Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 28: ಪಡುಬಿದ್ರೆ ಬ್ಲೂ ಫ್ಲ್ಯಾಗ್ ಕಡಲ...

ಡಿ. 28: ಪಡುಬಿದ್ರೆ ಬ್ಲೂ ಫ್ಲ್ಯಾಗ್ ಕಡಲ ತೀರದಲ್ಲಿ ಧ್ವಜಾರೋಹಣ

ವಾರ್ತಾಭಾರತಿವಾರ್ತಾಭಾರತಿ27 Dec 2020 9:27 PM IST
share
ಡಿ. 28: ಪಡುಬಿದ್ರೆ ಬ್ಲೂ ಫ್ಲ್ಯಾಗ್ ಕಡಲ ತೀರದಲ್ಲಿ ಧ್ವಜಾರೋಹಣ

ಉಡುಪಿ, ಡಿ.27: ಅಂತಾರಾಷ್ಟ್ರೀಯ ಬ್ಲೂಫ್ಲಾಗ್ ಮಾನ್ಯತೆ ಪಡೆದಿರುವ ಪಡುಬಿದ್ರಿಯ ಎಂಡ್ ‌ಪಾಯಿಂಟ್‌ನ ಬ್ಲೂ ಫ್ಲ್ಯಾಗ್ ಕಡಲ ತೀರದ (ಬೀಚ್) ಧ್ವಜಾರೋಹಣ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತ ಸರಕಾರದ ಪರಿಸರ ಮಂತ್ರಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಸೊಸೈಟಿ ಆಫ್ ಇಂಟಿಗ್ರೇಟೆಡ್ ಕೋಸ್ಟಲ್ ಮ್ಯಾನೇಜ್‌ಮೆಂಟ್ (ಎಸ್‌ಐಸಿಓಎಂ) ಹಾಗೂ ಹೊಸದಿಲ್ಲಿಯ ಎ ಟು ಝಡ್ ಇಋಫ್ರಾ ಸರ್ವಿಸ್‌ನ ಸಂಯುಕ್ತ ಸಹಯೋಗದಲ್ಲಿ ಈ ಕಾರ್ಯಕ್ರಮ ಪಡುಬಿದ್ರಿ ಎಂಡ್ ‌ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್‌ನಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸುವರು. ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಆನಂದಸಿಂಗ್ ಹಾಗೂ ರಾಜ್ಯ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಕರ್ನಾಟಕ ರಾಜ್ಯದ ಪಡುಬಿದ್ರಿ ಎಂಡ್ ‌ಪಾಯಿಂಟ್ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಸಮೀಪದ ಕಾಸರಕೋಡು ಬೀಚ್‌ಗಳು ಸೇರಿದಂತೆ ದೇಶದ ಒಟ್ಟು ಎಂಟು ಸುಂದರ ಬೀಚ್‌ಗಳು ಡೆನ್ಮಾರ್ಕ್ ಮೂಲದ ಪರಿಸರ ಶಿಕ್ಷಣ ಫೌಂಡೇಷನ್‌ನಿಂದ ಅಂತಾರಾಷ್ಟ್ರೀಯ ಮಟ್ಟದ ಬ್ಲೂ ಫ್ಲ್ಯಾಗ್ ಮಾನ್ಯತೆಯನ್ನು ಪಡೆದಿವೆ.

ದೇಶದ 13 ಬೀಚ್‌ಗಳು ಇಂಥ ಮಾನ್ಯತೆಗೆ ಅರ್ಜಿ ಹಾಕಿದ್ದು, ಈ ಪೈಕಿ ರಾಷ್ಟ್ರೀಯ ಆಯ್ಕೆ ಸಮಿತಿ ಎಂಟು ಬೀಚ್‌ಗಳನ್ನು ಅಂತಾರಾಷ್ಟ್ರೀಯ ಆಯ್ಕೆಗಾರ ಸಮಿತಿಗೆ ಶಿಫಾರಸ್ಸು ಮಾಡಿದ್ದು, ಈ ಎಲ್ಲಾ ಬೀಚ್‌ಗಳಿಗೂ ಡೆನ್ಮಾರ್ಕ್‌ನ ಎಫ್‌ಇಇ ಸಂಸ್ಥೆ ಬ್ಲೂ ಫ್ಲ್ಯಾಗ್ ಪ್ರಮಾಣ ಪತ್ರ ನೀಡಿದೆ.

