ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಬೈಂದೂರು, ಜ.3: ಕಾರೊಂದು ಢಿಕ್ಕಿ ಹೊಡೆದ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಾಲೆಬಾಗಿಲು ಬಸ್ ನಿಲ್ದಾಣದ ಬಳಿಯ ಬಸ್ ಬೇ ರಾ.ಹೆ.66ಯಲ್ಲಿ ಜ.2ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ನಾಗೂರು ನಿವಾಸಿ ಬುದ್ದಿವಂತ ನಾಯರಿ (60) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಬಂದ ಕಾರು ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ನಾಯರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story