Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿವಾಸಿ...

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿವಾಸಿ ಕನ್ನಡಿಗರಿಂದ ರಾಜ್ಯ ಸರಕಾರಕ್ಕೆ ಒಕ್ಕೊರಳಿನ ಕೂಗು

#NRIappealDay ಮೂಲಕ ಟ್ವಿಟರ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ2 Jan 2021 8:11 PM IST
share
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿವಾಸಿ ಕನ್ನಡಿಗರಿಂದ ರಾಜ್ಯ ಸರಕಾರಕ್ಕೆ ಒಕ್ಕೊರಳಿನ ಕೂಗು

ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ನೇಮಕ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಶ್ವಾದ್ಯಂತವಿರುವ 30ಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಇಂದು ಟ್ವಿಟರ್ ಅಭಿಯಾನ ಹಮ್ಮಿಕೊಂಡಿತ್ತು.

ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ನೇಮಕ, ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು, ನನೆಗುದಿಗೆ ಬಿದ್ದಿರುವ ಎನ್.ಆರ್.ಕೆ. ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೆಗೊಳಿಸುವುದು ಮತ್ತು ಹೆಚ್ಚು ಅನಿವಾಸಿ ಕನ್ನಡಿಗರ ಸಾಂಧ್ರತೆ ಇರುವ ದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.

ಜ.2ರಂದು ಮಧ್ಯಾಹ್ನ ಟ್ವಿಟರ್ ಅಭಿಯಾನ ಆರಂಭವಾಗಿದ್ದು, 'ಎನ್ಆರ್ ಐ ಅಪೀಲ್ ಡೇ' #NRIappealDay ಎಂಬ ಹ್ಯಾಶ್'ಟ್ಯಾಗ್ ನೊಂದಿಗೆ ಸಾವಿರಾರು ಮಂದಿ ಟ್ವೀಟ್ ಮಾಡಿದ್ದಾರೆ. ಇಮೇಲ್ ಮೂಲಕವೂ ತಮ್ಮ ಬೇಡಿಕೆಯನ್ನು ಈಡೇರಿಸಲು ಟ್ವಿಟರಿಗರು ಆಗ್ರಹಿಸಿದ್ದಾರೆ.

''ಅನಿವಾಸಿ ಭಾರತೀಯ ಸಮಿತಿಗೆ ಸಮರ್ಥ ನೇತೃತ್ವ ಇದ್ದಲ್ಲಿ ಪ್ರಪಂಚದಾದ್ಯಂತ ಕನ್ನಡಿಗರು ಕನ್ನಡದ ಕಂಪನ್ನು ಪಸರಿಸಲು ಸಾಧ್ಯ, ಅನಿವಾಸಿ ಕನ್ನಡಿಗರು ಸಂಘಟನಾತ್ಮಕವಾಗಿ ಬೆಳೆಯಲೂ ಸಾಧ್ಯ' ಎಂದು ಸಾಗರೋತ್ತರ ಕನ್ನಡಿಗರು ಸಂಘದ ಅಧ್ಯಕ್ಷ ಚಂದ್ರಶೇಖರ್ ಲಿಂಗದಳ್ಳಿ ಟ್ವೀಟ್ ಮಾಡಿದ್ದಾರೆ.

''ಜನರ ನಡುವೆ ಇದ್ದು ಜನರ ಧ್ವನಿಯಾಗುವವರು ನಮ್ಮ ಜನಪ್ರತಿನಿಧಿಯಾಗಬೇಕು ಎಂದೇ ಎಲ್ಲರೂ ನಿರೀಕ್ಷಿಸುವುದು, ಹಾಗಾಗಿ ಅನಿವಾಸಿ ಭಾರತೀಯ ಸಮಿತಿಗೆ ಒಬ್ಬ ಸಮರ್ಥ ಅನಿವಾಸಿಯೇ ಉಪಾಧ್ಯಕ್ಷರಾಗಬೇಕು'' ಎಂದು ರೂಪ ಎಂಬವರು ಆಗ್ರಹಿಸಿದ್ದಾರೆ.

