ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ ಕಾರ್ಯಕ್ರಮ
![ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ ಕಾರ್ಯಕ್ರಮ ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ ಕಾರ್ಯಕ್ರಮ](https://www.varthabharati.in/sites/default/files/images/articles/2021/01/10/274551-1610293869.jpg)
ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಸವಣೂರು ವಲಯ ವತಿಯಿಂದ ರವಿವಾರ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಸವಣೂರು ಚಾಪಲ್ಲ ಬದ್ರಿಯಾ ಜುಮಾ ಮಸೀದಿ ಬಳಿಯಿಂದ ಶಾಂತಿನಗರ ವರೆಗೆ ರಸ್ತೆಯ ಎರಡೂ ಬದಿಗಳನ್ನು ಸ್ವಚ್ಚಗೊಳಿಸಲಾಯಿತು.
ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಎನ್ ಸವಣೂರುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಡಿಪಿಐ ಸವಣೂರು ವಲಯ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಯವರಾದ ನವೀನ್ ಭಂಡಾರಿಯವರು ಭೇಟಿ ನೀಡಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರತಿ ಮೂರು ದಿನಗಳಿಗೆ ಒಮ್ಮೆ ಕಸ ವಿಲೇವಾರಿ ವಾಹನ ಕಳುಹಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿಯವರಾದ ಅಶೋಕ್ ಕುಮಾರ್ ರೈ, ಸವಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಯಣ ಬಟ್ಟೋಡಿ, ಸವಣೂರು ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಮೋದ್ ಹಾಗೂ ದಯಾನಂದ ರವರು ಭೇಟಿ ನೀಡಿ ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಪಾಪ್ಯುಲರ್ ಸವಣೂರು ಡಿವಿಷನ್ ಅಧ್ಯಕ್ಷರಾದ ರಫೀಕ್ ಎಂ ಎಸ್, ಏರಿಯಾ ಅಧ್ಯಕ್ಷರಾದ ಇರ್ಷಾದ್ ಸರ್ವೆ, ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ ಎ, ರಝಾಕ್ ಕೆನರಾ, ಸವಣೂರು ಮುಸ್ಲಿಂ ವೆಲ್ಫೇರ್ ಅಸೋಸಿಯೇಸನ್ ರಿಯಾದ್ ಅಧ್ಯಕ್ಷರಾದ ನಝೀರ್ ಸಿ ಎ, ಲತೀಫ್ ರೋಶನ್, ಅಶ್ರಫ್ ಊರ್ಸಾಗ್, ಮಹಮ್ಮದ್ ಕುಂಞಿ ಬಾಬಾ, ಅದ್ರಾಮ ಪಣೆಮಜಲ್ ಸಹಿತ ಹಲವರು ಉಪಸ್ಥಿತರಿದ್ದರು.