Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಾಸ್ಟೆಲ್ ವಿದ್ಯಾರ್ಥಿಗಳ ಗಂಟಲ ದ್ರವ...

ಹಾಸ್ಟೆಲ್ ವಿದ್ಯಾರ್ಥಿಗಳ ಗಂಟಲ ದ್ರವ ಮಾದರಿಯ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ4 Jan 2021 9:44 PM IST
share

ಮಂಗಳೂರು : ನಗರದ ಕೊಟ್ಟಾರ ಚೌಕಿಯ ಅಪಾರ್ಟ್‌ಮೆಂಟ್‌ನಲ್ಲಿ ಹಾಸ್ಟೆಲ್ ಹೊಂದಿರುವ ನರ್ಸಿಂಗ್ ಕಾಲೇಜೊಂದರ 6 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ ಕಂಡುಬಂದ ಬೆನ್ನಲ್ಲೇ ಅಲ್ಲಿರುವ ಎಲ್ಲ ವಿದ್ಯಾರ್ಥಿಗಳು ಸೇರಿ ಇತರ ಸಿಬ್ಬಂದಿಯನ್ನೂ ಪ್ರಾಥಮಿಕ ಸಂಪರ್ಕ ಎಂದು ಪರಿಗಣಿಸಿರುವ ಜಿಲ್ಲಾ ಆರೋಗ್ಯ ಇಲಾಖೆ, ಅವರೆಲ್ಲರ ಗಂಟಲ ದ್ರವ ಮಾದರಿಯನ್ನು ಪಡೆದುಕೊಂಡಿದೆ.

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸಂಪರ್ಕದಲ್ಲಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಮತ್ತು ಮೂವರು ಸಿಬ್ಬಂದಿ ಸಹಿತ 68 ಮಂದಿಯ ಮಾದರಿಯನ್ನು ಪಡೆದುಕೊಳ್ಳಲಾಗಿದ್ದು, ಮಂಗಳವಾರ ವರದಿ ನಿರೀಕ್ಷೆ ಮಾಡಲಾಗಿದೆ. ಪಾಸಿಟಿವ್ ವಿದ್ಯಾರ್ಥಿಗಳನ್ನು ಅದೇ ಹಾಸ್ಟೆಲ್‌ನ ಒಂದು ಮಹಡಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೆ, ಉಳಿದ ವಿದ್ಯಾರ್ಥಿಗಳಿಗೆ ಇನ್ನೊಂದು ಅಂತಸ್ತಿನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಏಳು ದಿನ ಗಳ ಬಳಿಕ ಮತ್ತೆ ಎಲ್ಲ ಪ್ರಾಥಮಿಕ ಸಂಪರ್ಕಿತರ ಪರೀಕ್ಷೆ ನಡೆಸಲಾಗುವುದು ಎಂದು ಕೋವಿಡ್-19 ಜಿಲ್ಲಾ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.

ಇದಕ್ಕೂ ಮೊದಲು 78 ಕೊರೋನ ಪಾಸಿಟಿವ್ ಕಂಡು ಬಂದ ಬೇರೆ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ಹೊಸದಾಗಿ ಯಾವ ವಿದ್ಯಾರ್ಥಿಗೂ ಕೊರೋನ ದೃಢಪಟ್ಟಿಲ್ಲ. ಅಲ್ಲಿರುವ ಎಲ್ಲ 743 ವಿದ್ಯಾರ್ಥಿಗಳ ಮಾದರಿಯನ್ನು ಮತ್ತೆ ಪಡೆದುಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಬ್ರಿಟನ್ ವೈರಸ್ ವರದಿ ಬಾಕಿ: ಬ್ರಿಟನ್‌ನಿಂದ ಮಂಗಳೂರಿಗೆ ಬಂದಿರುವ 118 ಮಂದಿಯಲ್ಲಿ ಇಬ್ಬರ ವರದಿ ಬರಲು ಇನ್ನೂ ಬಾಕಿಯಿದೆ. ಇದುವರೆಗೆ ತಾಯ್ನಿಡಿಗೆ ಆಗಮಿಸಿದ ಯಾರಲ್ಲೂ ರೂಪಾಂತರಿತ ವೈರಸ್ ಇರುವ ವರದಿ ಬಂದಿಲ್ಲ ಎಂದು ಡಾ.ಅಶೋಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X