಮಧ್ಯೆ ಬ್ರಿಟನ್‌ನಿಂದ ಆಗಮಿಸಿದ ಮತ್ತೆ 59 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಬ್ರಿಟನ್‌ನಿಂದ ವಾಪಸ್ಸಾದವರ ಪೈಕಿ ದೇಶಾದ್ಯಂತ ಒಟ್ಟು 119 ಮಂದಿಗೆ ಸೋಂಕು ತಗಲಿದೆ.

ಎಲ್ಲ ವೈರಸ್ ಪಾಸಿಟಿವ್ ಪ್ರಯಾಣಿಕರ ಮಾದರಿಗಳನ್ನು ಸಂಗ್ರಹಿಸಿ, ಅದನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದ್ದು, ಬ್ರಿಟನ್‌ನಲ್ಲಿ ಇತ್ತೀಚೆಗೆ ಕಂಡುಬಂದ, ಹೆಚ್ಚು ವೇಗವಾಗಿ ಹರಡುವ ರೂಪಾಂತರಿತ ವೈರಸ್ ಪ್ರಬೇಧವೇ ಎನ್ನುವುದು ಸೋಮವಾರ ತಿಳಿಯಲಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ತೆಲಂಗಾಣದಲ್ಲಿ ಮೂರು ಹೊಸ ಪ್ರಕರಣಗಳು ವರದಿಯಾಗಿದ್ದು, ಬ್ರಿಟನ್‌ನಿಂದ ರಾಜ್ಯಕ್ಕೆ ವಾಪಸ್ಸಾದವರಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ಗೋವಾದಲ್ಲಿ 16 ಮಂದಿಗೆ ಸೋಂಕು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಹೊಸ 14 ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 17ಕ್ಕೇರಿದೆ. ನಾಸಿಕ್‌ನಲ್ಲಿ ಮತ್ತೊಬ್ಬ ಪ್ರಯಾಣಿಕನಿಗೆ ಸೋಂಕು ದೃಢಪಟ್ಟಿದ್ದು, ಬ್ರಿಟನ್‌ನಲ್ಲೇ ಆತನಿಗೆ ಸೋಂಕು ತಗಲಿತ್ತೇ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಏಕೆಂದರೆ ಡಿಸೆಂಬರ್ 13ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆಸಿದ ಕೊರೋನ ಪತ್ತೆ ಪರೀಕ್ಷೆಯಲ್ಲಿ ಆತನಿಗೆ ನೆಗೆಟಿವ್ ಬಂದಿತ್ತು.

ಕೇರಳದಲ್ಲಿ ಮತ್ತೆ ಮೂವರು ಪ್ರಯಾಣಿಕರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೇರಿದೆ. ಉತ್ತರ ಪ್ರದೇಶಕ್ಕೆ ಬ್ರಿಟನ್‌ನಿಂದ ವಾಪಸ್ಸಾದವರಲ್ಲಿ 8 ಮಂದಿಗೆ, ಕರ್ನಾಟಕದ ಮೈಸೂರಿನಲ್ಲಿ ಒಬ್ಬರಿಗೆ ಮತ್ತು ಆಂಧ್ರ ಪ್ರದೇಶದಲ್ಲಿ ಆರು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ತೆಲಂಗಾಣದಲ್ಲಿ ಸಂಪರ್ಕಕ್ಕೆ ಸಿಗದ ಪ್ರಯಾಣಿಕರಲ್ಲಿ 92 ಮಂದಿ ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ಕೇರಳ ಮತ್ತು ಕರ್ನಾಟಕಕ್ಕೆ ಸೇರಿದವರಾಗಿದ್ದು, 184 ಮಂದಿ ತಪ್ಪು ವಿಳಾಸ ಮತ್ತು ದೂರವಾಣಿ ಸಂಖ್ಯೆ ನೀಡಿದ್ದಾರೆ. ಆಯಾ ರಾಜ್ಯ ಸರಕಾರಗಳಿಗೆ ಅವರ ವಿವರಗಳನ್ನು ನೀಡಲಾಗಿದೆ. ಇವರ ಪತ್ತೆಗೆ ಆ ರಾಜ್ಯಗಳು ನೆರವು ನೀಡಬಹುದು ಉಳಿದವರನ್ನು ಪತ್ತೆ ಹಚ್ಚಲು ಪ್ರಯತ್ನ ಮುಂದುವರಿದಿದೆ ಎಂದು ತೆಲಂಗಾಣದ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ.ಜಿ.ಶ್ರೀನಿವಾಸ ರಾವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X