Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಾಂತರ ವಿರೋಧಿ ಕಾಯ್ದೆ:...

ಮತಾಂತರ ವಿರೋಧಿ ಕಾಯ್ದೆ: ಉತ್ತರಪ್ರದೇಶವನ್ನು ತ್ಯಜಿಸುತ್ತಿರುವ ಅನ್ಯಧರ್ಮೀಯ ಜೋಡಿಗಳು

ವಾರ್ತಾಭಾರತಿವಾರ್ತಾಭಾರತಿ27 Dec 2020 3:46 PM IST
share
ಮತಾಂತರ ವಿರೋಧಿ ಕಾಯ್ದೆ: ಉತ್ತರಪ್ರದೇಶವನ್ನು ತ್ಯಜಿಸುತ್ತಿರುವ ಅನ್ಯಧರ್ಮೀಯ ಜೋಡಿಗಳು

ಬರೇಲಿ,ಡಿ.27: ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ಬಳಿಕ ಒಂದು ತಿಂಗಳಿನಲ್ಲಿ 35ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಲವು ಜೋಡಿಗಳನ್ನು ಬಲವಂತವಾಗಿ ಬೇರ್ಪಡಿಸಿ ಬಂಧನಕ್ಕೊಳಪಡಿಸಲಾಗಿದೆ. ಇದೀಗ ಈ ಕಾಯ್ದೆಯ ಮೇಲಿನ ಭಯದಿಂದ ಹಲವಾರು ಅನ್ಯಧರ್ಮೀಯ ಜೋಡಿಗಳು ಉತ್ತರಪ್ರದೇಶದಿಂದ ಬೇರೆ ರಾಜ್ಯಗಳಿಗೆ ತೆರಳುತ್ತಿದ್ದಾರೆ ಎಂದು timesofindia.com ವರದಿ ಮಾಡಿದೆ.

“ನಾನು ಇಕ್ಬಾಲ್ ನನ್ನು ಪ್ರೀತಿಸುತ್ತಿದ್ದೇನೆ ಎಂದು ನನ್ನ ಮನೆಯಲ್ಲಿ ತಿಳಿದ ಕೂಡಲೇ ನನ್ನನ್ನು ಮನೆಯೊಳಗೆ ಕೂಡಿಹಾಕಿದರು. ಅಲ್ಗಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದರು. ನನಗೆ ಆತ ಹಿಪ್ನಾಟಿಸಂ ಮಾಡಿದ್ದಾನೆಯೇ ಎಂದು ತಿಳಿಯಲು ಮನಶಾಸ್ತ್ರಜ್ಞರ ಬಳಿಯೂ ಕರೆದೊಯ್ದರು. ಹಲವಾರು ರೀತಿಯಲ್ಲಿ ಕಿರುಕುಳ ನೀಡಿದರು. ಕೊನೆಗೆ ನಾವಿಬ್ಬರೂ ಅಲ್ಲಿಂದ ದಿಲ್ಲಿಗೆ ಬಂದು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದೇವೆ. ಮುಂದೇನಾಗಬಹುದು ಎಂದು ನಮಗೆ ತಿಳಿದಿಲ್ಲ” ಎಂದು ಸ್ಮೃತಿ ಎಂಬಾಕೆ ಹೇಳಿಕೆ ನೀಡಿದ್ದಾಗಿ timesofindia.com ವರದಿ ಮಾಡಿದೆ.

ಮುಹಮ್ಮದ್ ಶದಾಬ್ ಮತ್ತು ಅನಾಮಿಕ ಕಾಲೇಜಿನಲ್ಲಿ ಭೇಟಿಯಾದ ಬಳಿಕ ಪ್ರೀತಿಸಲು ಪ್ರಾರಂಭಿಸಿದ್ದರು. ಈ ವಿಚಾರವನ್ನು ತಿಳಿದ ಕೆಲ ಬಲಪಂಥೀಯ ಸಂಘಟನೆಗಳು ನಮ್ಮನ್ನುಕೊಲ್ಲುವವರೆಗೂ ಬಂದಿದ್ದವು ಎಂದು ಯುವಕ ಹೇಳುತ್ತಾನೆ. “ಅವರು ನನ್ನ ಹೆತ್ತವರಿಗೆ ತೊಂದರೆ ಕೊಡಬಹುದೆಂಬ ಭಯ ನನಗಿತ್ತು. ನಾನು ಎಲ್ಲವನ್ನೂ ನಿಲ್ಲಿಸುತ್ತೇನೆ ಎಂದು ಆ ಸಂಘಟನೆಗಳಿಗೆ ಮಾತು ನೀಡಿದ್ದೆ. ಆದರೆ ನಾವಿಬ್ಬರು ಸಂಪರ್ಕದಲ್ಲೇ ಇದ್ದೆವು. ನಮ್ಮ ರಾಜ್ಯದಲ್ಲಿ ಈ ಕಾನೂನು ಜಾರಿಯಾದ ಬಳಿಕ ತೊಂದರೆಗಳು ಹೆಚ್ಚುವುದು ಬೇಡ ಎಂದು ನಾವು ಪರಾರಿಯಾಗಿದ್ದೇವೆ. ಅವಶ್ಯಕತೆ ಬಂದರೆ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲೂ ಸಿದ್ಧನಿದ್ದೇನೆ ನಮಗೆ ಧರ್ಮ ಒಂದು ಪ್ರಶ್ನೆಯೇ ಅಲ್ಲ ಎಂದು ಶದಾಬ್ ಹೇಳಿದ್ದಾಗಿ ವರದಿ ತಿಳಿಸಿದೆ.

ಈ ರೀತಿ ವಿಭಿನ್ನ ಧರ್ಮಗಳಿಗೆ ಸೇರಿದ ಜೋಡಿಗಳು ಈ ನಿಯಮದಿಂದ ಕಂಗಾಲಾಗಿದ್ದಾರೆ. ಹಲವಾರು ಮಂದಿ ಜೈಲಿನಲ್ಲಿದ್ದಾರೆ. ಜೊತೆಗೆ ನಡೆದ ಕಾರಣದಿಂದಾಗಿ ಬಂಧನಕ್ಕೊಳಪಟ್ಟು ಜೈಲು ಸೇರಿದವರೂ ಇದ್ದಾರೆ. ಹಾಗಾಗಿ ಸದ್ಯ ಉತ್ತರಪ್ರದೇಶ ಬಿಡುವವರ ಸಂಖ್ಯೆ ಹೆಚ್ಚಾಗಿದೆ ಎಂಧು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X