Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗೀಕರಣಗೊಳಿಸಿದರೆ ಭವಿಷ್ಯ ನಿಧಿ,...

ಖಾಸಗೀಕರಣಗೊಳಿಸಿದರೆ ಭವಿಷ್ಯ ನಿಧಿ, ವೈದ್ಯಕೀಯ ಯೋಜನೆ ಸೌಲಭ್ಯ ವಿಸ್ತರಿಸಿ

ಏರ್ ಇಂಡಿಯಾ ಉದ್ಯೋಗಿಗಳ ಒಕ್ಕೂಟದಿಂದ ಕೇಂದ್ರ ಸರಕಾರಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Dec 2020 8:39 PM IST
share
ಖಾಸಗೀಕರಣಗೊಳಿಸಿದರೆ ಭವಿಷ್ಯ ನಿಧಿ, ವೈದ್ಯಕೀಯ ಯೋಜನೆ ಸೌಲಭ್ಯ ವಿಸ್ತರಿಸಿ

ಹೊಸದಿಲ್ಲಿ, ಡಿ. 29: ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯ ಹೂಡಿಕೆ ಹಿಂದೆಗೆದ ಅಥವಾ ಖಾಸಗೀಕರಣದ ಬಳಿಕವೂ ವೈದ್ಯಕೀಯ ಯೋಜನೆ, ರಜೆ ನಗದೀಕರಣ ಹಾಗೂ ಭವಿಷ್ಯ ನಿಧಿ ಸೌಲಭ್ಯಗಳನ್ನು ಮುಂದುವರಿಸುವಂತೆ ಆಗ್ರಹಿಸಿ ಏರ್ ಇಂಡಿಯಾ ಉದ್ಯೋಗಿಗಳ ಒಕ್ಕೂಟ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದೆ.

ಡಿಸೆಂಬರ್ 26ರ ದಿನಾಂಕದ ಪತ್ರದಲ್ಲಿ ಒಕ್ಕೂಟ, ಅಸ್ತಿತ್ವದಲ್ಲಿರುವ ವೈದ್ಯಕೀಯ ಯೋಜನೆ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ಉದ್ಯೋಗಿಗಳಿಗೆ ಪ್ರಯೋಜನಕರವಾಗಿತ್ತು. ಅಲ್ಲದೆ, ನಿವೃತ್ತಿಯ ಸಂದರ್ಭ ರಜೆ ನಗದೀಕರಿಸುವ ಸೌಲಭ್ಯ ದೊರಕುತ್ತಿತ್ತು ಎಂದು ಹೇಳಿದೆ.

ಹಲವು ಉದ್ಯೋಗಿಳು ತಮ್ಮ ನಿವೃತ್ತ ಜೀವನವನ್ನು ಶಿಸ್ತಿನಿಂದ ನಿರ್ವಹಿಸಲು ಈ ಸೌಲಭ್ಯ ಅವಲಂಭಿಸಿದ್ದರು. ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸಿದರೆ, ಈ ಸೌಲಭ್ಯವನ್ನು ನಿಲ್ಲಿಸುವ ಭೀತಿ ನಮಗಿದೆ. ಇದರಿಂದ ಉದ್ಯೋಗಿಗಳು ಅತಿ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಒಳಗಾಗಲಿದ್ದಾರೆ. ಆದುದರಿಂದ 2021 ಮಾರ್ಚ್ 31ರ ವರೆಗೆ ಉದ್ಯೋಗಿಗಳಿಗೆ ರಜೆ ನಗದೀಕರಣ ಭತ್ಯೆ ಪಾವತಿಸಬೇಕು ಎಂಬ ಪ್ರಸ್ತಾವವನ್ನು ಎಐಇಯು ಮುಂದಿರಿಸಲು ಬಯಸುತ್ತದೆ ಎಂದು ಪತ್ರ ಹೇಳಿದೆ.

ಈ ಹಿಂದಿನ ಏರ್ ಇಂಡಿಯಾ ಹಾಗೂ ಇಂಡಿಯನ್ ಏರ್‌ಲೈನ್ಸ್‌ನಲ್ಲಿ 1925ರ ಭವಿಷ್ಯ ನಿಧಿ ಟ್ರಸ್ಟ್ ಕಾಯ್ದೆ ಪ್ರಕಾರ ಎರಡು ಪ್ರತ್ಯೇಕ ಭವಿಷ್ಯ ನಿಧಿ ಟ್ರಸ್ಟ್ ಇತ್ತು. ಒಂದು ವೇಳೆ ಏರ್ ಇಂಡಿಯಾ ಸಂಸ್ಥೆ ಖಾಸಗೀಕರಣ ಅಥವಾ ಹೂಡಿಕೆ ಹಿಂದೆಗತಕ್ಕೆ ಒಳಗಾದರೆ, ಈ ಟ್ರಸ್ಟ್ ಅನ್ನು ಮುಂದುವರಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಪತ್ರ ಹೇಳಿದೆ. ಏರ್ ಇಂಡಿಯಾದಲ್ಲಿ ವ್ಯೂಹಾತ್ಮಕ ಹೂಡಿಕೆಗೆ ಅನೇಕ ಮಂದಿ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಕೇಂದ್ರ ಸರಕಾರ ಡಿಸೆಂಬರ್ 14ರಂದು ಹೇಳಿತ್ತು.

2019 ನವೆಂಬರ್ 1ರ ವರೆಗೆ ಏರ್ ಇಂಡಿಯಾದಲ್ಲಿ ಒಟ್ಟು 14,032 ಉದ್ಯೋಗಿಗಳು ಇದ್ದಾರೆ. ಇದರಲ್ಲಿ 9,426 ಖಾಯಂ ಉದ್ಯೋಗಿಗಳು. ಉಳಿದವರು ಗುತ್ತಿಗೆ ಉದ್ಯೋಗಿಗಳು ಎಂದು ಈ ವರ್ಷ ಜನವರಿ 20ರಲ್ಲಿ ಬಿಡುಗಡೆಗೊಳಿಸಲಾದ ಪ್ರಾಥಮಿಕ ಮಾಹಿತಿ ಜ್ಞಾಪನಾಪತ್ರ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X