Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐತಿಹಾಸಿಕ ಸಂತೆಕಟ್ಟೆ ಹೊಸ ಮಾರುಕಟ್ಟೆಗೆ...

ಐತಿಹಾಸಿಕ ಸಂತೆಕಟ್ಟೆ ಹೊಸ ಮಾರುಕಟ್ಟೆಗೆ ಸ್ಥಳಾಂತರ: 150ಕ್ಕೂ ಅಧಿಕ ವ್ಯಾಪಾರಸ್ಥರು ಭಾಗಿ

ರಾ.ಹೆದ್ದಾರಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ವಾರ್ತಾಭಾರತಿವಾರ್ತಾಭಾರತಿ3 Jan 2021 7:44 PM IST
share
ಐತಿಹಾಸಿಕ ಸಂತೆಕಟ್ಟೆ ಹೊಸ ಮಾರುಕಟ್ಟೆಗೆ ಸ್ಥಳಾಂತರ: 150ಕ್ಕೂ ಅಧಿಕ ವ್ಯಾಪಾರಸ್ಥರು ಭಾಗಿ

ಉಡುಪಿ, ಜ. 3: ಪ್ರತಿ ರವಿವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರಕ್ಕೆ ತಡೆ ಮತ್ತು ಅಪಘಾತಗಳಿಗೆ ಕಾರಣವಾಗುತ್ತಿದ್ದ ನೂರಾರು ವರ್ಷ ಗಳ ಇತಿಹಾಸ ಇರುವ ಜಿಲ್ಲೆಯ ಪ್ರಮುಖ ಸಂತೆಯಾಗಿರುವ ಸಂತೆಕಟ್ಟೆಯ ವಾರದ ಸಂತೆಯು ಸ್ಥಳಾಂತರಗೊಂಡಿದ್ದು, ಗೋಪಾಲಪುರ ವಾರ್ಡಿನ ಕಲ್ಯಾಣಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಂತೆ ಮಾರುಕಟ್ಟೆಯಲ್ಲಿ ಇಂದು ಸಂತೆ ನಡೆಯಿತು.

ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 17,500 ಚದರ ಅಡಿ ವಿಸ್ತ್ರೀರ್ಣದ ಹೊಸ ಮಾರುಕಟ್ಟೆಯಲ್ಲಿ ಸುಮಾರು 150ಕ್ಕೂ ಅಧಿಕ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಹಾಗೂ ವ್ಯಾಪಾರಿಗಳು ತಾಜಾ ತರಕಾರಿ ಹಾಗೂ ಇತರ ಉತ್ಪನ್ನಗಳೊಂದಿಗೆ ವ್ಯಾಪಾರ ನಡೆಸಿ ದರು. ಹಸಿ ಹಾಗೂ ಒಣ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಹಳೆಯ ಮಾರುಕ ಟ್ಟೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಬೆಳಗಿನ ಜಾವ ಐದು ಗಂಟೆಯಿಂದ ಆರಂಭಗೊಂಡ ಸಂತೆಯು ಮಧ್ಯಾಹ್ನ ದವರೆಗೂ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆಯುತ್ತಿದ್ದ ಈ ಸಂತೆ ಈ ಹಿಂದೆ ಬೆಳಗ್ಗೆ 9ಗಂಟೆಗೆ ಮುಕ್ತಾಯಗೊಳ್ಳುತ್ತಿತ್ತು. ಆದರೆ ಈ ಹೊಸ ಮಾರುಕಟ್ಟೆಯಲ್ಲಿ ಮಧ್ಯಾಹ್ನದವರೆಗೂ ಗ್ರಾಹಕರು ವಸ್ತುಗಳ ಖರೀದಿಗೆ ಆ ಮಿಸುತ್ತಿರುವುದು ಕಂಡುಬಂತು.

ಸರಕಾರೇತರ ಸಂಸ್ಥೆ ಸಾಹಸ್ ಮತ್ತು ನಗರಸಭೆ ಜಂಟಿಯಾಗಿ ವ್ಯಾಪಾರಸ್ಥರಿಗೆ ಕರಪತ್ರ ಮತ್ತು ಕೈಚೀಲ ವಿತರಿಸುವ ಮೂಲಕ ಪರಿಸರ ಸ್ನೇಹಿ ಜನಜಾಗೃತಿ, ತ್ಯಾಜ್ಯ ವಿಲೇವಾರಿ ಮತ್ತು ವಿಂಗಡನೆ ಬಗ್ಗೆಯೂ ಮಾಹಿತಿ ನೀಡುವ ಕಾರ್ಯ ಮಾಡಿದರು.

