Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣರಾಜ್ಯೋತ್ಸವದ ಅತಿಥಿಯಾಗಲಿರುವ...

ಗಣರಾಜ್ಯೋತ್ಸವದ ಅತಿಥಿಯಾಗಲಿರುವ ʼಸುರಿನಾಮ್‌ʼ ದೇಶದ ಅಧ್ಯಕ್ಷ ಚಂದ್ರಿಕಪ್ರಸಾದ್‌ ಚಾನ್‌ ಕುರಿತು ನಿಮಗೇನು ಗೊತ್ತು?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ11 Jan 2021 1:25 PM IST
share
ಗಣರಾಜ್ಯೋತ್ಸವದ ಅತಿಥಿಯಾಗಲಿರುವ ʼಸುರಿನಾಮ್‌ʼ ದೇಶದ ಅಧ್ಯಕ್ಷ ಚಂದ್ರಿಕಪ್ರಸಾದ್‌ ಚಾನ್‌ ಕುರಿತು ನಿಮಗೇನು ಗೊತ್ತು?

ಹೊಸದಿಲ್ಲಿ,ಜ.11: ಭಾರತದ ಗಣರಾಜ್ಯೋತ್ಸವ ದಿನದಂದು ಅತಿಥಿಯಾಗಿ ಆಗಮಿಸಲಿದ್ದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌, ಬ್ರಿಟನ್‌ ನಲ್ಲಿನ ರೂಪಾಂತರಿತ ವೈರಸ್‌ ಭೀತಿಯಿಂದಾಗಿ ತಮ್ಮ ಭೇಟಿಯನ್ನು ರದ್ದುಪಡಿಸಿದ್ದರು. ಅತಿಥಿಗಳಿಲ್ಲದೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಕುರಿತು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಗಣರಾಜ್ಯೋತ್ಸವದಂದು ಅತಿಥಿಯಾಗಿ ʼಸುರಿನಾಮ್‌ʼ ದೇಶದ ಅಧ್ಯಕ್ಷ ಚಂದ್ರಿಕಪ್ರಸಾದ್‌ ಚಾನ್‌ ಸಂಟೋಕಿ ಆಗಮಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಸುರಿನಾಮ್‌ ದೇಶವು ದಕ್ಷಿಣ ಅಮೆರಿಕಾದಲ್ಲಿರುವ ಒಂದು ಸಣ್ಣ ದೇಶವಾಗಿದೆ. ಈ ಹಿಂದೆ ಅಲ್ಲಿ ಸರ್ವಾಧಿಕಾರಿ ಆಡಳಿತವು ನಡೆಯುತ್ತಿದ್ದು, ಚಂದ್ರಿಕಪ್ರಸಾದ್ ಚಾನ್‌ ಸಂಟೋಕಿ ಐತಿಹಾಸಿಕವಾಗಿ ಸರ್ವಾಧಿಕಾರವನ್ನು ಅಂತ್ಯಗೊಳಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿಂದೆ ಸುರಿನಾಮ್‌ ನ ಪೊಲೀಸ್‌ ಮುಖ್ಯಸ್ಥರಾಗಿದ್ದ ಚಾನ್‌, ಮೇ ತಿಂಗಳಿನಲ್ಲಿ ಚುನಾವಣೆ ಗೆದ್ದು ಅಧ್ಯಕ್ಷ ಗಾದಿಗೇರಿದ್ದರು.

ಚಂದ್ರಿಕಪ್ರಸಾದ್‌ ಚಾನ್‌ ಸಂಟೋಕಿ ಯಾರು?

