Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಭೂಮಿ ಕೊಟ್ಟ ರೈತರಿಗೆ ಉದ್ಯೋಗದ ಹಕ್ಕು...

ಭೂಮಿ ಕೊಟ್ಟ ರೈತರಿಗೆ ಉದ್ಯೋಗದ ಹಕ್ಕು ಸಿಗಲಿ

ವಾರ್ತಾಭಾರತಿವಾರ್ತಾಭಾರತಿ2 Jan 2021 1:09 PM IST
share

ಮಾನ್ಯರೇ,

ನಂಜನಗೂಡು ತಾಲೂಕಿನಲ್ಲಿ ಏಶ್ಯನ್ ಪೈಂಟ್ಸ್ ಕಾರ್ಖಾನೆ ಆರಂಭವಾಗಿದ್ದು, ಈ ಕಾರ್ಖಾನೆಯನ್ನು ಕೆಐಎಡಿಬಿ ಮತ್ತು ಜಿಲ್ಲಾಡಳಿತವನ್ನೊಳಗೊಂಡ ಸಮಿತಿ ಯಿಂದ ರೈತರ ಜೀವನಾಧಾರವಾಗಿದ್ದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಸ್ಥಾಪಿಸಲಾಗಿದೆ. ಭೂಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಈ ಸಮಿತಿಯ ಸಮಕ್ಷಮದಲ್ಲಿ ಭೂಮಿ ಕಳೆದುಕೊಂಡ ಪ್ರತಿ ರೈತ ಕುಟುಂಬದ ಒಬ್ಬ ಸದಸ್ಯರಿಗೆ ಇದೇ ಕಾರ್ಖಾನೆಯಲ್ಲಿ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಲಾಗಿತ್ತು. ನಂತರ ಅರ್ಹ ರೈತ ಕುಟುಂಬದ ಉದ್ಯೋಗಾಂಕ್ಷಿಗಳಿಗೆ ತರಬೇತಿಯನ್ನು ಸಹ ನೀಡಲಾಗಿದೆ. ಆದರೆ ಈಗ ಕಾರ್ಖಾನೆಯ ಆಡಳಿತ ಮಂಡಳಿ ಸಮಂಜಸವಲ್ಲದ ಕಾರಣವನ್ನು ನೀಡುತ್ತಾ ಭೂಮಿ ಕೊಟ್ಟ ರೈತ ಕುಟುಂಬದ ಉದ್ಯೋಗಾಕಾಂಕ್ಷಿಗಳಿಗೆ ಕಾರ್ಖಾನೆಯಲ್ಲಿ ಕೆಲಸ ಕೊಡಲು ನಿರಾಕರಿಸುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳಿಗೆ, ಕೆಐಎಡಿಬಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಇದೂ ಸಾಲದಂತೆ ಜಿಲ್ಲಾಧಿಕಾರಿಗಳ ಮತ್ತು ಕೆಐಎಡಿಬಿ ಕಚೇರಿಯೆದುರು ಧರಣಿ ಕೂಡ ನಡೆಸಲಾಗಿತ್ತು. ಆದರೆ, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳ ಕಾರ್ಖಾನೆಯ ಆಡಳಿತ ಮಂಡಳಿ ಇವರ ಸಮಸ್ಯೆ ಸ್ವೀಕರಿಸುವುದಿರಲಿ, ಇದರ ಬಗ್ಗೆ ಗಮನ ಕೂಡಾ ಹರಿಸಿಲ್ಲ. ಇದಕ್ಕೆ ಅನುಗುಣವಾಗುವಂತೆ ಸರಕಾರಿ ವ್ಯವಸ್ಥೆಯೂ ಕೂಡ ಹೀಗೆಯೇ ನಡೆದುಕೊಳ್ಳುತ್ತಿದೆ!