ಟ್ರಾಫಿಕ್ ಸಮಸ್ಯೆಗೆ ಬ್ರೇಕ್: ಈ ಹಿಂದೆ ರವಿವಾರ ಬಂದರೆ ಸಂತೆಕಟ್ಟೆ ಇಡೀ ರಾಷ್ಟ್ರೀಯ ಹೆದ್ದಾರಿಯು ಸಂತೆ ಮಾರುಕಟ್ಟೆಯಾಗಿ ಪರಿವರ್ತನೆ ಯಾಗು ತ್ತಿತ್ತು. ತರಕಾರಿ ಮಾರಾಟ ಮಾಡುವವರು ಮತ್ತು ಕೊಳ್ಳುವವರು ಹಾಗೂ ಅವರ ವಾಹನಗಳು ಇಡೀ ರಾಷ್ಟ್ರೀಯ ಹೆದ್ದಾರಿಯನ್ನೇ ಆಕ್ರಮಿಸಿಕೊಳ್ಳುತ್ತಿತ್ತು. ಇದರಿಂದ ಪ್ರತಿ ರವಿವಾರ ಇಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ ಮತ್ತು ಅಪಘಾತ ಗಳು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸುತ್ತಿತ್ತು.

ಅಲ್ಲದೆ ಸ್ಥಳಾವಕಾಶದ ಕೊರತೆಯಿಂದ ಸುಮಾರು ಅರ್ಧ ಕಿ.ಮೀ. ಉದ್ದದವ ರೆಗಿನ ರಾ.ಹೆ. ಸರ್ವಿಸ್ ರಸ್ತೆಯು ಮಾರುಕಟ್ಟೆಯಾಗಿ ವಿಸ್ತಾರಗೊ ಳುತ್ತಿತ್ತು. ಹೀಗೆ ಸಂತೆಕಟ್ಟೆಯ ಸಂತೆಯು ಹಲವು ದಶಕಗಳ ಸಮಸ್ಯೆಯಾಗಿ ಕಾಡುತ್ತಿತ್ತು. ಇದೀಗ ಸಂತೆಯು ಹೊಸ ಮಾರುಕಟ್ಟೆಗೆ ಸ್ಥಳಾಂತರ ಗೊಂಡಿರುವುದರಿಂದ ಸಂತೆಕಟ್ಟೆಯ ರವಿವಾರದ ಬಹಳ ದೊಡ್ಡ ಸಮಸ್ಯೆಯಾಗಿರುವ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮುಕ್ತಿ ದೊರೆತಂತಾಗಿದೆ.
ಆದರೆ ಕಲ್ಯಾಣಪುರಕ್ಕೆ ಸಂತೆ ಸ್ಥಳಾಂತರಗೊಂಡಿರುವುದರಿಂದ ಸಂತೆಕಟ್ಟೆ- ಮಿಲಾಗ್ರಿಸ್ ಒಳರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದ ಬೆಳಗ್ಗೆ 11ಗಂಟೆಯವರೆಗೆ ಟ್ರಾಫಿಕ್ ಜಾಮ್ ಕಿರಿಕಿರಿ ಉಂಟಾಯಿತು. ಇದರಿಂದ ಸಂತೆಕಟ್ಟೆಯಿಂದ ನೇಜಾರು, ಕೆಮ್ಮಣ್ಣು, ಹೂಡೆಗೆ ಹೋಗುವ ವಾಹನಗಳಿಗೆ ತೊಂದರೆ ಎದುರಾಯಿತು.

ನಗರಸಭೆಗೆ 12.50ಲಕ್ಷ ರೂ. ಆದಾಯ

ಹೊಸ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಂದ ಪ್ರತಿವಾರ ತಲಾ 100ರೂ. ಸುಂಕ ಪಡೆಯಲಾಗುತ್ತದೆ. ಇದರಿಂದ ಉಡುಪಿ ನಗರಸಭೆಗೆ ಪ್ರತಿವರ್ಷ ಸುಮಾರು 12.50ಲಕ್ಷ ರೂ. ವರೆಗೆ ಆದಾಯ ದೊರೆಯಲಿದೆ. ಈ ಹಿಂದೆ ವಾರ್ಷಿಕ 6.50ಲಕ್ಷ ರೂ. ಸುಂಕ ಸಂಗ್ರಹ ವಾಗುತ್ತಿತ್ತು.

ಹೊಸ ಮಾರುಕಟ್ಟೆ ಕಲ್ಯಾಣಪುರ ಶ್ರೀವೀರಭದ್ರ ದೇವಸ್ಥಾನದ ಸಮೀಪವೇ ಇರುವುದರಿಂದ ಅಲ್ಲಿ ಹಸಿ ಹಾಗೂ ಒಣ ಮೀನು ಮಾರಾಟ ಮಾಡಲು ಅವಕಾಶ ನೀಡಿಲ್ಲ. ಇದರಿಂದಾಗಿ ಮಹಿಳೆಯರು ಹಳೆ ಸಂತೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಾಗಿದೆ. ಹಳೆ ಮಾರುಕಟ್ಟೆಗೆ ಗ್ರಾಹಕರು ಬಾರದ ಕಾರಣ ಮೀನು ಮಾರಾಟಗಾರರಿಗೆ ವ್ಯಾಪಾರ ಇಲ್ಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X