61ರ ಹರೆಯದ ಚಂದ್ರಿಕಪ್ರಸಾದ್‌ ಚಾನ್‌ ಸಂಟೋಕಿ ಈ ಹಿಂದೆ ಡಚ್‌ ವಸಾಹತು ಆಗಿದ್ದ ಸುರಿನಾಮ್‌ ದೇಶದ ಅಧ್ಯಕ್ಷರಾಗಿದ್ದಾರೆ. ಸುರಿನಾಮ್‌ ನಲ್ಲೇ ಹುಟ್ಟಿದ ಅವರು ನೆದರ್‌ ಲ್ಯಾಂಡ್‌ ನ ಪೊಲೀಸ್‌ ಅಕಾಡಮಿಯಲ್ಲಿ ವಿದ್ಯಾಭ್ಯಾಸ ಕೈಗೊಂಡರು. ಸುರಿನಾಮ್‌ ಗೆ ಹಿಂದಿರುಗಿದ ಬಳಿಕ ಪೊಲೀಸ್‌ ಇನ್‌ ಸ್ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು 1991ರಲ್ಲಿ ಪೊಲೀಸ್‌ ಮುಖ್ಯಸ್ಥರಾಗಿ ಆಯ್ಕೆಯಾದರು. 2005ರಿಂದ 2010ರವರೆಗೆ ನ್ಯಾಯಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದರು. 2010ರಲ್ಲಿ ಚುನಾವಣೆಗೆ ಸ್ಫರ್ಧಿಸಿದರಾದರೂ ಪ್ರತಿಸ್ಫರ್ಧಿ ಬೂಟ್ರೆಸ್‌ ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ.

2015ರ ಎರಡನೇ ಅವಧಿಯಲ್ಲೂ ಬೂಟ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಆದರೆ ಮೂರನೇ ಅವಧಿಯ ಚುನಾವಣೆಯಲ್ಲಿ ಬೂಟ್ರೆಸ್‌ ಅಧಿಕಾರವು ಅಂತ್ಯಗೊಂಡು ಚಂದ್ರಿಕಪ್ರಸಾದ್‌ ಚಾನ್‌ ಅಧಿಕಾರಕ್ಕೆ ಬಂದರು. ಇವರ ಪ್ರೋಗ್ರೆಸಿವ್‌ ರಿಫಾರ್ಮ್‌ ಪಾರ್ಟಿಯು 51ರಲ್ಲಿ 20 ಸೀಟುಗಳನ್ನು ಜಯಿಸಿ ಜನರಲ್‌ ಲಿಬರೇಶನ್‌ ಆಂಡ್‌ ಡೆವೆಲೆಪ್ಮೆಂಟ್‌ ಪಾರ್ಟಿ ಜೊತೆ ಸೇರಿಕೊಂಡು ಸರಕಾರವನ್ನು ರಚಿಸಿದ್ದಾರೆ.

ಭಾರತೀಯ ಮೂಲದ ಸಂತೋಕಿಯು ತಾನು ಅಧಿಕಾರ ಸ್ವೀಕರಿಸುವ ವೇಳೆ ವೇದಗಳನ್ನು ಹಿಡಿದುಕೊಂಡು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. "ನಾನು ಭಾರತೀಯ ಸಂಸ್ಕೃತಿಗೆ ಒಳಪಟ್ಟವನು ಎಂಬ ಹೆಮ್ಮೆ ನನ್ನಲ್ಲಿ ಸದಾ ಇರುತ್ತದೆ. ಈ ಸಂಸ್ಕೃತಿ, ಸಂಪ್ರದಾಯಗಳು ನನ್ನ ತಂದೆಗೆ ನನ್ನ ಮುತ್ತಜ್ಜರಿಂದ 148 ವರ್ಷಗಳ ಹಿಂದೆ ಬಳುವಳಿಯಾಗಿ ಬಂದದ್ದು" ಎಂದು 16ನೆ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಸಂಟೋಕಿ ಹೇಳಿಕೆ ನೀಡಿದ್ದರು.

ಸದ್ಯ ಅವರು ಬೋರಿಸ್‌ ಜಾನ್ಸನ್‌ ಬದಲಿಗೆ ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ ಎಂಬ ಮಾತುಗಳು ಪ್ರಧಾನಿ ಕಚೇರಿಯ ಮೂಲಗಳಿಂದ ಕೇಳಿ ಬರುತ್ತಿದ್ದು, ಈ ಕುರಿತು ಇನ್ನೂ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X