Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ಮದ್ಯಪಾನ ಮಾಡುವ ವಯಸ್ಸನ್ನು...

ದಿಲ್ಲಿ: ಮದ್ಯಪಾನ ಮಾಡುವ ವಯಸ್ಸನ್ನು 21ಕ್ಕೆ ಇಳಿಸಲು ಸಮಿತಿಯ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ30 Dec 2020 11:38 PM IST
share

ಹೊಸದಿಲ್ಲಿ, ಡಿ.30: ರಾಷ್ಟ್ರೀಯ ರಾಜಧಾನಿ ದಿಲ್ಲಿಯಲ್ಲಿ ಮದ್ಯಪಾನ ಮಾಡುವ ಕಾನೂನುಬದ್ಧ ವಯಸ್ಸನ್ನು 25ರಿಂದ 21ಕ್ಕೆ ಇಳಿಸಲು , ಪಾನ ನಿರೋಧ ದಿನವನ್ನು ಕಡಿಮೆಗೊಳಿಸಲು ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮತ್ತು ಬಿಯರ್ ಮಾರಾಟಕ್ಕೆ ಲೈಸೆನ್ಸ್ ನೀಡಲು ದಿಲ್ಲಿ ಸರಕಾರ ನೇಮಿಸಿದ ಸಮಿತಿ ಶಿಫಾರಸು ಮಾಡಿರುವುದಾಗಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಸ್ವಾತಂತ್ರ ದಿನಾಚರಣೆ(ಆಗಸ್ಟ್ 15), ಗಣರಾಜ್ಯೋತ್ಸವ (ಜನವರಿ 26) ಮತ್ತು ಗಾಂಧಿ ಜಯಂತಿ(ಅಕ್ಟೋಬರ್ 2) ರಂದು ಪಾನನಿರೋಧ ದಿನ ಎಂದು ನಿಗದಿಗೊಳಿಸಲು, ಸರಕಾರ ನಡೆಸುವ ಮದ್ಯದಂಗಡಿಗಳ ಲೈಸೆನ್ಸನ್ನು ರಾಜ್ಯಾದ್ಯಂತ ಸಮಾನವಾಗಿ ಹಂಚಿಕೆ ಮಾಡಲು ಸಮಿತಿ ಸಲಹೆ ನೀಡಿದೆ. ಅಬಕಾರಿ ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳು, ಮದ್ಯದಂಗಡಿಯವರು ತೆರಿಗೆ ತಪ್ಪಿಸುವುದನ್ನು ತಡೆಯುವ ಕ್ರಮಗಳ ಬಗ್ಗೆ ಸಲಹೆ ನೀಡಲು ಸಮಿತಿಯನ್ನು ರಚಿಸಲಾಗಿತ್ತು. ದಿಲ್ಲಿ ರಾಜ್ಯ ನಾಗರಿಕ ಸರಬರಾಜು ನಿಗಮ, ದಿಲ್ಲಿ ಪ್ರವಾಸೋದ್ಯಮ ನಿಗಮ, ದಿಲ್ಲಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಿತ ಸರಕಾರಿ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುವ 864 ಸಾರಾಯಿ ಅಂಗಡಿಗಳು ದಿಲ್ಲಿಯಲ್ಲಿವೆ. ರಾಜ್ಯದ ಎಲ್ಲಾ 272 ನಗರಪಾಲಿಕೆ ವಾರ್ಡ್‌ಗಳಲ್ಲಿ, ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನನಿಲ್ದಾಣ ಮತ್ತು ಹೊಸದಿಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಈ ಅಂಗಡಿಗಳನ್ನು ಸಮಾನವಾಗಿ ಹಂಚಿಕೆ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ. ಈಗ ದಿಲ್ಲಿಯಲ್ಲಿ 125 ಕಿರಾಣಿ ಅಂಗಡಿಗಳು ಎಲ್12 ಮತ್ತು ಎಲ್12-ಎಫ್ ಅಬಕಾರಿ ಲೈಸೆನ್ಸ್‌ನಡಿ ಬಿಯರ್ ಮತ್ತು ವೈನ್ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಲೈಸೆನ್ಸ್‌ನ ನಿಯಮದ ಪ್ರಕಾರ, ಕಿರಾಣಿ ಅಂಗಡಿಯ ಒಟ್ಟು ವ್ಯಾಪ್ತಿಯ 10%  ಶೇ ಸ್ಥಳದಲ್ಲಿ ಮಾತ್ರ ಬಿಯರ್ ಮತ್ತು ವೈನ್‌ಗಳನ್ನು ದಾಸ್ತಾನು ಇಡಬಹುದಾಗಿದೆ. ಈ ಶಿಫಾರಸಿನ ಬಗ್ಗೆ ಸಾರ್ವಜನಿಕರ ಸಲಹೆ, ಟಿಪ್ಪಣಿಯನ್ನು ಪಡೆದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X