Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ನಲ್ಲಿ ತರಬೇತಿ ಫಲ ನೀಡಿದೆ:...

ಇಂಗ್ಲೆಂಡ್‌ನಲ್ಲಿ ತರಬೇತಿ ಫಲ ನೀಡಿದೆ: ಪಿ.ವಿ. ಸಿಂಧು

ವಾರ್ತಾಭಾರತಿವಾರ್ತಾಭಾರತಿ3 Jan 2021 12:00 AM IST
share
ಇಂಗ್ಲೆಂಡ್‌ನಲ್ಲಿ ತರಬೇತಿ ಫಲ ನೀಡಿದೆ: ಪಿ.ವಿ. ಸಿಂಧು

ಹೊಸದಿಲ್ಲಿ, ಜ.2: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ತಮ್ಮ ತರಬೇತಿಗಾಗಿ ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಿರುವುದು ಕೋವಿಡ್ -19 ಪ್ರೇರಿತ ವಿರಾಮದ ಸಮಯದಲ್ಲಿ ತಾನು ಕೈಗೊಂಡ ನಿರ್ಧಾರಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಸಿಂಧು ಅಕ್ಟೋಬರ್‌ನಲ್ಲಿ ಯುಕೆಗೆ ತೆರಳಿದ್ದರು. ಅಂದಿನಿಂದಲೂ ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಮತ್ತು ಜನವರಿ 19ರಿಂದ 24 ರವರೆಗೆ ನಡೆಯಲಿರುವ ಎರಡು ಥಾಯ್ಲೆಂಡ್ ಓಪನ್ ಪಂದ್ಯಾವಳಿಗಳಲ್ಲಿ ಅವರು ವೃತ್ತಿಪರ ಬ್ಯಾಡ್ಮಿಂಟನ್‌ಗೆ ಮರಳಲು ಸಜ್ಜಾಗಿದ್ದಾರೆ.

‘‘ಯುಕೆಗೆ ಪ್ರಯಾಣಿಸುವುದು ನನ್ನ ಅತ್ಯುತ್ತಮ ನಡೆಗಳಲ್ಲಿ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ಸಾಂಕ್ರಾಮಿಕ ವಿರಾಮದಿಂದಾಗಿ. ಇಲ್ಲಿ ಹವಾಮಾನವು ತಣ್ಣಗಾಗಿದ್ದರೂ ಸಹ, ನಾನು ಹೆಚ್ಚಿನ ತೀವ್ರತೆಯ ತರಬೇತಿ ಅವಧಿಗಳನ್ನು ಆನಂದಿಸುತ್ತಿದ್ದೇನೆ’’ಎಂದು ಸಿಂಧು ಸ್ಪೋರ್ಟ್‌ಸ್ಟಾರ್‌ಗೆ ತಿಳಿಸಿದರು.

‘‘ನಾನು ಜನವರಿ (2021)ಯಿಂದ ಆಟವಾಡಲು ಪ್ರಾರಂ ಭಿಸುತ್ತೇನೆ. ಥಾಯ್ಲೆಂಡ್ ಮೊದಲ ಟೂರ್ನಿಯಾಗಿದೆ. ನಾವು ನಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು ಮತ್ತು ಸದೃಢವಾಗಿ ಕೆಲಸ ಮಾಡಬೇಕು, ಟೋಕಿಯೊದಲ್ಲಿ ಪದಕ ಗೆಲ್ಲುವ ಪ್ರಯತ್ನ ನಡೆಸುವುದಾಗಿ’’ ಎಂದು ಸಿಂಧು ಹೇಳಿದರು.

  2020, ಮಾರ್ಚ್ 11 ಮತ್ತು 15ರ ನಡೆದ ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಲ್ಲಿ ಸಿಂಧು ಕೊನೆಯ ಬಾರಿ ಆಡಿದ್ದರು. ‘‘ಥಾಯ್ಲೆಂಡ್‌ಲ್ಲಿ ನನ್ನ ಮೊದಲ ಪಂದ್ಯಾ ವಳಿಗಾಗಿ ನಾನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಮತ್ತು ಉತ್ಸುಕನಾಗಿದ್ದೇನೆ. ಹೌದು, ಮಾನಸಿಕ ಅಂಶವು ಮುಖ್ಯವಾಗಿದೆ. ಇಷ್ಟು ದೀರ್ಘ ವಿರಾಮದ ನಂತರ ನಾವು ತುಂಬಾ ತಾಳ್ಮೆಯಿಂದಿರಬೇಕಾಗುತ್ತದೆ’’ ಎಂದು ಅವರು ಹೇಳಿದರು.

 ಸಿಂಧು 2021ರ ಒಲಿಂಪಿಕ್ಸ್ ಗೆ ಅರ್ಹತೆಯನ್ನು ದೃಢಪಡಿಸಿದ್ದಾರೆ. ಅದು ಕಳೆದ ವರ್ಷದಿಂದ ಮುಂದೂಡಲ್ಪಟ್ಟಿತು. ಈ ವರ್ಷ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ. ಈ ವರ್ಷದ ಒಲಿಂಪಿಕ್ಸ್‌ಗೆ ಮೊದಲಿನ ಪಂದ್ಯಾವಳಿಗಳಲ್ಲಿ ಉತ್ತಮ ಫಲಿತಾಂಶಗಳೊಂದಿಗೆ ಮೊದಲ ಐದು ಸ್ಥಾನಗಳಿಗೆ ಮರಳಲು ಎದುರು ನೋಡುತ್ತಿದ್ದಾರೆ.

‘‘ಥಾಯ್ಲೆಂಡ್‌ನಲ್ಲಿ ಗೆಲುವಿನ ಆರಂಭದೊಂದಿಗೆ ಈ ವರ್ಷ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ನನಗಿದೆ’’ ಎಂದು ಸಿಂಧು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X