Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ3 Jan 2021 11:46 PM IST
share
ಓ ಮೆಣಸೇ...

ಕುರುಬರ ಹೋರಾಟಕ್ಕೂ ಆರೆಸ್ಸೆಸ್‌ಗೂ ಸಂಬಂಧ ಇಲ್ಲ- ಎಚ್.ಎಂ.ರೇವಣ್ಣ, ಮಾಜಿ ಸಚಿವ
ಕುರಿಗೂ ತೋಳಕ್ಕೂ ಎತ್ತಣೆತ್ತಣ ಸಂಬಂಧವಯ್ಯ?


ಕೆಲವರು ದಿಲ್ಲಿಯಲ್ಲಿ ಕುಳಿತು ನನಗೆ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದ್ದಾರೆ-ನರೇಂದ್ರ ಮೋದಿ, ಪ್ರಧಾನಿ
ನೀವು ಬಾಲ್ಯದಲ್ಲಿ ಶಾಲೆಯಲ್ಲಿ ಕುಳಿತು ಮೇಷ್ಟ್ರಿಂದ ಪ್ರಜಾಪ್ರಭುತ್ವದ ಪಾಠ ಕೇಳಿದ್ದಿದ್ದರೆ ಈಗ ದಿಲ್ಲಿಯಲ್ಲಿ ಪಾಠ ಕೇಳುವ ಅಗತ್ಯ ಬೀಳುತ್ತಿರಲಿಲ್ಲ.


ನಾನು ಇರುವಷ್ಟು ದಿನ ಮಾತ್ರವಲ್ಲ, ನಾನು ಹೋದ ಮೇಲೆಯೂ ಜೆಡಿಎಸ್ ಉಳಿಯಲಿದೆ-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಬಿಜೆಪಿಯ ಮೇಲೆ ಅಷ್ಟೊಂದು ಭರವಸೆಯೇ?


ಶಿಸ್ತು ಬದ್ಧ ಪಕ್ಷ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳರಂತಹ ಶಾಸಕರ ನಡವಳಿಕೆಗಳು ಪಕ್ಷಕ್ಕೆ ಗೌರವ ತರುವಂತಹದ್ದಲ್ಲ- ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ
ಯಡಿಯೂರಪ್ಪರನ್ನು ಇಳಿಸುವ ಆರೆಸ್ಸೆಸ್‌ನ ಮರಳಿ ಯತ್ನದ ಭಾಗ ಯತ್ನಾಳ್.


ಆರೆಸ್ಸೆಸ್ ಎಂದರೆ ಮೈಲಿಗೆ ಯಾಕೆ? -ಎಚ್.ವಿಶ್ವನಾಥ್,ವಿ.ಪ.ಸದಸ್ಯ
ಆರೆಸ್ಸೆಸ್‌ಗೆ ಸದ್ಯಕ್ಕೆ ನೀವೆಂದರೆ ಮೈಲಿಗೆ.


ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ನೆಲೆಯೂರಿದ್ದು, ಯಾರ ಸಹಾಯವೂ ಅಗತ್ಯವಿಲ್ಲ -ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ
ಶಾಸಕರನ್ನು ಕೊಂಡುಕೊಂಡದ್ದು ಸ್ವಂತ ಹಣದಿಂದ ಎಂದು ಹೇಳುತ್ತಿದ್ದೀರಾ?


ನಾನು ಗೋ ಕೊರೋನ ಎಂದಿದ್ದಕ್ಕೆ ಕೊರೋನ ಹೋಗಿದೆ. ರೂಪಾಂತರಿತ ಕೊರೋನಕ್ಕೆ ನಾನೀಗ ನೋ ಕೊರೋನ ಎಂದು ಹೇಳುತ್ತಿದ್ದೇನೆ- ರಾಮದಾಸ್ ಅಠಾವಳೆ, ಕೇಂದ್ರ ಸಚಿವ
ನಿಮ್ಮಂತಹ ಆರೆಸ್ಸೆಸ್ ರೂಪಾಂತರಿತ ದಲಿತ ನಾಯಕರಿಗಿಂತ ಈ ಕೊರೋನವೇ ವಾಸಿ.


