Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲಾತಿಯ ಪಾಠ ಯಾರಿಂದಲೂ ಕಲಿಯುವ...

ಮೀಸಲಾತಿಯ ಪಾಠ ಯಾರಿಂದಲೂ ಕಲಿಯುವ ಆವಶ್ಯಕತೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Jan 2021 10:39 PM IST
share
ಮೀಸಲಾತಿಯ ಪಾಠ ಯಾರಿಂದಲೂ ಕಲಿಯುವ ಆವಶ್ಯಕತೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಕಡೂರು, ಜ.7: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕೆಂಬ ಕೂಗಿನ ವಿರೋಧಿ ನಾನಲ್ಲ. ಮನುಷ್ಯರ ನಡುವೆ ಆರ್ಥಿಕವಾಗಿ, ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಎಲ್ಲ ಸಮಾಜಗಳ ಉನ್ನತಿ ಸಾಧ್ಯ. ನಾನು ಯಾರಿಂದಲೂ ಪಾಠ ಕಲಿಯುವ ಅಗತ್ಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ ಗುರುವಾರ ನಡೆದ ಕನಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆ ಬಂದಾಗ ಮಾತ್ರ ಮನುಷ್ಯ ಸಮುದಾಯದ ಉನ್ನತಿ ಸಾಧ್ಯ. ಕನಕ ಜಂಯತಿ ಆಚರಣೆ ಕೇವಲ ಕುರುಬ ಸಮುದಾಯಕ್ಕೆ ಮೀಸಲಲ್ಲ. ಅವರ ಆಚಾರ ವಿಚಾರಗಳು ಜಾತಿ ವ್ಯವಸ್ಥೆ ಮೀರಿದ ಆದರ್ಶಗಳಾಗಿವೆ ಮತ್ತು ಇಂದಿನ ಯುವಪೀಳಿಗೆಗೆ ಮಾದರಿಯಾಗಿವೆ ಎಂದರು.

ನಾನು ಶೋಷಿತರ ಪರವಾಗಿ ನಿಂತ ಮುಖ್ಯಮಂತ್ರಿ. ರಾಜಕೀಯ ಮೀಸಲಾತಿ ತಂದು ಪ್ರತಿಯೊಬ್ಬರಿಗೂ ನ್ಯಾಯ ನೀಡುವ ಪ್ರಯತ್ನ ಮಾಡಿದ್ದೇನೆ. ಪ್ರಸಕ್ತ ಯಾರಿಂದಲೂ ಮೀಸಲಾತಿಯ ಪಾಠ ಕಲಿಯುವ ಆವಶ್ಯಕತೆಯಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

ಗೋವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲದ ಗಿರಾಕಿಗಳಿಂದ ಗೋಹತ್ಯೆ ನಿಷೇದದ ಬಗ್ಗೆ ತಿಳಿಯುವ ಅವಶ್ಯಕತೆಯಿಲ್ಲ. ಸಗಣಿ ತೆಗೆಯದ, ಗಂಜಲ ಎತ್ತದ ಗಿರಾಕಿಗಳಿಂದ ಪಾಠವನ್ನೂ ಕಲಿಯಬೇಕಿಲ್ಲ. ಮುಖ್ಯಮಂತ್ರಿಯಾದಾಗ ಕುರಿ ಸತ್ತರೆ 5 ಸಾವಿರ ರೂ., ಹಸು ಹೆಮ್ಮೆ ಸತ್ತರೆ 10 ಸಾವಿರ ರೂ. ಪರಿಹಾರ ಕೊಡಲು ನಿರ್ಣಯ ಮಾಡಿದ್ದೆ. ಆದರೆ ಇಂದಿನ ಬಿಜೆಪಿ ಸರಕಾರ ಜನಪರ ಯೋಜನೆಯನ್ನು ನಿಲ್ಲಿಸಿದೆ. ಇಂತವರು ಗೋಹತ್ಯೆ ಬಗ್ಗೆ ಮಾತನಾಡುವುದು ಎಷ್ಠು ಸರಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕೆ.ಆರ್.ನಗರದ ಕನಕ ಗುರುಪೀಠದ ಶಿವಾನಂದಪುರಿ ಸ್ವಾಮೀಜಿ, ಬಿ ವಿ ನಗರದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಯಾದವ ಗುರುಪೀಠದ ಕೃಷ್ಣಯಾದವಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರದಾರ್ ಸೇವಾಲಾಲ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಭೋಗನಂಜುಂಡೇಶ್ವರ ವಿಶ್ವಸ್ಥ ಮಂಡಳಿ ಅಧ್ಯಕ್ಷ ಎಚ್.ಸಿ. ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಸದಸ್ಯ ಕೆ.ಎಸ್. ಆನಂದ್, ಭಕ್ತ ಕನಕದಾಸರ ಭಾವಚಿತ್ರ ಅನಾವರಣಗೊಳಿಸಿದರು. 

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಹೆಬ್ಬಾಳ ಶಾಸಕ ಬೈರತಿ ಸುರೇಶ್, ಹೊಸದುರ್ಗ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ತರೀಕೆರೆ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಟಿ.ಎಚ್. ಶಿವಶಂಕರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್, ಜಿಪಂ ಸದಸ್ಯೆ ವನಮಾಲಾ ದೇವರಾಜ್, ರೇಣುಕಾ ನಟರಾಜ್, ಮಹಿಳಾ ಕಾಂಗ್ರೆಸ್‍ನ ರೇಖಾಹುಲಿಯಪ್ಪ ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ತಿಪ್ಪೇರುದ್ರಯ್ಯ, ಜಿಪಂ ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X