ಪರಿಸರ ಸ್ನೇಹಿ ವಾತಾವರಣ, ಸ್ವಚ್ಛ ಬೀಚ್, ಬೀಚಿನ ಸುರಕ್ಷತೆ, ಕಡಲ ನೀರಿನ ಗುಣಮಟ್ಟ, ಪ್ರವಾಸಿಗರಿಗೆ ನೀಡುವ ಮೂಲಭೂತ ಸೌಕರ್ಯ, ಅನುಕೂಲತೆಗಳು ಸೇರಿದಂತೆ ಒಟ್ಟು 33 ಅಂಶಗಳನ್ನು ಪರಿಶೀಲಿಸಿ ಸಮಿತಿ ಈ ಮಾನ್ಯತೆ ನೀಡುತ್ತದೆ. ಈ ಮಾನ್ಯತೆ ಪಡೆದ ಬೀಚ್‌ಗಳ ಕಡಲ ತೀರದಲ್ಲಿ ನೀಲಿನ ಬಣ್ಣದ ಧ್ವಜವನ್ನು ಹಾರಿಸಲಾಗುತ್ತದೆ.

ಬೀಚ್‌ಗಳು ಪ್ರವಾಸಿಗರ ಭೇಟಿಗೆ ಅತ್ಯಂತ ಸುರಕ್ಷಿತ ತಾಣವೆಂದು ಪರಿಗಣಿಸ ಲ್ಪಡುತ್ತದೆ. ಹೀಗಾಗಿ ಇಂಥ ಬೀಚ್‌ಗಳಿಗೆ ವಿದೇಶಿ ಪ್ರವಾಸಿಗರು ಅಧಿಕ ಸಂಖ್ಯೆ ಯಲ್ಲಿ ಭೇಟಿ ನೀಡುತ್ತಾರೆ. ಇದರೊಂದಿಗೆ ಪರಿಸರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೂ ವಿಪುಲ ಅವಕಾಶಗಳು ತೆರೆದು ಕೊಳ್ಳುತ್ತವೆ.

ಪಡುಬಿದ್ರಿ ಬೀಚ್‌ನಲ್ಲಿ ಕೋಟ್ಯಾಂತರ ರೂ.ವೆಚ್ಚದಲ್ಲಿ ಪ್ರವಾಸಿಗರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಇಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದೆ.ತ್ಯಾಜ್ಯ ವಿಲೇವಾರಿಗೆ ಎಸ್‌ಎಲ್‌ಆರ್‌ಎಂ ಘಟಕವಿದೆ. ವಿಶಾಲವಾದ ಉದ್ಯಾನವನ, ಮಕ್ಕಳ ಆಟಕ್ಕೆ ಬೇಕಾದ ಎಲ್ಲಾ ಸೌಕರ್ಯ, ಶುದ್ಧ ಕುಡಿಯುವ ನೀರಿನ ಘಟಕ, ಪ್ರವಾಸಿಗರಿಗೆ ವ್ಯವಸ್ಥಿತವಾದ ಶೌಚಾಲಯ, ಬಟ್ಟೆ ಬದಲಾವಣೆಗೆ ಡ್ರೆಸ್ಸಿಂಗ್ ರೂಮ್ ಸೌಲಭ್ಯವನ್ನು ಒದಗಿಸಲಾಗಿದೆ.

ಪಡುಬಿದ್ರಿ ಬೀಚ್‌ಗೆ ಭೇಟಿ ನೀಡುವ ಪ್ರವಾಸಿಗರ ಸುರಕ್ಷತೆಗೂ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಇಲ್ಲಿ ಕೈಗೊಳ್ಳಲಾಗಿದೆ. ಇದಕ್ಕಾಗಿ ಬೀಚ್‌ನ ಎಲ್ಲಾ ಕಡೆಗಳಲ್ಲೂ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದೆ. ಭದ್ರತೆಗೆ ವಿಶೇಷ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ನಾಳೆ ಧ್ವಜಾರೋಹಣದ ಮೂಲಕ ಪಡುಬಿದ್ರೆಯ ಎಂಡ್‌ ಪಾಯಿಂಟ್ ಬೀಚ್ ಅಂತಾರಾಷ್ಟ್ರೀಯ ಬ್ಲೂ ಫ್ಲ್ಯಾಗ್ ಬೀಚ್ ಮಾನ್ಯತೆಯ್ನು ಅಧಿಕೃತವಾಗಿ ಪಡೆದುಕೊಳ್ಳಲಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X