Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರದ ಗುಹೆಗಳಲ್ಲಿನ ಎಲೆಮೂಗಿನ ಬಾವಲಿಗಳ...

ಕೋಲಾರದ ಗುಹೆಗಳಲ್ಲಿನ ಎಲೆಮೂಗಿನ ಬಾವಲಿಗಳ ಸಂರಕ್ಷಣೆಗೆ ಯೋಜನೆ

ವಾರ್ತಾಭಾರತಿವಾರ್ತಾಭಾರತಿ30 Dec 2020 8:41 PM IST
share
ಕೋಲಾರದ ಗುಹೆಗಳಲ್ಲಿನ ಎಲೆಮೂಗಿನ ಬಾವಲಿಗಳ ಸಂರಕ್ಷಣೆಗೆ ಯೋಜನೆ

ಬೆಂಗಳೂರು, ಡಿ.30 : ಹಲವಾರು ವರ್ಷಗಳ ಹಿಂದಿನವರೆಗೂ ಕೋಲಾರಕ್ಕೇ ವಿಶಿಷ್ಟವಾದ,ಮೂಗಿನ ಮೇಲೆ ಎಲೆಯಂತಹ ಪೊರೆಯನ್ನು ಹೊಂದಿರುವ ‘ಎಲೆಮೂಗಿನ ಬಾವಲಿಗಳು’ ಕೋಲಾರ ಜಿಲ್ಲೆಯ ಹನುಮನಹಳ್ಳಿಯ ಎರಡು ಗುಹೆಗಳಲ್ಲಿ ಮಾತ್ರ ಕಂಡುಬರುತ್ತಿದ್ದವು. ಆದರೆ ಈಗ ಒಂದು ಗುಹೆಯಲ್ಲಿಯ ಬಾವಲಿಗಳು ಮಾತ್ರ ಉಳಿದುಕೊಂಡಿದ್ದು,ಇನ್ನೊಂದರಲ್ಲಿದ್ದ ಬಾವಲಿಗಳು ಸಂಪೂರ್ಣವಾಗಿ ನಿರ್ನಾಮಗೊಂಡಿವೆ. ಈ ವಿಶಿಷ್ಟ ಬಾವಲಿಗಳ ಅವನತಿಗೆ ಕಾರಣಗಳು ಇನ್ನೂ ಗೊತ್ತಾಗಿಲ್ಲ. ಇದೀಗ ಕರ್ನಾಟಕ ಅರಣ್ಯ ಇಲಾಖೆಯು ಭಾರತೀಯ ಬಾವಲಿ ಸಂರಕ್ಷಣಾ ಟ್ರಸ್ಟ್ (ಬಿಸಿಐಟಿ)ನ ಸಹಭಾಗಿತ್ವದಲ್ಲಿ ಈ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವ,ಉಳಿದಿರುವ ಎಲೆಮೂಗಿನ ಬಾವಲಿಗಳನ್ನು ಅವನತಿಯಿಂದ ರಕ್ಷಿಸಲು ಸಮರೋಪಾದಿಯಲ್ಲಿ ಪ್ರಯತ್ನಗಳನ್ನು ನಡೆಸುತ್ತಿದೆ.

ಬಾವಲಿಗಳ ಸಂರಕ್ಷಣೆಗಾಗಿ ಯೋಜನೆಯೊಂದನ್ನು ರೂಪಿಸುವ ಹೊಣೆಯನ್ನು ಬಿಸಿಐಟಿಗೆ ವಹಿಸಲಾಗಿದೆ,ಇದರ ಜೊತೆಗೆ ಈ ಜಾತಿಯ ಬಾವಲಿಗಳ ಕುರಿತು ಹೆಚ್ಚಿನ ಸಂಶೋಧನೆ ನಡೆಸಲು ಅನುದಾನವನ್ನೂ ಅದಕ್ಕೆ ಸರಕಾರವು ಮಂಜೂರು ಮಾಡಿದೆ. ಯೋಜನೆಯನ್ನು ಕೈಗೆತ್ತಿಕೊಳ್ಳಲು ಹ್ಯಾಬಿಟಾಸ್ ಟ್ರಸ್ಟ್‌ನಿಂದ ಆರ್ಥಿಕ ನೆರವೂ ಬಿಸಿಐಟಿಗೆ ಲಭಿಸಿದೆ.

2014ರಲ್ಲಿ ಉಸ್ಮಾನಿಯಾ ವಿವಿಯು ಸಂಶೋಧನೆಯೊಂದನ್ನು ನಡೆಸಿದ ಬಳಿಕವಷ್ಟೇ ಒಂದು ಗುಹೆಯಲ್ಲಿನ ಬಾವಲಿಗಳ ಸಂತತಿ ನಶಿಸುತ್ತಿದೆ ಎಂಬ ಕಳವಳಕಾರಿ ವಿಷಯ ಸರಕಾರಕ್ಕೆ ಮೊದಲ ಬಾರಿಗೆ ಗೊತ್ತಾಗಿತ್ತು. ಸರಕಾರವು ತಕ್ಷಣ ಗುಹೆಗಳ ಸುತ್ತಲಿನ 30 ಎಕರೆ ಭೂಮಿಯನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸಿ ಅಧಿಸೂಚನೆಯನ್ನು ಹೊರಡಿಸಿತ್ತು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಮೋಹನ ರಾಜ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕೋಲಾರ ಎಲೆಮೂಗಿನ ಬಾವಲಿಗಳು ಕರ್ನಾಟಕದ ವಿಶಿಷ್ಟ ಪ್ರಭೇದವಾಗಿದ್ದು,ಇದು ನಮಗೆ ಹೆಮ್ಮೆಯ ವಿಷಯವಾಗಿದೆ. ಹುಲಿಯಂತಹ ದೊಡ್ಡ ಪ್ರಾಣಿಗಳ ಸಂರಕ್ಷಣೆಯ ಬಗ್ಗೆ ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ,ಆದರೆ ಕರ್ನಾಟಕದಲ್ಲಿ ನಾವು ನಿರಂತರವಾಗಿ ಸಣ್ಣ,ಹೆಚ್ಚು ಗೊತ್ತಿರದ ಜಾತಿಗಳ ಪ್ರಾಣಿಗಳನ್ನು ಸಂರಕ್ಷಣೆಗಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಮತ್ತು ಅವುಗಳ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದ ರಾಜ್,ಕೋಲಾರದ ಗುಹೆಗಳ ಸುತ್ತಲಿನ ಪ್ರದೇಶವು ಅಧಿಸೂಚಿತವಾಗಿದ್ದು,ನೂತನ ಮೂಲಸೌಕರ್ಯ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X