Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ: ಪಿಯುಸಿ ಶೇ.76.31, ಎಸೆಸೆಲ್ಸಿ...

​ಉಡುಪಿ: ಪಿಯುಸಿ ಶೇ.76.31, ಎಸೆಸೆಲ್ಸಿ ಶೇ.85.3 ಮಕ್ಕಳ ಹಾಜರಾತಿ

ವಾರ್ತಾಭಾರತಿವಾರ್ತಾಭಾರತಿ6 Jan 2021 8:24 PM IST
share

ಉಡುಪಿ, ಜ.6: ಬುಧವಾರ ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಶೇ.76.31ರಷ್ಟು ಹಾಗೂ ಎಸೆಸೆಲ್ಸಿಯಲ್ಲಿ ಶೇ.85.3ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದಾರೆ. ವಿದ್ಯಾಗಮದಲ್ಲಿ 6ನೇ ತರಗತಿಯ ಶೇ.66 ಹಾಗೂ 9ನೇ ತರಗತಿಯ ಶೇ.65ರಷ್ಟು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದಾರೆ ಎಂದು ವಿದ್ಯಾ ಇಲಾಖೆ ನೀಡಿದ ಮಾಹಿತಿಗಳು ತಿಳಿಸಿವೆ.

ದ್ವಿತೀಯ ಪಿಯುಸಿಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 14797 ವಿದ್ಯಾರ್ಥಿಗಳಿದ್ದು, ಇವರಲ್ಲಿ 11,293 ಮಂದಿ (ಶೇ.76.31) ಇಂದು ತರಗತಿಗೆ ಹಾಜರಾಗಿದ್ದಾರೆ. 7298 ಬಾಲಕರ ಪೈಕಿ 5246 ಮಂದಿ (ಶೇ.71.88) ಹಾಗೂ 7530 ಬಾಲಕಿಯರ ಪೈಕಿ 6037 (ಶೇ.80.17) ಮಂದಿ ಇಂದು ತರಗತಿಯಲ್ಲಿ ಪಾಠ ಕೇಳಿದ್ದಾರೆ.

ಸರಕಾರಿ ಪಿಯು ಕಾಲೇಜುಗಳ 5064 ವಿದ್ಯಾರ್ಥಿಗಳ ಪೈಕಿ 3987 ಮಂದಿ (ಶೇ.78.73), ಅನುದಾನಿತ ಶಾಲೆಗಳ 3639 ವಿದ್ಯಾರ್ಥಿಗಳ ಪೈಕಿ 2826 ಮಂದಿ (ಶೇ.77.65) ಹಾಗೂ ಅನುದಾನ ರಹಿತ ಶಾಲೆಗಳ 6094 ವಿದ್ಯಾರ್ಥಿಗಳ ಪೈಕಿ 4480 ಮಂದಿ (ಶೇ.73.51) ಬುದವಾರದ ತರಗತಿಗಳಿಗೆ ಹಾಜರಾಗಿದ್ದಾರೆ.

ವಿಭಾಗವಾರು ನೋಡುವಾಗ ಕಲಾ ವಿಭಾಗದಲ್ಲಿ ಕಲಿಯುತ್ತಿರುವ 1592 ವಿದ್ಯಾರ್ಥಿಗಳಲ್ಲಿ 1161 ಮಂದಿ (ಶೇ.72.92), ವಾಣಿಜ್ಯ ವಿಭಾಗದ 7729 ವಿದ್ಯಾರ್ಥಿಗಳ ಪೈಕಿ 6098 (ಶೇ.78.89) ಹಾಗೂ ವಿಜ್ಞಾನ ವಿಭಾಗದ 5347 ವಿದ್ಯಾರ್ಥಿಗಳ ಪೈಕಿ 4017 ಮಂದಿ (ಶೇ.75.12) ಇಂದು ಪಾಠ ಕೇಳಿದ್ದಾರೆ.