ತಾಯ್ನಾಡಿನಿಂದ ವಿದೇಶಕ್ಕೆ ದುಡಿಯಲು ಹೋದ ಅನಿವಾಸಿ ಕನ್ನಡಿಗರನ್ನು ಸಂಪೂರ್ಣವಾಗಿ ಮರೆಯಿತೇ ಕರ್ನಾಟಕ ಸರ್ಕಾರ? ನಮ್ಮ ನೋವಿಗೆ ಧ್ವನಿಯಾಗುವವರು ಯಾರು? ಅನಿವಾಸಿಗಳ ಪ್ರತಿನಿಧಿಗಳು ಯಾರು? ನೆರೆಯ ಕೇರಳದ ಅನಿವಾಸಿಗಳಿಗೆ ವಿದೇಶದಲ್ಲಿ ಸಿಗುವ ಮನ್ನಣೆ ಮತ್ತು ಅವರ ಅಹವಾಲಿಗೆ ಸರಕಾರದಿಂದ ಸಿಗುವ ಸ್ಪಂದನೆ ನಮ್ಮ ಅನಿವಾಸಿ ಕನ್ನಡಿಗರಿಗೆ ಏಕೆ ಸಿಗುತ್ತಿಲ್ಲ? ನಮ್ಮ ಬೇಡಿಕೆ ಈಡೇರಿಸಿ ಎಂದು ರಘು ದೇಸಾಯಿ ಎಂಬವರು ಒತ್ತಾಯಿಸಿದ್ದಾರೆ.

ಸಮರ್ಥ ನಾಯಕತ್ವವಿಲ್ಲದೆ ದಿಕ್ಕು ತಪ್ಪಿದ ದೋಣಿಯಂತಾದ NRI ಸಮಿತಿಯನ್ನು ಪುನಶ್ಚೇತನಗೊಳಿಸಬೇಕು. ಅನಿವಾಸಿಗರ ಆಶೋತ್ತರಗಳಿಗೆ ಸ್ಪಂದಿಸುವ ಉತ್ತಮ ವ್ಯವಸ್ಥೆ ರೂಪಿಸಿಕೊಡಬೇಕು. ಅನಿವಾಸಿಗರ ನಾಡಿಮಿಡಿತ ಕರ್ನಾಟಕದ ಅಭಿವೃದ್ದಿಗೆ ಮಿಡಿಯುತ್ತಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ನಿಝಾಮ್ ಉರುವಾಲುಪದವು ಎಂಬವರು ಟ್ವೀಟ್ ಮಾಡಿದ್ದಾರೆ.

''ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಅನಿವಾಸಿಗಳು ಪೌರತ್ವ ಪಡೆಯಲು ಬಂದವರಲ್ಲ, ಅವರು ದುಡಿದ ಪ್ರತಿಯೊಂದು ರೂಪಾಯಿ ತಾಯ್ನಾಡಿಗೆ ಕಳುಹಿಸಿ ರಾಜ್ಯದ ಆರ್ಥಿಕತೆಗೆ ಸಹಾಯ ಮಾಡುವವರು, ಕಡೆಗಣಿಸದಿರಿ ನಮ್ಮನ್ನ'' ಎಂದು ಸಿದ್ದಲಿಂಗೇಶ್ವರ ರೇವಪ್ಪ ಮನವಿ ಮಾಡಿದ್ದಾರೆ.

''ನಾನು ಅನಿವಾಸಿ ಕನ್ನಡಿಗನಲ್ಲ. ಆದರೆ ನನ್ನ ಮನೆಯಲ್ಲೂ ಅನಿವಾಸಿ ಕನ್ನಡಿಗರು ಇದ್ದಾರೆ. ಅವರು ತಮ್ಮ ಮನೆ, ಕುಟುಂಬ ಬಿಟ್ಟು ಉದ್ಯಮ ಅರಸಿ ಹೋಗಿ ಅದನ್ನು ದೇಶದ ಪ್ರಗತಿಯಲ್ಲಿ ತಂದು ತಮ್ಮ ಕೊಡುಗೆ ನೀಡಿರುವರು. ಅವರ ಧ್ವನಿಗೆ ಮುಖ್ಯಮಂತ್ರಿ ಸ್ಪಂದಿಸಬೇಕೆಂದು ವಿನಂತಿಸುತ್ತೇನೆ'' ಎಂದು ರಾಫಿ ನಗರ ಎಂಬವರು ಟ್ವೀಟ್ ಮಾಡಿದ್ದಾರೆ.

ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ನೇಮಿಸಲೇ ಇಲ್ಲ, ಮುಖ್ಯಮಂತ್ರಿಗಳೇ ಅದೇ ತಪ್ಪನ್ನು ನೀವು ಮತ್ತೆ ಮಾಡದಿರಿ. ಕೂಡಲೇ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ನೇಮಿಸಿ. ಅನಿವಾಸಿ ಕನ್ನಡಿಗರು ಮತ್ತು ಕರ್ನಾಟಕ ಸರಕಾರದ ನಡುವೆ ಸಂಪರ್ಕ ಕೊಂಡಿಯಾಗಿ ಇರಬೇಕಾದುದೇ ಅನಿವಾಸಿ ಭಾರತೀಯ ಸಮಿತಿ. 3 ವರ್ಷಗಳ ನಿರ್ಲಕ್ಷ್ಯತೆ ಕೊನೆಗೊಳಿಸಿ. ತಕ್ಷಣವೇ ಉಪಾಧ್ಯಕ್ಷರ ನೇಮಕವಾಗಲಿ. ಕೊರೋನ ಮಹಾಮಾರಿಯಿಂದ ಅನಿವಾಸಿ ಕನ್ನಡಿಗರು ಅತೀ ಹೆಚ್ಚು ಸಂಕಷ್ಟಕ್ಕೀಡಾದ್ದಾರೆ. ಅತ್ತ ಇದ್ದ ಉದ್ಯೋಗವೂ ಕಳೆದುಕೊಂಡು ಆಸರೆಯೇ ಇಲ್ಲದಾಗಿದ್ದಾರೆ. ಜನಪ್ರತಿನಿಧಿಗಳೇ, ನಮ್ಮ ಬೇಡಿಕೆಗೂ ಸ್ಪಂದಿಸಿ ಎಂದು ಶಶಿಧರ್ ಎಂಬವರು ಆಗ್ರಹಿಸಿದ್ದಾರೆ.

''ಜಾತಿಗೊಂದು, ಭಾಷೆಗೊಂದು ನಿಗಮ ಮಾಡುವ ರಾಜ್ಯ ಸರ್ಕಾರ, ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನೇಕೆ ನೇಮಿಸಿಲ್ಲ? ಸರ್ಕಾರ ಆದ್ಯತೆಯ ಮೇರೆಗೆ ಅನಿವಾಸಿ ಕನ್ನಡಿಗರ ಕಷ್ಟಸುಖ ಬಲ್ಲವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು'' ಎಂದು ಜಗದೀಶ ಎಂಬವರು ಮನವಿ ಮಾಡಿದ್ದಾರೆ.

ಕರ್ನಾಟಕ ಸರಕಾರದಲ್ಲಿ ಅನಿವಾಸಿ ಭಾರತೀಯ ಸಮಿತಿಯಿದೆ. ಸಮಿತಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ ಮತ್ತು ಉಪಾಧ್ಯಕ್ಷರನ್ನು ನೇಮಿಸಿರುತ್ತಾರೆ. ಅನಿವಾಸಿ ಕನ್ನಡಿಗರ ಕುಂದುಕೊರತೆ ನೀಗಿಸುವ ಕೆಲಸ ಮಾಡುತ್ತದೆ. ಆದರೆ ಸಮಿತಿಗೆ ಉಪಾದ್ಯಕ್ಷರಿಲ್ಲದೇ ಅನಿವಾಸಿ ಕನ್ನಡಿಗರ ಮತ್ತು ಸರಕಾರದ ನಡುವಿನ ಕೊಂಡಿಯೇ ಇಲ್ಲವಾಗಿದೆ ಎಂದು ಮಹೇಶ ಕಾಶಿ ಎಂಬವರು ಟ್ವೀಟ್ ಮಾಡಿದ್ದಾರೆ.

