Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 6ನೇ ದಿನ ಪಿಯುಸಿ ಶೇ.75.67,...

ಉಡುಪಿ: 6ನೇ ದಿನ ಪಿಯುಸಿ ಶೇ.75.67, ಎಸೆಸೆಲ್ಸಿ ಶೇ.80.3 ಹಾಜರಾತಿ

ವಾರ್ತಾಭಾರತಿವಾರ್ತಾಭಾರತಿ7 Jan 2021 8:24 PM IST
share

ಉಡುಪಿ, ಜ.7: ಗುರುವಾರ ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಶೇ.75.67ರಷ್ಟು ಹಾಗೂ ಎಸೆಸೆಲ್ಸಿಯಲ್ಲಿ ಶೇ.80.3ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದಾರೆ. ವಿದ್ಯಾಗಮದಲ್ಲಿ 7ನೇ ತರಗತಿಯ ಶೇ.63.6 ಹಾಗೂ 8ನೇ ತರಗತಿಯ ಶೇ.63.3ರಷ್ಟು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದಾರೆ ಎಂದು ಜಿಲ್ಲಾ ವಿದ್ಯಾಂಗ ಇಲಾಖೆಗಳು ನೀಡಿದ ಮಾಹಿತಿಗಳು ತಿಳಿಸಿವೆ.

ದ್ವಿತೀಯ ಪಿಯುಸಿಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 14818 ವಿದ್ಯಾರ್ಥಿಗಳಿದ್ದು, ಇವರಲ್ಲಿ 11,214 ಮಂದಿ (ಶೇ.75.67) ಇಂದು ತರಗತಿಗೆ ಹಾಜರಾಗಿದ್ದಾರೆ. 7262 ಬಾಲಕರ ಪೈಕಿ 5220 ಮಂದಿ (ಶೇ.71.88) ಹಾಗೂ 7530 ಬಾಲಕಿಯರ ಪೈಕಿ 5996 (ಶೇ.79.62) ಮಂದಿ ಇಂದು ತರಗತಿಯಲ್ಲಿ ಪಾಠ ಕೇಳಿದ್ದಾರೆ.

ಸರಕಾರಿ ಪಿಯು ಕಾಲೇಜುಗಳ 4987 ವಿದ್ಯಾರ್ಥಿಗಳ ಪೈಕಿ 4030 ಮಂದಿ (ಶೇ.80.81), ಅನುದಾನಿತ ಶಾಲೆಗಳ 3659 ವಿದ್ಯಾರ್ಥಿಗಳ ಪೈಕಿ 2883 ಮಂದಿ (ಶೇ.78.79) ಹಾಗೂ ಅನುದಾನ ರಹಿತ ಶಾಲೆಗಳ 6172 ವಿದ್ಯಾರ್ಥಿಗಳ ಪೈಕಿ 4301 ಮಂದಿ (ಶೇ.69.68) ಗುರುವಾರದ ತರಗತಿಗಳಿಗೆ ಹಾಜರಾಗಿದ್ದಾರೆ.

ಕಲಾ ವಿಭಾಗದಲ್ಲಿ ಕಲಿಯುತ್ತಿರುವ 1599 ವಿದ್ಯಾರ್ಥಿಗಳಲ್ಲಿ 1212 ಮಂದಿ (ಶೇ.75.79), ವಾಣಿಜ್ಯ ವಿಭಾಗದ 7851 ವಿದ್ಯಾರ್ಥಿಗಳ ಪೈಕಿ 6053 (ಶೇ.77.09) ಹಾಗೂ ವಿಜ್ಞಾನ ವಿಭಾಗದ 5354 ವಿದ್ಯಾರ್ಥಿಗಳ ಪೈಕಿ 3923 ಮಂದಿ (ಶೇ.73.27) ಇಂದು ಪಾಠ ಕೇಳಿದ್ದಾರೆ.