ಇಲ್ಲಿ ನೋಡುವುದಾದರೆ ಜಿಲ್ಲಾಧಿಕಾರಿಗಳು ಮತ್ತು ಕೆಐಎಡಿಬಿ ಅಧಿಕಾರಿಗಳ ಸಮಿತಿ ಮಧ್ಯವರ್ತಿಗಳಾಗಿ ರೈತರ ಭೂಮಿ ಕಿತ್ತು ಬಂಡವಾಳಶಾಹಿಯ ಕಾಲಿಗೆ ಒಪ್ಪಿಸುವುದಷ್ಟೇ ಇವರ ಕೆಲಸವೇ? ಹಾಗಾದರೆ, ಪ್ರಭುತ್ವ ಬಂಡವಾಳಶಾಹಿಗಳ ಮುಂದೆ ಮಂಡಿಯೂರಿದೆಯೇ ಎಂದು ಅನುಮಾನವಾಗುತ್ತಿದೆ. ಏಕೆಂದರೆ, ಇತ್ತ ಜೀವನಾಧಾರವಾದ ಭೂಮಿಯನ್ನೂ ಕಳೆದುಕೊಂಡು ಅತ್ತ ಉದ್ಯೋಗವೂ ಇಲ್ಲದೆ ಸತತ ಚಳಿ, ಮಳೆ, ಗಾಳಿ ಎನ್ನದೆ 39 ದಿನಗಳ ಕಾಲ ಉದ್ಯೋಗಾಕಾಂಕ್ಷಿಗಳು ಮತ್ತು ರೈತರು ನಿರಂತರ ನಿಂತ ಜಾಗದಲ್ಲೇ ಕಾರ್ಖಾನೆ ಮುಂಭಾಗದಲ್ಲಿ ಧರಣಿ ನಡೆಸುತ್ತಿದ್ದರೂ ಚುನಾಯಿತ ಶಾಸಕರಾಗಲಿ, ಜಿಲ್ಲಾಡಳಿತವಾಗಲಿ, ಕೆಐಎಡಿಬಿ ಅಧಿಕಾರಿಗಳಾಗಲಿ ಸಮಸ್ಯೆ ಬಗೆಹರಿಸುವ ಯಾವ ಗೋಜಿಗೂ ಹೋಗುತ್ತಿಲ್ಲ. ಈ ಎಲ್ಲಾ ಬೆಳವಣಿಗೆಯಿಂದ ಬೇಸತ್ತ ರೈತರು ಈ ಕಾರ್ಖಾನೆಯಿಂದ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ಕೈಗೊಂಡರೂ ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿಯನ್ನು ಕಾಲ್ನಡಿಗೆ ಮೂಲಕ ಹೋಗಿ ಮನವಿ ಸಲ್ಲಿಸಲು ಹೊರಟವರನ್ನು ಪೊಲೀಸ್ ತಡೆಗೋಡೆ ನಿರ್ಮಿಸಿ ತಡೆಯಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಬಂದು ಸಮಸ್ಯೆಯನ್ನು ಆಲಿಸುವುದು ಅವರ ಕರ್ತವ್ಯ ಮತ್ತು ಜವಾಬ್ದಾರಿ ಕೂಡ. ಆದರೆ, ಇದು ವಿಫಲವಾಗಿರುವುದು ಪ್ರಜಾಪ್ರಭುತ್ವವನ್ನು ಕತ್ತಲೆಯ ದಿಕ್ಕಿಗೆ ದೂಡುವಂತಹ ಕ್ರೌರ್ಯವಾಗಿದೆ ಎಂದರೆ ತಪ್ಪಾಗಲಾರದು. ಅನ್ನ ನೀಡುತ್ತಿದ್ದ ರೈತರನ್ನು ಇಂದು ಗಂಜಿಗಾಗಿ ಪರಿತಪಿಸುವಂತೆ ಮಾಡಿದ್ದಾರೆ. ಭೂಮಿ ಜೊತೆಗೆ ಜೀವನವನ್ನು ಕಳೆದುಕೊಂಡ ರೈತ ಕುಟುಂಬದವರ ಪರವಾಗಿ ಮುಖ್ಯಮಂತ್ರಿಗಳು ಗಮನಹರಿಸ ಬೇಕಾಗಿದೆ. ಉಲ್ಬಣವಾಗಿರುವ ಸಮಸ್ಯೆಯನ್ನು ಮತ್ತು ಕಣ್ಣು-ಕಿವಿ ಕುರುಡಾಗಿರುವ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಭೂಮಿ ಕೊಟ್ಟ ಅನ್ನದಾತರಿಗೆ ಉದ್ಯೋಗದ ಹಕ್ಕನ್ನು ಕೊಡಿಸಬೇಕಾಗಿದೆ.

-ಪುನೀತ್. ಎನ್., ಅಶೋಕಪುರಂ, ಮೈಸೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X