Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆನ್‌ಲೈನ್ ತರಗತಿಗಾಗಿ ವಿದ್ಯಾರ್ಥಿಗಳ...

ಆನ್‌ಲೈನ್ ತರಗತಿಗಾಗಿ ವಿದ್ಯಾರ್ಥಿಗಳ ಪರದಾಟ: ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದ ದುಃಸ್ಥಿತಿ ಕೇಳುವವರಿಲ್ಲ!

ಬಳ್ಳಕದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ

ಇಬ್ರಾಹಿಂ ಖಲೀಲ್ ಬನ್ನೂರುಇಬ್ರಾಹಿಂ ಖಲೀಲ್ ಬನ್ನೂರು11 Oct 2021 3:39 PM IST
share
ಆನ್‌ಲೈನ್ ತರಗತಿಗಾಗಿ ವಿದ್ಯಾರ್ಥಿಗಳ ಪರದಾಟ: ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದ ದುಃಸ್ಥಿತಿ ಕೇಳುವವರಿಲ್ಲ!

ಮಂಗಳೂರು, ಅ.11: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಬಳ್ಳಕ, ಮೊಗ್ರ ಸುತ್ತ ಮುತ್ತಲಿನ ಪ್ರದೇಶ ಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿದ್ದು, ಪ್ರಸಕ್ತ ಆನ್‌ಲೈನ್ ತರಗತಿಗಳು ನಡೆ ಯುತ್ತಿರುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಅದೇರೀತಿ ರಸ್ತೆ ಅಪ ಘಾತದ ವೇಳೆ, ತುರ್ತಾಗಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಬೇಕಾದ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ಗೆ ಕರೆ ಮಾಡಲು ಊರಿಡೀ ಓಡಾಡಬೇಕಾದ ಪರಿಸ್ಥಿತಿ ಇದ್ದು, ಇಂಟರ್‌ನೆಟ್ ಸೌಲಭ್ಯ ಸಿಗಬೇಕಿದ್ದರೆ ಗುಡ್ಡದ ಮೇಲೇರುವುದು ಅನಿವಾರ್ಯವಾಗಿದೆ.

ದೇಶ ಡಿಜಿಟಲ್‌ಮಯವಾಗುತ್ತಿದೆ. ಆದರೆ ಬಳ್ಳಕ, ಮೊಗ್ರ ಗ್ರಾಮಸ್ಥರು ಮೊಬೈಲ್ ನೆಟ್‌ವರ್ಕ್‌ಗೊಸ್ಕರ ಊರಿನ ಯಾವುದೋ ಎತ್ತರದ ಪ್ರದೇಶ, ಗುಡ್ಡವನ್ನು ಏರಬೇಕಿದೆ. ಇಲ್ಲಿನ ನೆಟ್‌ವರ್ಕ್ ಸಮಸ್ಯೆ ಬಗ್ಗೆ ಸ್ಥಳೀಯ ಅಧಿಕಾರಿ, ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನ ದೊರೆತಿಲ್ಲ ಎಂದು ಇಲ್ಲಿನ ನಾಗರಿಕರು ಬೇಸರಿಸುತ್ತಾರೆ. ಈ ಪ್ರದೇಶ ವ್ಯಾಪ್ತಿಯಲ್ಲಿ 80ರಷ್ಟು ವಿದ್ಯಾರ್ಥಿಗಳು ತಮ್ಮ ಮನೆಗೆಳಿಂದ ಸುಮಾರು ದೂರದ ಗುಡ್ಡ ಪ್ರದೇಶಕ್ಕೆ ತೆರಳಿ ಕಾಡುಪ್ರಾಣಿಗಳ ಹಾವಳಿಗಳ ಮಧ್ಯೆ ಆನ್‌ಲೈನ್ ತರಗತಿ ಕೇಳುತ್ತಿ ದ್ದಾರೆ. ಸದ್ಯ ಶಾಲೆ- ಕಾಲೇಜುಗಳ ಕೆಲವು ಭೌತಿಕ ತರಗತಿಗಳು ಆರಂಭಗೊಂಡಿದ್ದರೂ ಕೆಲವೊಮ್ಮೆ ಆನ್‌ಲೈನ್ ಮೂಲಕ ಕಳಿಸುವ ಪಠ್ಯ ಸಂಬಂಧಿ ಫೈಲ್‌ಗಳು, ಪರೀಕ್ಷಾ ವೇಳಾಪಟ್ಟಿ ನಮಗೆ ಸಿಗುವಾಗ ಕೆಲವೊಮ್ಮೆ ಪರೀಕ್ಷೆ ಕಳೆದಿರುತ್ತವೆ. ಗ್ರಾಮೀಣ ಭಾಗವಾಗಿರುವುದರಿಂದ ಸರಿಯಾದ ಸಮಯಕ್ಕೆ ಸಂಚಾರ ವ್ಯವಸ್ಥೆ ಇಲ್ಲದಿರುವುದರಿಂದ ಅನಿವಾರ್ಯ ಕಾರಣಗಳಿಗೆ ಮನೆಗೆ ಕರೆ ಮಾಡಲು ಅಸಾ