ಎಸೆಸೆಲ್ಸಿ ಶೇ.85: ಎಸೆಸೆಲ್ಸಿಯಲ್ಲಿ ಜಿಲ್ಲೆಯ ಐದು ವಲಯಗಳಲ್ಲಿ ಒಟ್ಟಾರೆಯಾಗಿ ಶೇ.80.3ರಷ್ಟು ಮಂದಿ ಗುರುವಾರ ತರಗತಿಗಳಿಗೆ ಖುದ್ದಾಗಿ ಹಾಜರಾಗಿದ್ದಾರೆ. ಇವರಲ್ಲಿ ಸರಕಾರಿ ಶಾಲೆಗಳ ಶೇ.82 ಮಂದಿ, ಅನುದಾನಿತ ಶಾಲೆಗಳ ಶೇ.80 ಹಾಗೂ ಅನುದಾನ ರಹಿತ ಶಾಲೆಗಳ ಶೇ.79ರಷ್ಟು ಮಂದಿ ಮಕ್ಕಳು ಸೇರಿದ್ದಾರೆ ಎಂದು ಸಾರ್ವಜನಿ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಎಸೆಸೆಲ್ಸಿಯಲ್ಲಿ ಜಿಲ್ಲೆಯ ಐದು ವಲಯಗಳಲ್ಲಿ ಒಟ್ಟಾರೆಯಾಗಿ ಶೇ.80.3ರಷ್ಟು ಮಂದಿ ಗುರುವಾರ ತರಗತಿಗಳಿಗೆ ಖುದ್ದಾಗಿ ಹಾಜರಾಗಿದ್ದಾರೆ. ಇವರಲ್ಲಿ ಸರಕಾರಿ ಶಾಲೆಗಳ ಶೇ.82 ಮಂದಿ, ಅನುದಾನಿತ ಶಾಲೆಗಳ ಶೇ.80 ಹಾಗೂ ಅನುದಾನ ರಹಿತ ಶಾಲೆಗಳ ಶೇ.79ರಷ್ಟು ಮಂದಿ ಮಕ್ಕಳು ಸೇರಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಸರಕಾರಿ ಶಾಲೆಗಳ 6026 ವಿದ್ಯಾರ್ಥಿಗಳ ಪೈಕಿ 4937 ಮಂದಿ, ಅನುದಾನಿತ ಶಾಲೆಗಳ 3166 ವಿದ್ಯಾರ್ಥಿಗಳ ಪೈಕಿ 2545 ಮಂದಿ ಹಾಗೂ ಅನುದಾನ ರಹಿತ ಶಾಲೆಗಳ 5899 ವಿದ್ಯಾರ್ಥಿಗಳ ಪೈಕಿ 4653 ಮಂದಿ ಇಂದು ತರಗತಿಗಳಿಗೆ ಹಾಜರಾಗಿದ್ದರು.

ವಿದ್ಯಾಗಮ ತರಗತಿ: 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂದು ನಡೆದ ವಿದ್ಯಾಗಮ ತರಗತಿಗಳಿಗೆ ಕ್ರಮವಾಗಿ ಶೇ.63.66 ಹಾಗೂ ಶೇ.63.3 ರಷ್ಟು ವಿದ್ಯಾರ್ಥಿಗಳು ಪಾಠ ಆಲಿಸಲು ಹಾಜರಾಗಿದ್ದರು.

ಏಳನೇ ತರಗತಿಗೆ ಸರಕಾರಿ ಶಾಲೆಗಳಲ್ಲಿ ಶೇ.79ರಷ್ಟು, ಅನುದಾನಿತ ಶಾಲೆಗಳಲ್ಲಿ ಶೇ.68 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ.44ರಷ್ಟು ಬಾಲಕ-ಬಾಲಕಿಯರು ಹಾಜರಾಗಿದ್ದರೆ, ಎಂಟನೇ ತರಗತಿಗೆ ಸರಕಾರಿ ಶಾಲೆಗಳಲ್ಲಿ ಶೇ.77, ಅನುದಾನಿತ ಶಾಲೆಗಳಲ್ಲಿ ಶೇ.70 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ.43ರಷ್ಟು ವಿದ್ಯಾರ್ಥಿಗಳು ಪಾಠ ಕಲಿಯಲು ಆಗಮಿಸಿದ್ದರು ಎಂದು ಮಾಹಿತಿ ತಿಳಿಸಿದೆ.

ಮೂವರು ಶಿಕ್ಷಕರಿಗೆ ಪಾಸಿಟಿವ್ 

ಶಾಲೆಗಳ ಪುನರಾರಂಭಕ್ಕೆ ಮೊದಲು (ಡಿ.31ಕ್ಕೆ) ಜಿಲ್ಲೆಯ ಶಿಕ್ಷಕರು ಹಾಗೂ ಸ್ಟಾಫ್‌ಗಳಿಗೆ ನಡೆಸಿದ ಕೋವಿಡ್ ಆರ್‌ಟಿ-ಪಿಸಿಆರ್ ಪರೀಕ್ಷೆಗಳಲ್ಲಿ ಮೂವರು ಶಿಕ್ಷಕರು ಹಾಗೂ ಒಬ್ಬ ಶಾಲಾ ಸಿಬ್ಬಂದಿ ಪಾಸಿಟಿವ್ ಬಂದಿದ್ದಾರೆ ಎಂದು ಗೊತ್ತಾಗಿದೆ. ಇವರ್ಯಾರು ಸಹ ಶಾಲೆಗಳಿಗೆ ಹಾಜರಾ ಗುತ್ತಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ವಲಯಗಳ ಶಿಕ್ಷಕರು ಮತ್ತು ಹೆಬ್ರಿ ವಲಯದ ಶಾಲಾ ಸಿಬ್ಬಂದಿ ಕೋವಿಡ್‌ಗೆ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X