ಕಾರು ಢಿಕ್ಕಿ: ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಮೃತ್ಯು
ಕಾಪು, ಜ.3: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.3ರಂದು ಬೆಳಗಿನ ಜಾವ 5.30ರ ಸುಮಾರಿಗೆ ಪಾಂಗಾಳ ಬರೋಡಾ ಬ್ಯಾಂಕ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಪಾಂಗಾಳ ಪಟೇಲ್ ಕಾಂಪೌಂಡು ನಿವಾಸಿ ಕೃಷ್ಣ ಪೂಜಾರಿ (65) ಎಂದು ಗುರುತಿಸಲಾಗಿದೆ. ಎದುರಿನಲ್ಲಿದ್ದ ಸ್ಕೂಟರ್ನ್ನು ಓವರ್ ಟೇಕ್ ಮಾಡಿಕೊಂಡು ಮಂಗಳೂರು ಕಡೆಯಿಂದ ಬಂದ ಕಾರು ಬಸ್ಸಿಗಾಗಿ ಕಾಯುತ್ತಿದ್ದ ಕೃಷ್ಣ ಪೂಜಾರಿಗೆ ಢಿಕ್ಕಿ ಹೊಡೆಯಿತ್ತೆನ್ನಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಇದೇ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಬಿದ್ದಿದ್ದು ಇದರಿಂದ ಸ್ಕೂಟರ್ ಸವಾರ ಕೂಡ ಗಾಯಗೊಂಡಿದ್ದಾರೆ. ಕಾರು ಚಾಲಕ ಕಾರನ್ನು ನಿಲ್ಲಿ ಸದೆ ಪರಾರಿಯಾಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story