Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರಿನ 1893 ಗ್ರಾ.ಪಂ ಸ್ಥಾನಗಳ...

ಚಿಕ್ಕಮಗಳೂರಿನ 1893 ಗ್ರಾ.ಪಂ ಸ್ಥಾನಗಳ ಫಲಿತಾಂಶ ಪ್ರಕಟ; ಬಿಜೆಪಿ ಬೆಂಬಲಿತ ಸದಸ್ಯರ ಮೇಲುಗೈ

107 ಸ್ಥಾನಗಳಿಗೆ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ31 Dec 2020 6:52 PM IST
share
ಚಿಕ್ಕಮಗಳೂರಿನ 1893 ಗ್ರಾ.ಪಂ ಸ್ಥಾನಗಳ ಫಲಿತಾಂಶ ಪ್ರಕಟ; ಬಿಜೆಪಿ ಬೆಂಬಲಿತ ಸದಸ್ಯರ ಮೇಲುಗೈ

ಚಿಕ್ಕಮಗಳೂರು, ಡಿ.31: ಜಿಲ್ಲೆಯ 8 ತಾಲೂಕುಗಳ ವ್ಯಾಪ್ತಿಯಲ್ಲಿ ಡಿ.22ರಂದು 194 ಗ್ರಾಮ ಪಂಚಾಯತ್‍ಗಳಿಗೆ ಚುನಾವಣೆ ನಡೆದಿದ್ದು, ಡಿ.30ರಂದು ಬುಧವಾರ ಬೆಳಗ್ಗೆ 7ಕ್ಕೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆ ರಾತ್ರಿ 10ರವರೆಗೆ ನಡೆದಿದೆ. 194 ಗ್ರಾಮ ಪಂಚಾಯತ್‍ಗಳ ಚುನಾವಣೆಯ ಮತ ಎಣಿಕೆಯಲ್ಲಿ 1893 ಸ್ಥಾನಗಳ ಫಲಿತಾಂಶ ಹೊರಬಿದ್ದಿದೆ. 107 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಬುಧವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿತ 1,063 ಸದಸ್ಯರು ಗೆಲುವು ಕಂಡಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ 600 ಸದಸ್ಯರು ಗೆಲುವು ಕಂಡಿದ್ದಾರೆಂದು ಕಾಂಗ್ರೆಸ್ ಪಕ್ಷದ ಮುಖಂಡರು ಹೇಳಿದ್ದರೆ, ಜೆಡಿಎಸ್ ಬೆಂಬಲಿತ 199 ಸದಸ್ಯರು ಗ್ರಾಪಂ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಉಳಿದಂತೆ ಎಸ್‍ಡಿಪಿಐ, ಸಿಪಿಐ, ಬಿಎಸ್ಪಿ ಸೇರಿದಂತೆ ಇತರ 134 ಸದಸ್ಯರು ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯತ್‍ಗಳಿಗೆ ಆಯ್ಕೆಯಾಗಿದ್ದಾರೆಂದು ಹೇಳಲಾಗುತ್ತಿದೆ.

ಶೃಂಗೇರಿ ತಾಲೂಕಿನ 9 ಗ್ರಾಪಂ ವ್ಯಾಪ್ತಿಯ 86 ಸ್ಥಾನಗಳ ಪೈಕಿ ಅವಿರೋಧ ಆಯ್ಕೆಯಾದ ಸದಸ್ಯರು ಸೇರಿ 51 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರೆ, 31 ಕಾಂಗ್ರೆಸ್ ಬೆಂಬಲಿತರು ಹಾಗೂ 4 ಇತರ ಸದಸ್ಯರು ಆಯ್ಕೆಯಾಗಿದ್ದಾರೆ. ನರಸಿಂಹರಾಜಪುರ ತಾಲೂಕಿನ 11 ಗ್ರಾಪಂ ಪೈಕಿ ಅವಿರೋಧ ಆಯ್ಕೆ ಸೇರಿದಂತೆ 126 ಸದಸ್ಯರ ಪೈಕಿ 60 ಬಿಜೆಪಿ ಬೆಂಬಲಿತ, 63 ಕಾಂಗ್ರೆಸ್ ಬೆಂಬಲಿತ, ಇತರ 3 ಸದಸ್ಯರು ಆಯ್ಕೆಯಾಗಿದ್ದಾರೆ. ಕೊಪ್ಪ ತಾಲೂಕಿನ 21 ಗ್ರಾಪಂ ಪೈಕಿ ಅವಿರೋಧ ಆಯ್ಕೆ ಸೇರಿದಂತೆ 191 ಸದಸ್ಯರ ಪೈಕಿ 114 ಬಿಜೆಪಿ ಬೆಂಬಲಿತ, 73 ಕಾಂಗ್ರೆಸ್ ಬೆಂಬಲಿತ ಹಾಗೂ ಇತರ 4 ಸದಸ್ಯರು ಆಯ್ಕೆಯಾಗಿದ್ದಾರೆಂದು ತಿಳಿದು ಬಂದಿದೆ.