ಅಲ್ಲದೇ, ಸಾವಿರಾರು ಮಂದಿ #NRIappealDay ಎಂಬ ಹ್ಯಾಶ್'ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿ ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬೊಮ್ಮಾಯಿ, ಸಚಿವರಾದ ಸುರೇಶ್ ಕುಮಾರ್, ಲಕ್ಷ್ಮಣ ಸವದಿ ಸೇರಿ ಹಲವು ಸಚಿವರಿಗೆ ಟ್ಯಾಗ್ ಮಾಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರು ಸ್ಥಾನಕ್ಕೆ ಯಾರನ್ನೂ ನೇಮಕವೇ ಮಾಡಿಲ್ಲ! ಅನಿವಾಸಿ ಕನ್ನಡಿಗರೆಂದರೆ ಸರ್ಕಾರಕ್ಕೆ ಅಷ್ಟೂ ನಿರ್ಲಕ್ಷ್ಯತೆಯೇ? ತಾಯ್ನಾಡಿನಿಂದ ವಿದೇಶಕ್ಕೆ ದುಡಿಯಲು ಹೋದ ಅನಿವಾಸಿ ಕನ್ನಡಿಗರನ್ನು ಸಂಪೂರ್ಣವಾಗಿ ಮರೆತರೇ ಕರ್ನಾಟಕ ಸರ್ಕಾರ? ನಮ್ಮ ನೋವಿಗೆ ಧ್ವನಿಯಾಗುವವರು ಯಾರು? ಅನಿವಾಸಿಗಳ ಪ್ರತಿನಿಧಿಗಳು ಯಾರು?

-ಟ್ವೀಟ್, ಕನ್ನಡಿಗಾಸ್ ಫೆಡರೇಶನ್

ಹೊರದೇಶಗಳಲ್ಲಿರುವ ಕನ್ನಡಿಗರು ಭೌತಿಕವಾಗಿ ನಮ್ಮಿಂದ ದೂರವಿರಬಹುದು. ಆದರೆ ಅವರೆಲ್ಲ ಕರ್ನಾಟಕದ ಮಣ್ಣಿನಮಕ್ಕಳು, ಕನ್ನಡಮ್ಮನ ಕರುಳಬಳ್ಳಿಯ ಕುಡಿಗಳು. ದೂರದೇಶಗಳಲ್ಲಿ ಇದ್ದೂ ತಾಯ್ನಾಡಿನ ಧ್ಯಾನ ಮಾಡುವ ಅನಿವಾಸಿ ಕನ್ನಡಿಗರನ್ನು ಸರ್ಕಾರ ನಿರ್ಲಕ್ಷ್ಯ ಮಾಡಕೂಡದು. ಅವರ ಎದೆಯ ದನಿಗೆ ಕಿವಿಗೊಡಬೇಕು. ಸರ್ಕಾರ ಮೂರು ವರ್ಷಗಳಿಂದ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ನೇಮಕ ಮಾಡಿಲ್ಲ. ಕೂಡಲೇ ಉಪಾಧ್ಯಕ್ಷರನ್ನು ನೇಮಿಸುವ ಜತೆಗೆ, ಕನ್ನಡ ಕಾಳಜಿಯ ಕ್ರಿಯಾಶೀಲ ಅಧಿಕಾರಿಗೆ ಸಮಿತಿಯ ಜವಾಬ್ದಾರಿ ನೀಡಬೇಕು. ಅನಿವಾಸಿ ಕನ್ನಡಿಗರು ಮತ್ತು ಸರ್ಕಾರದ ನಡುವೆ ಇರುವ ಏಕೈಕ ಕೊಂಡಿ ಈ ಸಮಿತಿ ಎಂಬುದನ್ನು ಸರ್ಕಾರ ಮರೆಯಬಾರದು.

-ನಾರಾಯಣಗೌಡ.ಟಿ.ಎ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ

ಹೊರದೇಶಗಳಲ್ಲಿರುವ ಕನ್ನಡಿಗರು ಭೌತಿಕವಾಗಿ ನಮ್ಮಿಂದ ದೂರವಿರಬಹುದು. ಆದರೆ ಅವರೆಲ್ಲ ಕರ್ನಾಟಕದ ಮಣ್ಣಿನಮಕ್ಕಳು, ಕನ್ನಡಮ್ಮನ ಕರುಳಬಳ್ಳಿಯ ಕುಡಿಗಳು. ದೂರದೇಶಗಳಲ್ಲಿ ಇದ್ದೂ ತಾಯ್ನಾಡಿನ ಧ್ಯಾನ ಮಾಡುವ ಅನಿವಾಸಿ ಕನ್ನಡಿಗರನ್ನು ಸರ್ಕಾರ ನಿರ್ಲಕ್ಷ್ಯ ಮಾಡಕೂಡದು. ಅವರ ಎದೆಯ ದನಿಗೆ ಕಿವಿಗೊಡಬೇಕು. (1/6)#NRIAppealDay

