ರಾಜ್ಯದಲ್ಲಿ 911 ಹೊಸ ಕೊರೋನ ಪ್ರಕರಣ ದೃಢ, 11 ಮಂದಿ ಸಾವು

ಬೆಂಗಳೂರು, ಡಿ.27: ರಾಜ್ಯದಲ್ಲಿ ರವಿವಾರ 911 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 11 ಜನರು ಸೋಂಕಿಗೆ ಬಲಿಯಾಗಿದ್ದು, 1,214ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,16,256ಕ್ಕೆ ತಲುಪಿದ್ದು, 208 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,062ಕ್ಕೆ ತಲುಪಿದ್ದು, ಅನ್ಯ ಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 13,080ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
11 ಸೋಂಕಿತರು ಬಲಿ: ಬೆಂಗಳೂರು ನಗರ 8, ಕೋಲಾರ 1, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 911 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 4, ಬಳ್ಳಾರಿ 11, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ 20, ಬೆಂಗಳೂರು ನಗರ 542, ಬೀದರ್ 7, ಚಾಮರಾಜನಗರ 11, ಚಿಕ್ಕಬಳ್ಳಾಪುರ 32, ಚಿಕ್ಕಮಗಳೂರು 9, ಚಿತ್ರದುರ್ಗ 21, ದಕ್ಷಿಣ ಕನ್ನಡ 18, ದಾವಣಗೆರೆ 15, ಧಾರವಾಡ 17, ಗದಗ 4, ಹಾಸನ 34, ಹಾವೇರಿ 3, ಕಲಬುರಗಿ 12, ಕೊಡಗು 7, ಕೋಲಾರ 9, ಕೊಪ್ಪಳ 3, ಮಂಡ್ಯ 19, ಮೈಸೂರು 40, ರಾಯಚೂರು 5, ಶಿವಮೊಗ್ಗ 12, ತುಮಕೂರು 20, ಉಡುಪಿ 1, ಉತ್ತರ ಕನ್ನಡ 11, ವಿಜಯಪುರ 5, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ.
……………..