ಧ್ಯವಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ನೋವು ತೋಡಿಕೊಂಡಿದ್ದಾರೆ. 4ಜಿ ಟೆಂಟ್: ಮಳೆಗಾಲದಲಿ್ಲ ಗುಡ್ಡಗಾಡು, ರಸ್ತೆ ಬದಿಯಲಿ್ಲ ನೆಟ್‌ವರ್ಕ್‌ಗಾಗಿ ಪರದಾಟ ಮಾಡಬೇಕಾಗುತ್ತದೆ. ರಬ್ಬರ್ ತೋಟದ ಮಧ್ಯೆ ಪರ್ಯಾಯವಾಗಿ ಶೀಟ್ ಹಾಕಿ ಒಂದು ಟೆಂಟ್ ನಿರ್ಮಿಸಿ ಅದರಡಿಯಲ್ಲಿ ಇಂಟರ್‌ನೆಟ್ ಬಳಸುತ್ತಿದ್ದಾರೆ. ಈ ಟೆಂಟ್‌ಗೆ 4ಜಿ ಟೆಂಟ್ ಎಂದು ಇಲ್ಲಿಯ ಗ್ರಾಮಸ್ಥರು ಹೆಸರಿಟ್ಟಿದ್ದಾರೆ. ವರ್ಕ್ ಫ್ರಂ ಹೋಂ ನಿರ್ವಹಿಸುವ ಉದ್ಯೋಗಿಗಳು ಊರಿನಿಂದ ಹೊರಗೆ ಪಿಜಿಯಲ್ಲಿ ಉಳಿದುಕೊಂಡಿದ್ದಾರೆ.

ಕ್ಷೇತ್ರದ ಶಾಸಕರಿಗೆ ಬಳ್ಳಕ ಎಂಬ ಊರು ಇದೆಯಾ ಎಂದೇ ಗೊತ್ತಿಲ್ಲವೆನ್ನಿಸುತ್ತದೆ. ಇಲ್ಲಿ ಕೇವಲ ಆನ್‌ಲೈನ್ ತರಗತಿಗೆ ಮಾತ್ರ ನೆಟ್‌ವರ್ಕ್ ಇಲ್ಲದಿರುವುದಲ್ಲ ಇಲ್ಲಿ ನೆಟ್‌ವರ್ಕ್ ಸಮಸ್ಯೆ ಮುಗಿಯದ ಗೋಳು ಆಗಿ ಬಿಟ್ಟಿದೆ. ಆನ್‌ಲೈನ್ ಬಿಲ್, ಶಾಪಿಂಗ್, ಬ್ಯಾಂಕಿಗ್ ದೂರದ ಮಾತು. ನಗರದ ಮಕ್ಕಳು ಇಂಟರ್‌ನೆಟ್‌ನಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಇಲ್ಲಿಯ ಪದವಿ ವಿದ್ಯಾರ್ಥಿಗಳು ಇಂಟರ್‌ನೆಟ್‌ನಿಂದ ಹಿಂದುಳಿದು ಬಿಟ್ಟಿದ್ದಾರೆ ಎಂದು ವಿದ್ಯಾರ್ಥಿ ಉಜೀತ್ ಶ್ಯಾಂ ಮತ್ತು ವರ್ಕ್‌ಫ್ರಂ ಹೋಂ ಉದ್ಯೋಗಿ ಮನೀಶ್ ಬಿ.ಸಿ. ನೋವು ಹಂಚಿಕೊಂಡಿದ್ದಾರೆ.

share
ಇಬ್ರಾಹಿಂ ಖಲೀಲ್ ಬನ್ನೂರು
ಇಬ್ರಾಹಿಂ ಖಲೀಲ್ ಬನ್ನೂರು
Next Story
X