ದಿಲ್ಲಿಯಲ್ಲಿ ರೈತರ ಪ್ರತಿಭಟನೆ ಇನ್ನೂ ಮುಂದುವರಿದಿರುವುದು ಕೇಂದ್ರ ಸರಕಾರದ ವೈಫಲ್ಯಕ್ಕೆ ಸಾಕ್ಷಿ -ಅಖಿಲೇಶ್ ಯಾದವ್, ಎಸ್ಪಿ ಅಧ್ಯಕ್ಷ
ವೈಫಲ್ಯವೇ ನಮ್ಮ ಸಾಧನೆ ಎಂದು ಮೋದಿ ಹೇಳುತ್ತಿದ್ದಾರೆ.


ಇಂದು ಇಡೀ ಜಗತ್ತು ಭಾರತವನ್ನು ಗುರುವಿನ ಸ್ಥಾನದಲ್ಲಿ ನೋಡುತ್ತಿದೆ -ಕಲ್ಲಡ್ಕ ಪ್ರಭಾಕರ ಭಟ್, ಆರೆಸ್ಸೆಸ್ ಮುಖಂಡ 
ಕಳ್ಳರ ಗುರು ಇದನ್ನು ಆಳುತ್ತಿದ್ದಾರೆ ಎನ್ನುವ ಕಾರಣಕ್ಕಿರಬಹುದೇ?


ಮುಖ್ಯಮಂತ್ರಿ ಯಾರಾಗಬೇಕೆಂಬ ಕಿತ್ತಾಟ ಬಿಟ್ಟು ಎಲ್ಲರೂ ಒಟ್ಟಾಗಿ ಕಾಂಗ್ರೆಸನ್ನು ಅಧಿಕಾರಕ್ಕೆ ತರಬೇಕು - ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಮುಖಂಡ
ಅಧಿಕಾರಕ್ಕೆ ತಂದ ಬಳಿಕ ಕಿತ್ತಾಟ ಮಾಡಿ ಎಂದು ಹೇಳುತ್ತಿದ್ದಾರೆ.


ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಶಾಲು-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಕಾಂಗ್ರೆಸನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾರ ಶಾಲು?


ನಂಬಿಕೆ ಎನ್ನುವುದು ಎಲ್ಲವನ್ನೂ ಮೀರಿದ್ದು, ಜಗತ್ತು ನಡೆಯುತ್ತಿರುವುದೇ ನಂಬಿಕೆಗಳ ಆಧಾರದಲ್ಲಿ -ಸಿ.ಟಿ.ರವಿ, ಮಾಜಿ ಸಚಿವ
ಮೋದಿಯ ಮೇಲೆ ನಂಬಿಕೆ ಇಟ್ಟು ಮೋಸ ಹೋದವರಿಗೆ ಸಮಾಧಾನ ಹೇಳುತ್ತಿದ್ದಾರೆ.


ಬಿಜೆಪಿ ಬಯಸಿದರೆ ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲು ಸಿದ್ಧ - ನಿತೀಶ್ ಕುಮಾರ್, ಬಿಹಾರ ಮುಖ್ಯಮಂತ್ರಿ
ಬಿಜೆಪಿಗಾಗಿ ಜೆಡಿಯು ಪಕ್ಷವನ್ನೇ ಬಿಟ್ಟುಕೊಟ್ಟ ಕರ್ಣ ತಾವು.


ಒಂದು ವೇಳೆ ಮುಸ್ಲಿಮರು ಗೋಮಾಂಸ ತಿನ್ನದಿರುತ್ತಿದ್ದರೆ ಬಿಜೆಪಿಯವರಿಗೆ ಗೋವು ಪೂಜನೀಯವೂ ಪವಿತ್ರವೂ ಆಗುತ್ತಿರಲಿಲ್ಲ - ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಾಯಕ
ಗೋಮಾಂಸ ತಿನ್ನುವುದಕ್ಕೆ ಒತ್ತಾಯಿಸಿ ಹಲ್ಲೆ ನಡೆಸುತ್ತಿದ್ದರೇನೋ?


ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿ- ಯಡಿಯೂರಪ್ಪ, ಸಿಎಂ 
ಆ ಬಳಿಕ ನೀವು ಪಕ್ಷಾಂತರ ಮಾಡುವ ಉದ್ದೇಶವಿದೆಯೇ?


ಜಗತ್ತಿನ ಅತೀ ದೊಡ್ಡ ಕೊರೋನ ಲಸಿಕೆ ವಿತರಣೆಗೆ ನಾವು ಸಿದ್ಧರಾಗುತ್ತಿದ್ದೇವೆ - ನರೇಂದ್ರ ಮೋದಿ, ಪ್ರಧಾನಿ
ಕೊರೋನ ವಿತರಿಸುವಲ್ಲಿ ಯಶಸ್ವಿಯಾದಷ್ಟು ಸುಲಭ ಇದಲ್ಲ.


