Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಂಚಕ ಯುವರಾಜ್ ಬಂಧನ ಪ್ರಕರಣ: ಸಚಿವರ...

ವಂಚಕ ಯುವರಾಜ್ ಬಂಧನ ಪ್ರಕರಣ: ಸಚಿವರ ಜತೆಗಿದ್ದ ಫೋಟೋ ವೈರಲ್

ರಾಜ್ಯಪಾಲೆ ಹುದ್ದೆಗೆ 8.8 ಕೋಟಿ ಕೊಟ್ಟ ನಿವೃತ್ತ ನ್ಯಾಯಾಧೀಶೆ?

ವಾರ್ತಾಭಾರತಿವಾರ್ತಾಭಾರತಿ9 Jan 2021 8:33 PM IST
share
ವಂಚಕ ಯುವರಾಜ್ ಬಂಧನ ಪ್ರಕರಣ: ಸಚಿವರ ಜತೆಗಿದ್ದ ಫೋಟೋ ವೈರಲ್

ಬೆಂಗಳೂರು, ಜ.9: ವಂಚನೆ ಆರೋಪದಡಿ ಬಂಧನಕ್ಕೊಳಗಾಗಿರುವ ಯುವರಾಜ್ ಯಾನೆ ಸ್ವಾಮೀಯ ವಿಚಾರಣೆ ಮುಂದುವರಿದಿದ್ದು, ಈತ ರಾಜ್ಯ ಸರಕಾರದಲ್ಲಿ ಪ್ರಮುಖ ಹುದ್ದೆ ಪಡೆದಿರುವ ಸಚಿವರೊಬ್ಬರ ಮನೆಯ ದೇವರ ಕೋಣೆಯನ್ನೆ ಬದಲಾವಣೆ ಮಾಡಿದ್ದ ಎಂದು ಹೇಳಲಾಗುತ್ತಿದೆ.

ವಾಸ್ತು, ಜ್ಯೋತಿಷ್ಯ ಹೆಸರಿನಲ್ಲಿ ಸಚಿವರೊಬ್ಬರಿಗೆ ಬಹಳ ಆಪ್ತನಾಗಿದ್ದ. ಇದರ ನಡುವೆ ಮೂರು ತಿಂಗಳ ಹಿಂದೆ ಸಚಿವ ಸಂಪುಟ ಬದಲಾವಣೆಯ ಕೂಗು ಎದ್ದಿತ್ತು. ಈ ವೇಳೆ ಸಚಿವರೊಬ್ಬರ ಮನೆಗೆ ಆರೋಪಿ ಯುವರಾಜ್ ಭೇಟಿ ನೀಡಿ, ಅವರೊಂದಿಗೆ ಭೋಜನ ಸವಿದಿದ್ದ. ತದನಂತರ, ಮನೆಯ ವಾಸ್ತು ನುಡಿದು, ಈ ಮನೆಯಲ್ಲಿ ಸದಾದೈವ ಶಕ್ತಿಯ ಆಗಮನ ಆಗಬೇಕು ಎನ್ನುವ ಉದ್ದೇಶವಿದ್ದರೆ, ವಿಶೇಷವಾದ ಪೂಜಾ ಕೋಣೆ ಅಥವಾ ಕೊಠಡಿಯನ್ನು ನಿರ್ಮಿಸಬೇಕು ಎಂದಿದ್ದ. ಇದನ್ನು ತ್ವರಿತಗತಿ ಮಾಡಿದರೆ, ತಮ್ಮ ಸ್ಥಾನವೂ ಉಳಿಯಲಿದೆ ಎಂದು ನಂಬಿಕೆ ಹುಟ್ಟಿಸಿದ್ದ ಎಂದು ಮೂಲಗಳು ತಿಳಿಸಿವೆ. 

ಇನ್ನು, ಆರೋಪಿ ಯುವರಾಜ್ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಆ ಸಚಿವರು, ಪೂಜಾ ಕೋಣೆ ನಿರ್ಮಾಣಕ್ಕೆ ಕೈಹಾಕಿದ್ದರು ಎನ್ನಲಾಗಿದೆ.

ಆರೋಪಗಳ ಸರಮಾಲೆ: ಬಂಧಿತ ಯುವರಾಜ್ ವಿರುದ್ಧ ವಂಚನೆಗೊಳಗಾಗಿರುವ ಆರೋಪಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಿನೆಮಾ ನಿರ್ಮಾಪಕ ಸಹದೇವ್ ಎಂಬುವರಿಗೂ ವಂಚಿಸಿರುವ ಆರೋಪ ಕೇಳಿಬಂದಿದೆ.

ಸಿನಿಮಾ ನಿರ್ಮಾಣಕ್ಕೆ 70 ಲಕ್ಷ ರೂ. ಹಣ ಕೊಡಿಸುವುದಾಗಿ ವಂಚಿಸಿರುವ ಯುವರಾಜ್, ತನಗೆ 10 ಲಕ್ಷ ಹಣವನ್ನು ಕೊಡಿ ನಿಮಗೆ 70 ಲಕ್ಷ ಹಣವನ್ನು ಕೊಡಿಸುತ್ತೇನೆ ಎಂದು ಹೇಳಿ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಯುವರಾಜ್‍ನ ಮೇಲೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಚಿವರ ಜತೆ ಆರೋಪಿ: ಫೋಟೋ ವೈರಲ್

ಸಚಿವರಾದ ಲಕ್ಷ್ಮಣ ಸವದಿ, ವಿ.ಸೋಮಣ್ಣ ಆರೋಪಿ ಯುವರಾಜ್‍ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ ಎನ್ನಲಾದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯಪಾಲೆ ಹುದ್ದೆಗೆ 8.8 ಕೋಟಿ ಕೊಟ್ಟ ನಿವೃತ್ತ ನ್ಯಾಯಾಧೀಶೆ?

ರಾಜ್ಯಪಾಲೆ ಹುದ್ದೆಯನ್ನು ಬಯಸಿದ್ದ ನಿವೃತ್ತ ನ್ಯಾಯಾಧೀಶೆಯೊಬ್ಬರು 8.8 ಕೋಟಿ ರೂಪಾಯಿಯನ್ನು ಯುವರಾಜ್ ಸ್ವಾಮಿಗೆ ನೀಡಿದ್ದರು ಎನ್ನಲಾಗಿದೆ.

ಈ ಸಂಬಂಧ ಯುವರಾಜ್‍ಗೆ ತಾವು ಹಣ ನೀಡಿ ವಂಚನೆಗೊಳಗಾಗಿರುವ ಕುರಿತು ಡಿ. 21ರಂದು ನಿವೃತ್ತ ಮಹಿಳಾ ನ್ಯಾಯಾಧೀಶರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X