ಎಸೆಸೆಲ್ಸಿ ಶೇ.85: ಎಸೆಸೆಲ್ಸಿಯಲ್ಲಿ ಜಿಲ್ಲೆಯ ಐದು ವಲಯಗಳಲ್ಲಿ ಒಟ್ಟಾರೆಯಾಗಿ ಶೇ.85.3ರಷ್ಟು ಮಂದಿ ಬುಧವಾರದ ತರಗತಿಗಳಿಗೆ ಖುದ್ದಾಗಿ ಹಾಜರಾಗಿದ್ದಾರೆ. ಇವರಲ್ಲಿ ಸರಕಾರಿ ಶಾಲೆಗಳ ಶೇ.83 ಮಂದಿ, ಅನುದಾನಿತ ಶಾಲೆಗಳ ಶೇ.95 ಹಾಗೂ ಅನುದಾನ ರಹಿತ ಶಾಲೆಗಳ ಶೇ.78ರಷ್ಟು ಮಂದಿ ಮಕ್ಕಳು ಸೇರಿದ್ದಾರೆ ಎಂದು ಸಾರ್ವಜನಿ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರಿ ಶಾಲೆಗಳ 6408 ವಿದ್ಯಾರ್ಥಿಗಳ ಪೈಕಿ 4981 ಮಂದಿ, ಅನುದಾನಿತ ಶಾಲೆಗಳ 3166 ವಿದ್ಯಾರ್ಥಿಗಳ ಪೈಕಿ 3009 ಮಂದಿ ಹಾಗೂ ಅನುದಾನ ರಹಿತ ಶಾಲೆಗಳ 5899 ವಿದ್ಯಾರ್ಥಿಗಳ ಪೈಕಿ 4582 ಮಂದಿ ಇಂದು ತರಗತಿಗಳಿಗೆ ಹಾಜರಾಗಿದ್ದರು.

ವಿದ್ಯಾಗಮ ತರಗತಿ: 6 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂದು ನಡೆದ ವಿದ್ಯಾಗಮ ತರಗತಿಗಳಿಗೆ ಕ್ರಮವಾಗಿ ಶೇ.66 ಹಾಗೂ ಶೇ.65ರಷ್ಟು ವಿದ್ಯಾರ್ಥಿಗಳು ಪಾಠ ಆಲಿಸಲು ಹಾಜರಾಗಿದ್ದರು. ಸರಕಾರಿ ಶಾಲೆಗಳ ಎಂಟನೇ ತರಗತಿಯ 175 ವಿದ್ಯಾರ್ಥಿಗಳು ಸಹ ಇಂದು ಕ್ಲಾಸ್‌ಗೆ ಬಂದಿದ್ದರು.

ಆರನೇ ತರಗತಿಗೆ ಸರಕಾರಿ ಶಾಲೆಗಳಲ್ಲಿ ಶೇ.81ರಷ್ಟು, ಅನುದಾನಿತ ಶಾಲೆಗಳಲ್ಲಿ ಶೇ.71 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ.46ರಷ್ಟು ಬಾಲಕ-ಬಾಲಕಿಯರು ಹಾಜರಾಗಿದ್ದರೆ, ಒಂಭತ್ತನೇ ತರಗತಿಗೆ ಸರಕಾರಿ ಶಾಲೆಗಳಲ್ಲಿ ಶೇ.69, ಅನುದಾನಿತ ಶಾಲೆಗಳಲ್ಲಿ ಶೇ.81 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ.45ರಷ್ಟು ವಿದ್ಯಾರ್ಥಿಗಳು ಪಾಠ ಕಲಿಯಲು ಆಗಮಿಸಿದ್ದರು ಎಂದು ಮಾಹಿತಿ ತಿಳಿಸಿದೆ.

ಯಾರಿಗೂ ಕೋವಿಡ್ ಇಲ್ಲ

ಆರಂಭಿಕ ದಿನದಲ್ಲಿ ಬ್ರಹ್ಮಾವರ ವಲಯದ ಜಾನುವಾರಕಟ್ಟೆ ಶಾಲೆಯ ಶಿಕ್ಷಕರೊಬ್ಬರು ಹಾಗೂ ಹೆಬ್ರಿ ವಲಯದ ಮುನಿಯಾಲಿನ ಒಬ್ಬ ಶಾಲಾ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಬಳಿಕ ಜಿಲ್ಲೆಯಲ್ಲಿ ಯಾವುದೇ ಶಿಕ್ಷಕರಿಗಾಗಲೀ,ವಿದ್ಯಾರ್ಥಿಗಳಲ್ಲಾಗಲಿ ಕೋವಿಡ್ ಪಾಸಿಟಿವ್ ಕಂಡುಬಂದಿಲ್ಲ ಎಂದು ಜಿಲ್ಲಾ ವಿದ್ಯಾಂಗ ಇಲಾಖೆಯ ಅಧಿಕಾರಿಗಳು ಹಾಗೂ ಡಿಎಚ್‌ಓ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X