Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ಸೇನಾಧಿಕಾರಿ ಹತ್ಯೆಯ ಮೊದಲ...

ಇರಾನ್ ಸೇನಾಧಿಕಾರಿ ಹತ್ಯೆಯ ಮೊದಲ ವಾರ್ಷಿಕ ಪುಣ್ಯತಿಥಿ: ಇರಾಕ್‌ನಲ್ಲಿ ಬೃಹತ್ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ3 Jan 2021 9:37 PM IST
share
ಇರಾನ್ ಸೇನಾಧಿಕಾರಿ ಹತ್ಯೆಯ ಮೊದಲ ವಾರ್ಷಿಕ ಪುಣ್ಯತಿಥಿ: ಇರಾಕ್‌ನಲ್ಲಿ ಬೃಹತ್ ಮೆರವಣಿಗೆ

ಬಗ್ದಾದ್ (ಇರಾಕ್), ಜ. 3: ಇರಾನ್‌ನ ಉನ್ನತ ಸೇನಾಧಿಕಾರಿ ಖಾಸಿಮ್ ಸುಲೈಮಾನಿ ಅಮೆರಿಕದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಮೊದಲ ವಾರ್ಷಿಕ ಪುಣ್ಯತಿಥಿಯ ಮುನ್ನಾದಿನವಾದ ಶನಿವಾರ ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿ ಜನರು ಬೃಹತ್ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಜನರು ಮೃತ ಸೇನಾಧಿಕಾರಿಯ ಅಣಕು ಶವ ಮೆರವಣಿಗೆಯನ್ನೂ ಏರ್ಪಡಿಸಿದರು.

ಕಳೆದ ವರ್ಷದ ಜನವರಿ 3ರಂದು ಬಗ್ದಾದ್‌ನ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸುಲೈಮಾನಿಯ ವಾಹನಗಳ ಸಾಲನ್ನು ಗುರಿಯಾಗಿಸಿ ಅಮೆರಿಕದ ಡ್ರೋನ್‌ನಿಂದ ಕ್ಷಿಪಣಿ ಹಾರಿಸಲಾಗಿತ್ತು. ಅವರು ಆಗ ವಿಮಾನ ನಿಲ್ದಾಣದಲ್ಲಿ ಇಳಿದು ಇರಾಕ್ ಪ್ರಧಾನಿಯ ಕಚೇರಿಗೆ ಹೋಗುತ್ತಿದ್ದರೆನ್ನಲಾಗಿದೆ. ದಾಳಿಯಲ್ಲಿ ಸುಲೈಮಾನಿ, ಇರಾಕ್‌ನ ಖಾಸಗಿ ಪಡೆಯೊಂದರ ನಾಯಕ ಅಬು ಮಹದಿ ಅಲ್-ಮುಹಂದಿಸ್ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ.

ಬಗ್ದಾದ್ ವಿಮಾನ ನಿಲ್ದಾಣದತ್ತ ತೆರಳಿದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದರು. ಜನರು ಸುಲೈಮಾನಿ ಮತ್ತು ಮುಹಂದಿಸ್‌ರ ಭಾವಚಿತ್ರಗಳನ್ನೊಳಗೊಂಡ ಫಲಕಗಳನ್ನು ಪ್ರದರ್ಶಿಸಿದರು.

ದಾಳಿ ನಡೆದ ಸ್ಥಳದಲ್ಲಿ ಸುಲೈಮಾನಿ ಮತ್ತು ಮುಹಂದಿಸ್‌ರ ಭಾವಚಿತ್ರಗಳನ್ನು ಇಡಲಾಗಿತ್ತು. ಜನರು ಅಲ್ಲಿ ಮೇಣದಬತ್ತಿಗಳನ್ನು ಹೊತ್ತಿಸಿದರು.

ಸುಲೈಮಾನಿ ಇರಾನ್‌ನ ರೆವಲೂಶನರಿ ಗಾರ್ಡ್ಸ್‌ನ ಉನ್ನತ ಘಟಕವಾಗಿರುವ ಖುದ್ಸ್ ಫೋರ್ಸ್‌ನ ಮುಖ್ಯಸ್ಥರಾಗಿದ್ದರು. ಹೊರದೇಶಗಳಲ್ಲಿನ ಸೇನಾ ಕಾರ್ಯಾಚರಣೆಯ ಹೊಣೆಯನ್ನು ಈ ಸೇನಾ ಘಟಕ ಹೊತ್ತಿದೆ. ತನ್ನ ಕೆಲಸದ ಭಾಗವಾಗಿ ಸುಲೈಮಾನಿ ನಿರಂತರವಾಗಿ ಇರಾಕ್, ಲೆಬನಾನ್ ಮತ್ತು ಸಿರಿಯಗಳ ನಡುವೆ ಓಡಾಡುತ್ತಿದ್ದರು.

ಶತ್ರುವಿನ ಯಾವುದೇ ಕೃತ್ಯಕ್ಕೆ ನಿರ್ಣಾಯಕ ಪ್ರತಿಕ್ರಿಯೆ: ರೆವಲೂಶನರಿ ಗಾರ್ಡ್ಸ್ ಮುಖ್ಯಸ್ಥ ಎಚ್ಚರಿಕೆ

 ‘‘ಶತ್ರು ತೆಗೆದುಕೊಳ್ಳುವ ಯಾವುದೇ ಕ್ರಮ’’ಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಇರಾನ್‌ನ ಸೇನೆ ರೆವಲೂಶನರಿ ಗಾರ್ಡ್ಸ್‌ನ ಮುಖ್ಯಸ್ಥ ಹುಸೇನ್ ಸಲಾಮಿ ಶನಿವಾರ ಘೋಷಿಸಿದ್ದಾರೆ.

ಕಳೆದ ವರ್ಷ ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿ ಅಮೆರಿಕ ನಡೆಸಿದ ದಾಳಿಯಲ್ಲಿ ಹತ್ಯೆಗೀಡಾಗಿರುವ ಇರಾನ್ ಸೇನೆಯ ಉನ್ನತ ನಾಯಕ ಖಾಸಿಮ್ ಸುಲೈಮಾನಿಯ ಮೊದಲ ವಾರ್ಷಿಕ ಪುಣ್ಯತಿಥಿಯ ಮುನ್ನಾ ದಿನದಂದು ಅವರು ಈ ಎಚ್ಚರಿಕೆ ನೀಡಿದ್ದಾರೆ.

ಆಯಕಟ್ಟಿನ ಅಬು ಮೂಸ ದ್ವೀಪಕ್ಕೆ ಭೇಟಿ ನೀಡಿ, ಅಲ್ಲಿರುವ ಇರಾನ್ ಸೈನಿಕರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

‘‘ಪರಿಸ್ಥಿತಿಯನ್ನು ಅವಲೋಕಿಸಲು ನಾವಿಂದು ಇಲ್ಲಿದ್ದೇವೆ. ನಮ್ಮ ಶತ್ರು ಕೆಲವು ಸಲ ಜಂಭಕೊಚ್ಚಿಕೊಳ್ಳುತ್ತದೆ ಹಾಗೂ ಬೆದರಿಕೆ ಹಾಕುತ್ತದೆ. ಸಮುದ್ರದಲ್ಲಿ ನಾವು ಹೊಂದಿರುವ ಸಾಮರ್ಥ್ಯದ ಬಗ್ಗೆ ಅರಿವಿರಲಿ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X