ಮನೆಯಲ್ಲಿ ನೋಡಿಕೊಳ್ಳುವಷ್ಟೇ ಜೋಪಾನವಾಗಿ ಶಾಲೆಗಳಲ್ಲಿ ನಮ್ಮೆಲ್ಲ ಶಿಕ್ಷಕರು ಮಕ್ಕಳನ್ನು ನೋಡಿಕೊಳ್ಳಲಿದ್ದಾರೆ- ಸುರೇಶ್ ಕುಮಾರ್, ಸಚಿವ
ಹಾಗಾದಲ್ಲಿ ಮಕ್ಕಳು ಕೊರೋನಗೆ ಥ್ಯಾಂಕ್ಸ್ ಹೇಳಲಿದ್ದಾರೆ. ಶಿಕ್ಷಕರ ಮನಸ್ಥಿತಿಯನ್ನು ಬದಲಿಸಿದ್ದಕ್ಕೆ.


ಮದುವೆಗಾಗಿ ಧರ್ಮ ಬದಲು ಮಾಡಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ - ರಾಜನಾಥ್ ಸಿಂಗ್, ಕೇಂದ್ರ ಸಚಿವ
ರಾಜಕೀಯಕ್ಕೆ ಧರ್ಮ ಬಳಸುವುದನ್ನು ಎಲ್ಲರೂ ಒಪ್ಪುತ್ತಾರೆಯೇ?


ದೇವರು ಎಚ್ಚರಿಕೆ ಕೊಟ್ಟಿದ್ದಾನೆ ರಾಜಕೀಯ ಪ್ರವೇಶಿಸಲಾರೆ - ರಜನಿಕಾಂತ್, ನಟ
ದೇವರು ಕೊನೆಗೂ ಬುದ್ಧಿ ಕೊಟ್ಟ.


ಹೊಸ ತಲೆಮಾರಿನವರು ಆರೆಸ್ಸೆಸ್ ಬೆಳೆದು ಬಂದ ದಾರಿಯನ್ನು ತಿಳಿದುಕೊಳ್ಳಬೇಕು - ಮೋಹನ್ ಭಾಗವತ್, ಆರೆಸ್ಸೆಸ್ ಮುಖ್ಯಸ್ಥ
ಹೌದು. ಆಗಲಾದರೂ ಅವರು ಅದರಿಂದ ದೂರ ಉಳಿಯಬಹುದು.


ವಯಸ್ಸಾದ ಹಸುಗಳನ್ನು ಹಾಗೂ ಗಂಡು ಕರುಗಳನ್ನು ಹತ್ತಿರದ ಗೋಶಾಲೆಗೆ ನೀಡಬಹುದು -ಪ್ರಭು ಚೌಹಾಣ್, ಸಚಿವ
ಗೋಶಾಲೆಗಳಿಂದಲೇ ಕಸಾಯಿಖಾನೆಗೆ ಕಳುಹಿಸುವ ವ್ಯವಸ್ಥೆ ಇರಬೇಕು.


ಯುಪಿಎಯ ಮುಖ್ಯಸ್ಥನಾಗಲು ನನಗೆ ಯಾವುದೇ ಆಸಕ್ತಿ ಇಲ್ಲ- ಶರದ್ ಪವಾರ್, ಎನ್‌ಸಿಪಿ ಮುಖ್ಯಸ್ಥ
ಅಧಿಕಾರ ಇಲ್ಲದಿರುವ ಯುಪಿಎಯ ಮೇಲೆ ಆಸಕ್ತಿ ಹುಟ್ಟುವುದಾದರೂ ಹೇಗೆ?


ಬಿಜೆಪಿಯ ಜನವಿರೋಧಿ ನೀತಿಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ - ಡಾ.ಜಿ.ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ
ಬಿಜೆಪಿಯ ಜನವಿರೋಧಿ ನೀತಿ ಮೊದಲು ನಿಮ್ಮ ಪಕ್ಷದ ಕಾರ್ಯಕರ್ತರಿಗೆ ಮನವರಿಕೆಯಾಗಬೇಕಲ್ಲ?

share
ಪಿ.ಎ.ರೈ
ಪಿ.ಎ.ರೈ
Next Story
X