Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಚದ ಆರೋಪ: ಸ್ಯಾಮ್‌ಸಂಗ್ ವರಿಷ್ಠ ಲೀ ಜೇ...

ಲಂಚದ ಆರೋಪ: ಸ್ಯಾಮ್‌ಸಂಗ್ ವರಿಷ್ಠ ಲೀ ಜೇ ಯೊಂಗ್‌ಗೆ 9 ವರ್ಷ ಜೈಲು ಶಿಕ್ಷೆ ಕೋರಿದ ಪ್ರಾಸಿಕ್ಯೂಶನ್

ವಾರ್ತಾಭಾರತಿವಾರ್ತಾಭಾರತಿ30 Dec 2020 11:23 PM IST
share
ಲಂಚದ ಆರೋಪ: ಸ್ಯಾಮ್‌ಸಂಗ್ ವರಿಷ್ಠ ಲೀ ಜೇ ಯೊಂಗ್‌ಗೆ 9 ವರ್ಷ ಜೈಲು ಶಿಕ್ಷೆ ಕೋರಿದ ಪ್ರಾಸಿಕ್ಯೂಶನ್

ಸೋಲ್,ಡಿ.30: ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿ ಸ್ಯಾಮ್‌ಸಂಗ್ ಕಂಪೆನಿಯ ತಥಾಕಥಿತ ವರಿಷ್ಠ ಲೀ ಜೇ-ಯೊಂಗ್‌ಗೆ 9 ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕೆಂದು ಕೋರಿ ಪ್ರಾಸಿಕ್ಯೂಟರ್‌ಗಳು ಬುಧವಾರ ಉಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

2016ರಲ್ಲಿ ಬಯಲಾದ ಭ್ರಷ್ಟಾಚಾರ ಪ್ರಕರಣವು ದಕ್ಷಿಣ ಕೊರಿಯದಲ್ಲಿ ವ್ಯಾಪಕವಾಗಿ ಪ್ರತಿಭಟನೆಯನ್ನು ಭುಗಿಲೆಬ್ಬಿಸಿತ್ತು ಹಾಗೂ ರಾಷ್ಟ್ರಾಧ್ಯಕ್ಷರ ಪದತ್ಯಾಗಕ್ಕೆ ಕಾರಣವಾಗಿತ್ತು.

     ವಿಶೇಷ ಪ್ರಾಸಿಕ್ಯೂಟರ್ ಪಾರ್ಕ್ ಯಂಗ್-ಸೂ ಅವರು ಲೀ ಅವರಿಗೆ 9 ವರ್ಷ ಜೈಲುವಾಸ ವಿಧಿಸಬೇಕೆಂದು ಕೋರಿ, ಸೋಲ್‌ನ ಹೈಕೋರ್ಟ್‌ಗೆ ಬುಧವಾರ ಮನವಿ ಮಾಡಿದರು. ತನ್ನ ಪ್ರತಿಸ್ಪರ್ಧಿ ಕಂಪೆನಿಗಳಿಗಿಂತ ಹೆಚ್ಚು ಸವಲತ್ತುಗಳನ್ನು ಸರಕಾರದಿಂದ ಪಡೆಯಲು ಸ್ಯಾಮ್‌ಸಂಗ್ ಸಂಸ್ಥೆಯು ಸಕ್ರಿಯವಾಗಿ ವಶೀಲಿ ನಡೆಸಿದೆ. ದೇಶದಲ್ಲಿ ಭ್ರಷ್ಟಾಚಾರವನ್ನು ಮೂಲೋತ್ಪಾಟನೆ ಮಾಡುವ ಪ್ರಯತ್ನಗಳಿಗೆ ಸ್ಯಾಮ್‌ಸಂಗ್ ಪ್ರಕರಣವು ನಿದರ್ಶನವಾಗಬೇಕೆಂದು ಹೇಳಿದರು.

