Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2020-21ನೆ ಶೈಕ್ಷಣಿಕ ಸಾಲಿನ ಶಾಲಾ ತರಗತಿ...

2020-21ನೆ ಶೈಕ್ಷಣಿಕ ಸಾಲಿನ ಶಾಲಾ ತರಗತಿ ನಾಳೆಯಿಂದ ಆರಂಭ: ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ31 Dec 2020 5:16 PM IST
share
2020-21ನೆ ಶೈಕ್ಷಣಿಕ ಸಾಲಿನ ಶಾಲಾ ತರಗತಿ ನಾಳೆಯಿಂದ ಆರಂಭ: ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು, ಡಿ.31: ಕೋವಿಡ್ ಆತಂಕದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಮಾಡಲಾಗಿದ್ದ 2020-21ನೆ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳನ್ನು ನಾಳೆಯಿಂದ(ಜ.1) ಆರಂಭಿಸಲಾಗುತ್ತಿದೆ.

ಶಾಲೆಗಳನ್ನು ಪ್ರಾರಂಭಿಸಬೇಕೆ, ಬೇಡವೇ ಎಂಬ ಗೊಂದಲ, ಚರ್ಚೆಗಳ ನಂತರ ತಜ್ಞ ವೈದ್ಯ ಸಮಿತಿಯ ಸಲಹೆ ಹಾಗೂ ಮಾರ್ಗಸೂಚಿ ಮೇರೆಗೆ ನಾಳೆಯಿಂದ ಎಸೆಸೆಲ್ಸಿ (10) ಹಾಗೂ ದ್ವಿತಿಯ ಪಿಯುಸಿ(12ನೆ) ತರಗತಿಗಳು ಆರಂಭಗೊಳ್ಳುತ್ತಿದೆ. ಹಾಗೂ 6ರಿಂದ 9ನೆ ತರಗತಿಗಳಿಗೆ ವಿದ್ಯಾಗಮ ಕಾರ್ಯಕ್ರಮ ನಡೆಯಲಿದೆ.

ಶಾಲೆಗಳು ಆರಂಭವಾಗುತ್ತಿರುವುದರಿಂದ ಪೋಷಕರಿಗೆ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಶಾಲಾ ಅವಧಿಯಲ್ಲಿ, ತರಗತಿಯ ಒಳಗೆ, ತರಗತಿಯ ಹೊರಗೆ ವಿದ್ಯಾರ್ಥಿಗಳು, ಶಿಕ್ಷಕರು ಕಡ್ಡಾಯವಾಗಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ ಪ್ರಕಟಿಸಿದೆ.

ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು: ಶಾಲಾ ಮುಖ್ಯಸ್ಥರು- ಶಾಲೆ ಮತ್ತು ಶಾಲಾ ಆವರಣದ ಸ್ವಚ್ಚತೆಗೆ ಜಾಗ್ರತೆ ವಹಿಸವುದು. ತರಗತಿ ಕೋಣೆ, ಪ್ರಯೋಗಾಲಯ, ಗ್ರಂಥಾಲಯ, ಕ್ರೀಡಾ ಕೊಠಡಿ, ದಾಸ್ತಾನು ಕೊಠಡಿ, ಶೌಚಾಲಯ ಸೇರಿದಂತೆ ಮತ್ತಿತರ ಜಾಗಗಳ ಸ್ವಚ್ಚತೆಯ ಕುರಿತು ಖಾತರಿ ಪಡಿಸಿಕೊಳ್ಳುವುದು.

-ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಪೋಷಕರ ಲಿಖಿತ ಒಪ್ಪಿಗೆ ಪಡೆಯುವುದು, ನಿಗದಿತ ದೈಹಿಕ ಅಂತರದೊಂದಿಗೆ ಕಲಿಸುವುದು, ಎಸ್‍ಡಿಎಂಸಿ, ಆಡಳಿತ ಮಂಡಳಿ, ಸಮುದಾಯ, ಇತರೆ ಇಲಾಖೆಗಳ ಸಮನ್ವಯದೊಂದಿಗೆ ಸುರಕ್ಷಿತವಾಗಿ ಶಾಲೆ, ವಿದ್ಯಾಗಮ ನಡೆಸುವುದು. ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು.

-ಪ್ರತಿ ಶಾಲೆಯಲ್ಲಿ ಕೋವಿಡ್-19 ಲಕ್ಷಣ ಕಂಡುಬರುವ ವಿದ್ಯಾರ್ಥಿ, ಸಿಬ್ಬಂದಿ ನಿರ್ವಹಣೆಗಾಗಿ ಪ್ರತ್ಯೇಕ ಕೊಠಡಿ ನಿರ್ವಹಣೆ.

ಪೋಷಕರ ಜವಾಬ್ದಾರಿಗಳು: ನಿಯಮಿತವಾಗಿ ಮಗುವಿನ ಆರೋಗ್ಯವನ್ನು ಗಮನಿಸಿ, ಅವಶ್ಯವಿದ್ದಲ್ಲಿ ವೈದ್ಯಕೀಯ ಸಲಹೆ ಪಡೆಯಿರಿ. ಮನೆಯಲ್ಲಿ ಉತ್ತಮ ನೈರ್ಮಲ್ಯ, ಶುಚಿತ್ವದ ಅಭ್ಯಾಸಗಳನ್ನು ರೂಢಿ ಮಾಡಿಸಿ. ಶಾಲೆಯೊಂದಿಗೆ ಉತ್ತಮ ಸಹಕಾರ ನೀಡುವುದು. ಮಗುವನ್ನು ಮಾಸ್ಕ್ ನೊಂದಿಗೆ ಶಾಲೆಗೆ ಕಳುಹಿಸುವುದು. ಮನೆಯಿಂದಲೇ ಶುದ್ಧ ಕುಡಿಯುವ ನೀರನ್ನು ಕಳುಹಿಸುವುದು ಅಪೇಕ್ಷಣೀಯ. ಶಾಲೆಯ ಸುರಕ್ಷತಾ ಪ್ರಯತ್ನಗಳನ್ನು ಬಲಪಡಿಸಲು ಶಾಲೆಗೆ ಬೆಂಬಲವನ್ನು ನೀಡುವುದು.

ವಿದ್ಯಾರ್ಥಿಗಳ ಜವಾಬ್ದಾರಿಗಳು: ಮಾಸ್ಕ್ ನೊಂದಿಗೆ ಶಾಲೆಗೆ ಹಾಜರಾಗಿ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಶಾಲೆಗೆ ಬರುವಾಗ ಮತ್ತು ಶಾಲೆಯಿಂದ ಮನೆಗೆ ಹೋಗುವಾಗ ಕಡ್ಡಾಯವಾಗಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆಯುವುದು. ಬೇರೆಯವರೊಂದಿಗೆ ಮಾಸ್ಕ್, ಲೋಟ, ಊಟದ ಬಾಕ್ಸ್ ಗಳನ್ನು, ಆಹಾರ ಅಥವಾ ಪಾನೀಯಗಳನ್ನು ಹಾಗೂ ಪೆನ್ನು, ಪೆನ್ಸಿಲ್, ಪುಸ್ತಕಗಳನ್ನು ಹಂಚಿಕೊಳ್ಳದಿರುವುದು. ವಿದ್ಯಾರ್ಥಿಗಳಿಗೆ ಅನಾರೋಗ್ಯವಿದ್ದರೆ, ಪೋಷಕರಿಗೆ ಹೇಳಿ ಮನೆಯಲ್ಲಿಯೇ ಉಳಿದುಕೊಳ್ಳುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X