Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಲವ್‌ಜಿಹಾದ್’ ತಡೆ ಸುಗ್ರೀವಾಜ್ಞೆಗೆ...

‘ಲವ್‌ಜಿಹಾದ್’ ತಡೆ ಸುಗ್ರೀವಾಜ್ಞೆಗೆ ಮಧ್ಯಪ್ರದೇಶ ಸಂಪುಟ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ29 Dec 2020 7:59 PM IST
share
‘ಲವ್‌ಜಿಹಾದ್’ ತಡೆ ಸುಗ್ರೀವಾಜ್ಞೆಗೆ ಮಧ್ಯಪ್ರದೇಶ ಸಂಪುಟ ಅನುಮೋದನೆ

ಭೋಪಾಲ, ಡಿ.29: ‘ಲವ್‌ಜಿಹಾದ್’ ತಡೆ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸುವ ಪ್ರಸ್ತಾವನೆಗೆ ಮಧ್ಯಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಇದರೊಂದಿಗೆ ಸುಗ್ರೀವಾಜ್ಞೆಯ ಮೂಲಕ ‘ಲವ್‌ಜಿಹಾದ್’ ವಿರೋಧಿ ಕಾಯ್ದೆಯನ್ನು ಜಾರಿಗೊಳಿಸಿದ ಬಿಜೆಪಿ ಆಡಳಿತವಿರುವ ಎರಡನೇ ರಾಜ್ಯವಾಗಿ ಮಧ್ಯಪ್ರದೇಶ ಗುರುತಿಸಿಕೊಂಡಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ’, ಆಧ್ಯಾದೇಶಕ್ಕೆ ಅನುಮೋದನೆ ನೀಡಲಾಗಿದೆ. 1968ರ ಕಾನೂನಿನ ಬದಲಾಗಿ ಜಾರಿಗೆ ಬರಲಿರುವ ಹೊಸ ಕಾಯ್ದೆಯಡಿ, ಬಲವಂತದ, ವಂಚನೆಯ ಧಾರ್ಮಿಕ ಮತಾಂತರ ಮಾಡಿದರೆ 1ರಿಂದ 10 ವರ್ಷದವರೆಗೆ ಕಠಿಣ ಜೈಲುಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ.

ಸೋಮವಾರ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಮುಂದೂಡಿರುವುದರಿಂದ ಪೂರಕ ಬಜೆಟ್ ಸಹಿ ಬಾಕಿ ಉಳಿದ ಇತರ ಕೆಲವು ಸುಗ್ರೀವಾಜ್ಞೆಗಳಿಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಇವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುವುದು ಎಂದು ಗೃಹ ಸಚಿವ ಡಾ ನರೋತ್ತಮ ಮಿಶ್ರಾ ಮಾಹಿತಿ ನೀಡಿದ್ದಾರೆ. ನಮ್ಮ ಹೆಣ್ಣುಮಕ್ಕಳನ್ನು ಆಮಿಷ, ಪ್ರಭಾವ, ಬೆದರಿಕೆ ಅಥವಾ ಬಲವಂತದ ಮೂಲಕ ಮತಾಂತರಿಸಿ ವಿವಾಹವಾಗುವ ಪ್ರಕರಣಗಳಿಗೆ ಸಂಬಂಧಿಸಿದ ಈ ಪ್ರಸ್ತಾವಿತ ಕಾಯ್ದೆಗೆ ಸರಕಾರದ ಅನುಮತಿ ಶೀಘ್ರ ದೊರಕುವ ನಿರೀಕ್ಷೆಯಿದೆ. ಪ್ರಸ್ತಾವಿತ ಕಾಯ್ದೆಯಡಿಯ ಅಪರಾಧವು ‘ಸಂಜ್ಞೇಯ ಅಪರಾಧ(ದಂಡಾಧಿಕಾರಿಯ ಅನುಮತಿಯಿಲ್ಲದೆ ಪೊಲೀಸರು ಬಂಧಿಸಬಹುದಾದ ಅಪರಾಧ) ಮತ್ತು ಜಾಮೀನು ರಹಿತ ಅಪರಾಧವಾಗಲಿದೆ . ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ಮತ್ತು ಪಿತೂರಿಯನ್ನೂ ನಿಷೇಧಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ಮತಾಂತರಗೊಳ್ಳಲು ಬಯಸುವವರು 60 ದಿನ ಮುಂಚಿತವಾಗಿಯೇ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕು. ಮತಾಂತರ ಪ್ರಕ್ರಿಯೆಗೆ ನೆರವಾಗುವ ಧಾರ್ಮಿಕ ಮುಖಂಡರ ಬಗ್ಗೆಯೂ 60 ದಿನದ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದವರಿಗೆ 3ರಿಂದ 5 ವರ್ಷದವರೆಗೆ ಜೈಲುಶಿಕ್ಷೆ ಮತ್ತು 50,000 ರೂ.ದಂಡ ವಿಧಿಸಲಾಗುತ್ತದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತ ವರ್ಗದ ಸಮುದಾಯದ ಸದಸ್ಯರ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ, 2 ವರ್ಷದಿಂದ 10 ವರ್ಷದ ವರೆಗೆ ಜೈಲುಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ. ಧರ್ಮವನ್ನು ಮರೆಮಾಚುವುದು, ಸೋಗು ಹಾಕುವುದು ಮತ್ತು ಧರ್ಮದ ಬಗ್ಗೆ ತಪ್ಪಾಗಿ ನಿರೂಪಿಸುವ ಅಪರಾಧಕ್ಕೆ 3ರಿಂದ 10 ವರ್ಷದವರೆಗೆ ಜೈಲುಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುವುದು. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ 5ರಿಂದ 10 ವರ್ಷ ಜೈಲುಶಿಕ್ಷೆ, ಕನಿಷ್ಟ 1 ಲಕ್ಷ ರೂ. ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಇದೇ ರೀತಿಯ ಕಾನೂನನ್ನು ಜಾರಿಗೊಳಿಸುವ ಬಗ್ಗೆ ಕಳೆದ ತಿಂಗಳು ಉತ್ತರಪ್ರದೇಶ ಸರಕಾರ ಅಧಿಸೂಚನೆ ಹೊರಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X