ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಆ್ಯಂಬುಲೆನ್ಸ್ ಸೇವೆ
ಕಡಬ : ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 14.5 ಲಕ್ಷ ರೂ. ವೆಚ್ಚದಲ್ಲಿ ಕೊಡ ಮಾಡಿದ ಆ್ಯಂಬುಲೆನ್ಸ್ ನ್ನು ಸುಳ್ಯ ಶಾಸಕ ಎಸ್.ಅಂಗಾರ ಶನಿವಾರ ಉದ್ಘಾಟಿಸಿದರು.
ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐದು ನೂತನ ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದ್ದು, ಈ ಪೈಕಿ ಒಂದು ಆ್ಯಂಬುಲೆನ್ಸ್ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ. ನೂತನ ಆ್ಯಂಬುಲೆನ್ಸ್ ನ ಕೀಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ರವರಿಗೆ ಶಾಸಕ ಎಸ್.ಅಂಗಾರರವರು ಹಸ್ತಾಂತರಿಸಿ ಮಾತನಾಡುತ್ತಾ, ಅಗತ್ಯ ಬೇಡಿಕೆಯಾಗಿದ್ದ ಆ್ಯಂಬುಲೆನ್ಸ್ ನ್ನು ಈಗಾಗಲೇ ಆಸ್ಪತ್ರೆಗೆ ನೀಡಲಾಗಿದೆ. ಇನ್ನುಳಿದಂತೆ ಡಯಾಲಿಸಿಸ್ ಯಂತ್ರವನ್ನು ವಿಶೇಷ ಆದ್ಯತೆಯ ಮೇರೆಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.
ಈ ಸಂದರ್ಭ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಪೊಸವಳಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.