ತರೀಕೆರೆ ತಾಲೂಕಿನ 25 ಗ್ರಾಪಂ ಪೈಕಿ ಅವಿರೋಧ ಆಯ್ಕೆ ಸೇರಿದಂತೆ 273 ಸದಸ್ಯರ ಪೈಕಿ 123 ಬಿಜೆಪಿ ಬೆಂಬಲಿತ, 105 ಕಾಂಗ್ರೆಸ್ ಬೆಂಬಲಿತ, 5 ಜೆಡಿಎಸ್ ಬೆಂಬಲಿತ ಹಾಗೂ 4 ಇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂದು ಅಂದಾಜಿಸಲಾಗಿದೆ. ಕಡೂರು ತಾಲೂಕಿನ 49 ಗ್ರಾಪಂ ಪೈಕಿ ಅವಿರೋಧ ಆಯ್ಕೆ ಸೇರಿದಂತೆ 494 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ 252, ಕಾಂಗ್ರೆಸ್ ಬೆಂಬಲಿತ 131, ಜೆಡಿಎಸ್ ಬೆಂಬಲಿತ 102, ಇತರ 9 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂದು ಅಂದಾಜಿಸಲಾಗಿದೆ.

ಮೂಡಿಗೆರೆ ತಾಲೂಕಿನ 22 ಗ್ರಾಪಂ ಅವಿರೋಧ ಆಯ್ಕೆ ಸೇರಿದಂತೆ 248 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ 116, ಕಾಂಗ್ರೆಸ್ ಬೆಂಬಲಿತ 61, ಜೆಡಿಎಸ್ ಬೆಂಬಲಿತ 50 ಹಾಗೂ ಇತರ 21 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂದು ಅಂದಾಜು ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ 33 ಗ್ರಾಪಂ ಪೈಕಿ ಅವಿರೋಧ ಆಯ್ಕೆ ಸೇರಿದಂತೆ 363 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ 208, ಕಾಂಗ್ರೆಸ್ ಬೆಂಬಲಿತ 73, ಜೆಡಿಎಸ್ ಬೆಂಬಲಿತ 40, ಎಸ್‍ಡಿಪಿಐ ಬೆಂಬಲಿತ 1 ಹಾಗೂ ಇತರ 40 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಅಜ್ಜಂಪುರ ತಾಲೂಕಿನ 24 ಗ್ರಾಪಂ ವ್ಯಾಪ್ತಿಯಲ್ಲಿ ಅವಿರೋಧವಾಗಿ ಆಯ್ಕೆ ಸೇರಿದಂತೆ 223 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ 139, ಕಾಂಗ್ರೆಸ್ ಬೆಂಬಲಿತ 69, ಜೆಡಿಎಸ್ ಬೆಂಬಲಿತ 2 ಹಾಗೂ ಇತರ 12 ಸದಸ್ಯರು ಆಯ್ಕೆಯಾಗಿದ್ದಾರೆಂದು ಆಯಾ ಪಕ್ಷಗಳ ಮುಖಂಡರು ಅಂದಾಜಿಸಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 226 ಗ್ರಾಮ ಪಂಚಾಯತ್‍ಗಳಿದ್ದು, ಈ ಪೈಕಿ 17 ಗ್ರಾಮಪಂಚಾಯತ್‍ಗಳಿಗೆ ಅವಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಹಾಗೂ 15 ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರದ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ನಡೆದಿಲ್ಲ. ಉಳಿದ 194 ಗ್ರಾಮ ಪಂಚಾಯತ್‍ಗಳ 1893 ಸ್ಥಾನಗಳಿಗೆ 5290 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು,  ಡಿ.22ರಂದು ಚುನಾವಣೆ ನಡೆದಿತ್ತು. ಡಿ.30ರಂದು 1893 ಸ್ಥಾನಗಳ ಫಲಿತಾಂಶ ಹೊರ ಬಿದ್ದಿದ್ದು, 107 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X