Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ದಿಲ್ಲಿ ನಗರಪಾಲಿಕೆ: ಹೋಟೆಲ್‌ಗಳು...

ದಕ್ಷಿಣ ದಿಲ್ಲಿ ನಗರಪಾಲಿಕೆ: ಹೋಟೆಲ್‌ಗಳು ಮಾಂಸಾಹಾರದ ಮಾಹಿತಿ ನೀಡುವಂತೆ ಸೂಚಿಸುವ ಪ್ರಸ್ತಾವನೆಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ27 Dec 2020 11:07 PM IST
share

ಹೊಸದಿಲ್ಲಿ, ಡಿ.27: ದಕ್ಷಿಣ ದಿಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ರೆಸ್ಟಾರೆಂಟ್‌ಗಳು ಹಾಗೂ ಮಾಂಸದಂಗಡಿಗಳು ತಾವು ಮಾರಾಟ ಮಾಡುವ ಮಾಂಸ (ಹಲಾಲ್ ಅಥವಾ ಝಟ್ಕಾ)ದ ಬಗ್ಗೆ ಮಾಹಿತಿಯನ್ನು ಪ್ರದರ್ಶಿಸಬೇಕು ಎಂಬ ಪ್ರಸ್ತಾವನೆಯನ್ನು ನಗರಪಾಲಿಕೆಯ ಸ್ಥಾಯಿ ಸಮಿತಿ ಅನುಮೋದಿಸಿದೆ.

ದಕ್ಷಿಣ ದಿಲ್ಲಿ ನಗರಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಹಲಾಲ್ ಮಾಂಸ ಎಂದರೆ ಪ್ರವಾದಿ ಮುಹಮ್ಮದ್ ಅವರ ಬೋಧನೆಯಂತೆ, ಖುರಾನ್‌ನ ಮಾರ್ಗಸೂಚಿಯಲ್ಲಿ ತಿಳಿಸಿದ ಪ್ರಕಾರ ಸಿದ್ಧಪಡಿಸಿದ ಮಾಂಸ. ಝಟ್ಕಾ ಎಂದರೆ ಕತ್ತಿ ಅಥವಾ ಕೊಡಲಿಯ ಒಂದೇ ಏಟಿನಿಂದ ವಧಿಸಲ್ಪಟ್ಟ ಪ್ರಾಣಿಯ ಮಾಂಸವಾಗಿದೆ. ಹಲಾಲ್ ಖಾದ್ಯವನ್ನು ತಿನ್ನುವುದು ಸಿಖ್ ಮತ್ತು ಹಿಂದು ಧರ್ಮದಲ್ಲಿ ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸಾಹಾರದ ಬಗ್ಗೆ ವಿವರ ಪ್ರದರ್ಶಿಸುವಂತೆ ಎಲ್ಲಾ ಹೋಟೆಲ್ ಮತ್ತು ಮಾಂಸದಂಗಡಿಗೆ ಸೂಚಿಸಲಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಈ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ದಕ್ಷಿಣ ದಿಲ್ಲಿ ಮಹಾನಗರಪಾಲಿಕೆಗೆ ರವಾನಿಸಲಾಗುವುದು. ದಕ್ಷಿಣ ದಿಲ್ಲಿ ನಗರಪಾಲಿಕೆ ವ್ಯಾಪ್ತಿಯಡಿ ಬರುವ 104 ವಾರ್ಡ್‌ಗಳಲ್ಲಿ ಸಾವಿರಾರು ರೆಸ್ಟಾರೆಂಟ್ ಹಾಗೂ ಅಂಗಡಿಗಳಿವೆ. ಇದರಲ್ಲಿ ಸುಮಾರು 90%ದಷ್ಟು ಅಂಗಡಿ, ಹೋಟೆಲ್‌ಗಳಲ್ಲಿ ಮಾಂಸ ಮಾರಾಟ ಮಾಡಲಾಗುತ್ತಿದೆ.

ಓರ್ವ ವ್ಯಕ್ತಿ ಝಟ್ಕಾ ಮಾಂಸ ಅಪೇಕ್ಷಿಸಿದ್ದರೂ ಆತನಿಗೆ ಹಲಾಲ್ ಮಾಂಸ ಒದಗಿಸಿದರೆ ಆತನಿಗೆ ಅಸಮಾಧಾನ ಆಗಬಹುದು. ಅಲ್ಲದೆ ಮಾಂಸದ ಅಂಗಡಿಗಳು ಮತ್ತು ಹೋಟೆಲ್‌ಗಳು ಲೈಸೆನ್ಸ್ ನಿಯಮ ಉಲ್ಲಂಘಿಸುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಸ್ಥಾಯೀ ಸಮಿತಿ ಅಧ್ಯಕ್ಷ ರಾಜದೂತ್ ಗೆಹ್ಲೋಟ್ ಹೇಳಿದ್ದಾರೆ. ಇದೇ ರೀತಿಯ ಪ್ರಸ್ತಾವನೆಯನ್ನು 2018ರಲ್ಲಿ ಪೂರ್ವ ದಿಲ್ಲಿ ನಗರಪಾಲಿಕೆಯೂ ಅಂಗೀಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X