Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಏನಿದು ಸೆರೆಬ್ರಲ್ ಪಾಲ್ಸಿ?

ಏನಿದು ಸೆರೆಬ್ರಲ್ ಪಾಲ್ಸಿ?

ವಾರ್ತಾಭಾರತಿವಾರ್ತಾಭಾರತಿ5 Jan 2021 6:29 PM IST
share
ಏನಿದು ಸೆರೆಬ್ರಲ್ ಪಾಲ್ಸಿ?

ಮಗುವಿನ ಜನನಕ್ಕೆ ಮುನ್ನ,ಜನನದ ಸಂದರ್ಭ ಮತ್ತು ಜನನದ ನಂತರ ಮಿದುಳಿಗೆ ಉಂಟಾಗುವ ಹಾನಿಯಿಂದಾಗಿ ಕಾಣಿಸಿಕೊಳ್ಳುವ ವೈಕಲ್ಯಗಳ ಸಮೂಹವನ್ನು ಸೆರೆಬ್ರಲ್ ಪಾಲ್ಸಿ ಎಂದು ಕರೆಯಲಾಗುತ್ತದೆ. ಇದು ನರಮಂಡಲಕ್ಕೆ ಸಂಬಂಧಿಸಿದ ಕಾಯಿಲೆಯಾಗಿದ್ದು ಚಲನವಲನ ಕುಂಠಿತಗೊಳ್ಳುವುದು ಮತ್ತು ನರಗಳು ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಇದರ ವೈಶಿಷ್ಟ್ಯಗಳಾಗಿವೆ. ಸೆರೆಬ್ರಲ್ ಪಾಲ್ಸಿಯಿಂದ ಪೀಡಿತರು ಚಲನವಲನದ ಮತ್ತು ಕೈಗಳ ಬಳಕೆಯ ಸಮಸ್ಯೆಯನ್ನು ಹೊಂದಿರುತ್ತಾರೆ. ಸಂವಹನದ ಸಮಸ್ಯೆಯೂ ಅವರಿಗಿರುತ್ತದೆ.

 ಸೆರೆಬ್ರಲ್ ಪಾಲ್ಸಿಯನ್ನುಂಟು ಮಾಡುವ ಹಲವಾರು ಕಾರಣಗಳಿವೆ. ಸಮಸ್ಯೆಯ ಲಕ್ಷಣಗಳು ಮಗು ಜನಿಸಿದಾಗ ಅಥವಾ ತಿಂಗಳುಗಳು ಅಥವಾ ವರ್ಷಗಳ ಬಳಿಕ ಪ್ರಕಟಗೊಳ್ಳಬಹುದು. ಮಿದುಳಿಗೆ ಸಾಕಷ್ಟು ಆಮ್ಲಜನಕದ ಕೊರತೆ,ತಾಯಿಯಲ್ಲಿ ಜರ್ಮನ್ ದಡಾರಗಳಂತಹ ಸೋಂಕುಗಳು,ಗರ್ಭಾವಸ್ಥೆಯ ಮೊದಲ 4-5 ತಿಂಗಳುಗಳಲ್ಲಿ ಟೊಕ್ಸೊಪ್ಲಾಸ್ಮಾಸಿಸ್ ಆಗುವುದು ಇವೆಲ್ಲ ಸೆರೆಬ್ರಲ್ ಪಾಲ್ಸಿಗೆ ಕಾರಣವಾಗುತ್ತವೆ. ತಾಯಿಗೆ ಮಧುಮೇಹ,ಹೃದಯ ಸಮಸ್ಯೆ,ತೀವ್ರ ಅಸ್ತಮಾ ಮತ್ತು ಥೈರಾಯ್ಡ್ ಸಮಸ್ಯೆಗಳಿದ್ದರೂ ಮಗು ಸೆರೆಬ್ರಲ್ ಪಾಲ್ಸಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಗರ್ಭಿಣಿಯಾಗಿದ್ದಾಗ ವೈದ್ಯರ ಸಲಹೆ ಪಡೆಯದೆ ಔಷಧಿ ಸೇವನೆ, ಪ್ರಸವಪೂರ್ವ ನೋವಿನ ಸಂದರ್ಭದಲ್ಲಿ ಅಥವಾ ಪ್ರಸವದ ವೇಳೆ ಮಿದುಳಿಗೆ ಪೆಟ್ಟು,ಮಿದುಳು ರಕ್ತಸ್ರಾವ,ಫೋರ್ಸೆಪ್‌ಗಳ ಬಕೆ, ಅವಧಿಗೆ ಮುನ್ನವೇ ಜನನ ಇವೂ ಈ ಸಮಸ್ಯೆಯನ್ನುಂಟು ಮಾಡುತ್ತವೆ. ಆದರೆ ಸೆರೆಬ್ರಲ್ ಪಾಲ್ಸಿಗೆ ನಿಖರವಾದ ಕಾರಣವನ್ನು ಹೇಳುವುದು ಕಷ್ಟ.

ಸೆರೆಬ್ರಲ್ ಪಾಲ್ಸಿಯನ್ನು ಸಮಸ್ಯೆಯ ಲಕ್ಷಣಗಳು,ತೀವ್ರತೆ ಮತ್ತು ತೊಂದರೆಗಳನ್ನು ಅವಲಂಬಿಸಿ ಸ್ಪಾಸ್ಟಿಕ್,ಅಥೆಟಾಯ್ಡಿ,ಅಟಾಕ್ಸಿಕ್ ಮತ್ತು ಮಿಕ್ಸಡ್ ಹೀಗೆ ನಾಲ್ಕು ವಿಧಗಳಲ್ಲಿ ವರ್ಗೀಕರಿಸಲಾಗಿದೆ.

ವಿಷಾದದ ವಿಷಯವೆಂದರೆ ಮಗು ಒಮ್ಮೆ ಸೆರೆಬ್ರಲ್ ಪಾಲ್ಸಿಗೆ ತುತ್ತಾದರೆ ಜೀವನಪರ್ಯಂತ ಅದರೊಂದಿಗೆ ಬಾಳಬೇಕಾಗುತ್ತದೆ. ಆರಂಭದ ಹಂತದಲ್ಲಿಯೇ ಇದನ್ನು ಪತ್ತೆ ಹಚ್ಚಿದರೆ ಚಿಕಿತ್ಸೆಯನ್ನು ಬೇಗನೇ ಆರಂಭಿಸಬಹುದು. ನಿರ್ದಿಷ್ಟವಾದ ಚಿಕಿತ್ಸೆಯಿಲ್ಲವಾದರೂ ಮಗುವನ್ನು ತನ್ನ ಕೆಲಸಗಳನ್ನು ಸ್ವತಂತ್ರವಾಗಿ ಮಾಡಿಕೊಳ್ಳಲು ಸಮರ್ಥವಾಗಿಸುವುದು ಚಿಕಿತ್ಸೆಯ ಮುಖ್ಯ ಉದ್ದೇಶವಾಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X