    2017ರಲ್ಲಿ ದಕ್ಷಿಣ ಕೊರಿಯದ ಆಗಿನ ಅಧ್ಯಕ್ಷೆ ಪಾರ್ಕ್ ಗ್ಯೂ ಹೆ ಹಾಗೂ ಆಕೆಯ ನಿಕಟವರ್ತಿಯೊಬ್ಬರಿಗೆ 7 ದಶಲಕ್ಷ ಡಾಲರ್ ಲಂಚ ನೀಡಿದ ಆರೋಪದಲ್ಲಿ ಸ್ಯಾಮ್‌ಸಂಗ್‌ನ ಉಪಚೇರ್‌ಮನ್ ಆಗಿದ್ದ 52 ವರ್ಷ ವಯಸ್ಸಿನ ಲೀ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿತ್ತು. ಸ್ಯಾಮ್‌ಸಂಗ್ ಕಂಪೆನಿಯ ಮೇಲಿನ ತನ್ನ ನಿಯಂತ್ರಣವನ್ನು ಬಲಪಡಿಸುವುದಕ್ಕೆ ಸರಕಾರದ ಬೆಂಬಲವನ್ನು ಬಯಸಿ ಲೀ ಅವರು ಲಂಚ ನೀಡಿದ್ದಾರೆನ್ನಲಾಗಿದೆ. ಆದರೆ 2018ರಲ್ಲಿ ಸೋಲ್ ಹೈಕೋರ್ಟ್ ಅವರ ಜೈಲು ಶಿಕ್ಷೆಯ ಅವಧಿಯನ್ನು ಎರಡೂವರೆ ವರ್ಷಗಳಿಗೆ ಇಳಿಸಿತ್ತು.

   ಕಳೆದ ವರ್ಷ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಮರಳಿಸಿತು ಹಾಗೂ ಲೀ ಅವರ ಲಂಚದ ಮೊತ್ತವನ್ನು ಕಡಿಮೆಯಾಗಿ ತೋರಿಸಲಾಗಿದೆಯೆಂದು ಹೇಳಿತ್ತು.

   ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶೇರು ದರದಲ್ಲಿ ಅಕ್ರಮ ನಡೆಸಿದ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಲೀ ಅವರನ್ನು ದೋಷಿಯೆಂದು ಪರಿಗಣಿಸಬೇಕೆಂದು ಕೋರಿ ಪ್ರಾಸಿಕ್ಯೂಟರ್‌ಗಳು ಕೋರ್ಟ್‌ಗೆ ಮನವಿ ಮಾಡಿದ್ದರು. 2015ರಲ್ಲಿ ಸ್ಯಾಮ್‌ಸಂಗ್‌ನ ಎರಡು ಸಹ ಸಂಸ್ಥೆಗಳ ವಿಲೀನಗೊಳಿಸಿದ ಹಗರಣಕ್ಕೆ ಸಂಬಂಧಿಸಿ ಲೀ ವಿರುದ್ಧ ವಿಶ್ವಾಸಭಂಗ ಹಾಗೂ ಲೆಕ್ಕಪತ್ರ ಅವ್ಯವಹಾರದ ಆರೋಪವನ್ನು ಹೊರಿಸಲಾಗಿತ್ತು. ಸ್ಯಾಮ್‌ಸಂಗ್ ಇಲೆಕ್ಟ್ರಾನಿಕ್ಸ್ ಮೇಲೆ ತನ್ನ ನಿಯಂತ್ರಣವನ್ನು ಸಾಧಿಸುವುದಕ್ಕೆ ನೆರವಾಗಲು ಲೀ ಅವರು ಅಕ್ರಮವಾಗಿ ಈ ವಿಲೀನವನ್ನು ಏರ್ಪಡಿಸಿದ್ದರೆನ್ನಲಾಗಿದೆ.

ಆದರೆ ಲೀ ಅವರ ವಕೀಲರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. 2015ರಲ್ಲಿ ನಡೆದಿರುವ ಸ್ಯಾಮ್‌ಸಂಗ್ ಸಹಕಂಪೆನಿಗಳ ವಿಲೀನವು ಸಾಮಾನ್ಯ ಉದ್ಯಮ ಚಟುವಟಿಕೆಯಾಗಿತ್ತೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X