Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 7 ತಿಂಗಳಲ್ಲಿ 33,000 ಟನ್...

ಭಾರತದಲ್ಲಿ 7 ತಿಂಗಳಲ್ಲಿ 33,000 ಟನ್ ಕೋವಿಡ್-19 ತ್ಯಾಜ್ಯ ಉತ್ಪನ್ನ: ವರದಿ

ವಾರ್ತಾಭಾರತಿವಾರ್ತಾಭಾರತಿ10 Jan 2021 11:32 PM IST
share
ಭಾರತದಲ್ಲಿ 7 ತಿಂಗಳಲ್ಲಿ 33,000 ಟನ್ ಕೋವಿಡ್-19 ತ್ಯಾಜ್ಯ ಉತ್ಪನ್ನ: ವರದಿ

ಹೊಸದಿಲ್ಲಿ, ಜ.10: ಕಳೆದ 7 ತಿಂಗಳಲ್ಲಿ ಭಾರತದಲ್ಲಿ ಸುಮಾರು 33,000 ಟನ್‌ನಷ್ಟು ಕೋವಿಡ್-19 ಬಯೊಮೆಡಿಕಲ್ ತ್ಯಾಜ್ಯ ಉತ್ಪನ್ನವಾಗಿದ್ದು ಇದರಲ್ಲಿ ಮಹಾರಾಷ್ಟ್ರದ ಕೊಡುಗೆ ಅತ್ಯಧಿಕ(3,587 ಟನ್)ವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ)ಯ ಅಂಕಿಅಂಶ ತಿಳಿಸಿದೆ.

2020 ಜೂನ್‌ನಿಂದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 32,994 ಟನ್ ಬಯೊಮೆಡಿಕಲ್ ತ್ಯಾಜ್ಯ ಉತ್ಪನ್ನವಾಗಿದ್ದು ಇದರಲ್ಲಿ ಅಕ್ಟೋಬರ್ ತಿಂಗಳಿನಲ್ಲೇ 5,500 ಟನ್ ತ್ಯಾಜ್ಯ ಉತ್ಪನ್ನವಾಗಿದೆ. ದೇಶದಾದ್ಯಂತದ 198 ಸಾಮಾನ್ಯ ಬಯೊಮೆಡಿಕಲ್ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳ ಮೂಲಕ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಪಿಪಿಇ ಕಿಟ್‌ಗಳು, ಮಾಸ್ಕ್‌ಗಳು, ಶೂ ಕವರ್‌ಗಳು, ಕೈಗವಸು, ರಕ್ತಸಿಕ್ತ ಬಟ್ಟೆ, ಬ್ಯಾಂಡೇಜ್, ಗಾಯಕ್ಕೆ ಹಾಕುವ ಪಟ್ಟಿಗಳು, ಹತ್ತಿಯ ತುಂಡುಗಳು, ರಕ್ತ ಅಥವಾ ದೇಹದ ದ್ರವ ಒಳಗೊಂಡಿರುವ ಹಾಸಿಗೆಯ ಕವರ್, ಬಟ್ಟೆ ಇತ್ಯಾದಿಗಳು ಬಯೊಮೆಡಿಕಲ್ ತ್ಯಾಜ್ಯಗಳಾಗಿವೆ. ಮಹಾರಾಷ್ಟ್ರದಲ್ಲಿ 5,367 ಟನ್, ಕೇರಳ- 3,300 ಟನ್, ಗುಜರಾತ್-3,086 ಟನ್, ತಮಿಳುನಾಡು-2,806 ಟನ್, ಉತ್ತರಪ್ರದೇಶ-2,502 ಟನ್, ದಿಲ್ಲಿ-2,471 ಟನ್, ಪ.ಬಂಗಾಳ-2,095 ಟನ್, ಕರ್ನಾಟಕ- 2,026 ಟನ್ ಅತೀ ಹೆಚ್ಚು ತ್ಯಾಜ್ಯ ಉತ್ಪನ್ನವಾದ 8 ರಾಜ್ಯಗಳಾಗಿವೆ.

ಡಿಸೆಂಬರ್‌ನಲ್ಲಿ ಸುಮಾರು 4,530 ಟನ್, ನವೆಂಬರ್‌ನಲ್ಲಿ 4,864 ಟನ್, ಅಕ್ಟೋಬರ್‌ನಲ್ಲಿ 5,597 ಟನ್, ಸೆಪ್ಟಂಬರ್‌ನಲ್ಲಿ 5,490 ಟನ್ ತ್ಯಾಜ್ಯ ಉತ್ಪನ್ನವಾಗಿದೆ. ಹೀಗೆ ಉತ್ಪನ್ನವಾಗುವ ಬಯೊಮೆಡಿಕಲ್ ತ್ಯಾಜ್ಯಗಳನ್ನು ಆರೋಗ್ಯ ಕೇಂದ್ರ, ಕ್ವಾರಂಟೈನ್ ಕೇಂದ್ರ, ಮನೆ, ಸ್ಯಾಂಪಲ್ ಸಂಗ್ರಹ ಕೇಂದ್ರ, ಪ್ರಯೋಗಾಲಯಗಳು, ಮಾಲಿನ್ಯ ನಿಯಂತ್ರಣ ಮಂಡಳಿಗಳು, ನಗರಾಡಳಿತ ಸಂಸ್ಥೆಗಳು ಮತ್ತು ಸಾಮಾನ್ಯ ಬಯೊಮೆಡಿಕಲ್ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳಲ್ಲಿ ವಿಲೇವಾರಿ ಮಾಡುವ ಬಗ್ಗೆ ಕಳೆದ ಮಾರ್ಚ್‌ನಲ್ಲಿ ಸಿಪಿಸಿಬಿ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಅಲ್ಲದೆ ಕೊರೋನ ಸೋಂಕಿಗೆ ಸಂಬಂಧಿಸಿ ಬಯೊಮೆಡಿಕಲ್ ತ್ಯಾಜ್ಯದ ಸಂಗ್ರಹ ಮತ್ತು ವಿಲೇವಾರಿ ಪ್ರಕ್ರಿಯೆಯ ಮೇಲೆ ನಿಗಾ ಇರಿಸಲು ಕಳೆದ ಮೇ ತಿಂಗಳಿನಲ್ಲಿ ‘ಕೋವಿಡ್19 ಬಿಡಬ್ಲ್ಯುಎಂ’ ಮೊಬೈಲ್ ಆ್ಯಪ್ ಅನ್ನು ರೂಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X