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) January 2, 2021

ನೆರೆಯ ಕೇರಳದ ಅನಿವಾಸಿಗಳಿಗೆ ವಿದೇಶದಲ್ಲಿ ಸಿಗುವ ಮನ್ನಣೆ ಮತ್ತು ಅವರ ಅವಹಾಲಿಗೆ ಸರಕಾರದಿಂದ ಸಿಗುವ ಸ್ಪಂದನೆಗೆ ನಮ್ಮ ಅನಿವಾಸಿ ಕನ್ನಡಿಗರಿಗೆ ಏಕೆ ಸಿಗುತ್ತಿಲ್ಲ?

ನಮ್ಮ ಬೇಡಿಕೆ ಈಡೇರಿಸಿ #NRIappealDay @CMofKarnataka @drashwathcn @cskarnataka @publictvnews

— Raghu Desai (@RaghuDe41496998) January 2, 2021

ಜಾತಿಗೊಂದು, ಭಾಷೆಗೊಂದು ನಿಗಮ ಮಾಡುವ ರಾಜ್ಯ ಸರ್ಕಾರ, ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನೇಕೆ ನೇಮಿಸಿಲ್ಲ? ಸರ್ಕಾರ ಆದ್ಯತೆಯ ಮೇರೆಗೆ ಅನಿವಾಸಿ ಕನ್ನಡಿಗರ ಕಷ್ಟಸುಖ ಬಲ್ಲವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು.#NRIappealDay @CMofKarnataka @csogok

— ಜಗದೀಶ ಬಸರಿಗಿಡದ (@Jagadeesha_MB) January 2, 2021

Excellency CM
We the Kannadigas,left our mother land to better our prospects abroad. We are helping to build the economy of the state by remitting funds. Please don’t ignore us. Kindly appoint the Vice President now.#NRIappealDay @CMofKarnataka @drashwathcn @cskarnataka

— Stanley Fernandes (@stanleythf) January 2, 2021

ರಾಜ್ಯದ ಆರ್ಥಿಕತೆಯಲ್ಲಿ ಅನಿವಾಸಿ ಕನ್ನಡಿಗರ ಪಾಲು ಎಷ್ಟು ಮಹತ್ವವೋ, ಅವರ ಕ್ಷೇಮಾಭಿವೃದ್ದಿಯೂ ಕೂಡ ಅಷ್ಟೇ ಮಹತ್ವವಾದದ್ದು. ಕರ್ನಾಟಕ ಸರ್ಕಾರ ಆದಷ್ಟು ಬೇಗ " ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ" ಇದಕ್ಕೆ ಉಪಾಧ್ಯಕ್ಷರ ನೇಮಕ ಮಾಡಲಿ.#NRIAPPEALDAY@CMofKarnataka @csogok@CouncilKcf pic.twitter.com/sfmHot0zBg

— Hasainar Katipalla (@AHasainar) January 2, 2021

ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಅನಿವಾಸಿ ಕನ್ನಡಿಗರ ಬಗ್ಗೆ ಏಕೆ ಮಲತಾಯಿ ಧೋರಣೆ ಎಂಬುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ!

ಲಕ್ಷಾಂತರ ಅನಿವಾಸಿಗಳ ಬೇಡಿಕೆಯನ್ನು ಆಲಿಸಲು ನಿಮ್ಮ ಬಳಿ ಸಮಯವೇ ಇಲ್ಲದಾಯಿತೇ?#NRIappealDay @CMofKarnataka @drashwathcn @cskarnataka @publictvnews NRIappealDay

— Roopa (@Roopa83733523) January 2, 2021

Honorable Chief Minister,We are living away from Kannada Nadu for various reasons but we are Kannadigas in our soul and mind. KNRI forum is for us. Appoint a vice chairman to KNRI committee from among us and solve our concerns. #NRIAPPEALDAY@CMofKarnataka @csogok@CouncilKcf pic.twitter.com/YH27pQISfs

— Iqbal marzuqi Saqafi (@iqbal_saqafi) January 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X