Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ ಗುಡ್ಡೆ ಕುಸಿತ ಘಟನೆ :...

ಗುರುಪುರ ಗುಡ್ಡೆ ಕುಸಿತ ಘಟನೆ : ಜಿಲ್ಲಾಡಳಿತಕ್ಕೆ ಮರು ಮನವಿ, ಪ್ರತಿಭಟನೆ ಎಚ್ಚರಿಕೆ

'ಸಂತ್ರಸ್ತರಿಗೆ ಮನೆ ಬಾಡಿಗೆಯೂ, ನಿವೇಶನವೂ ಇಲ್ಲ'

ವಾರ್ತಾಭಾರತಿವಾರ್ತಾಭಾರತಿ11 Jan 2021 4:36 PM IST
share
ಗುರುಪುರ ಗುಡ್ಡೆ ಕುಸಿತ ಘಟನೆ : ಜಿಲ್ಲಾಡಳಿತಕ್ಕೆ ಮರು ಮನವಿ, ಪ್ರತಿಭಟನೆ ಎಚ್ಚರಿಕೆ

ಮಂಗಳೂರು, ಜ.11: ಗುರುಪುರ ಗ್ರಾಪಂ ವ್ಯಾಪ್ತಿಯ ಮೂಳೂರು ಗ್ರಾಮದ ಸರ್ವೆ ನಂಬ್ರ 133ರಲ್ಲಿ 7 ತಿಂಗಳ ಹಿಂದೆ ಸಂಭವಿ ಸಿದ ಭೂಕುಸಿತದಿಂದಾಗಿ ಮನೆಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಗೆ ತಲುಪಿದ 130 ಕುಟುಂಬಸ್ಥರಿಗೆ ಶೀಘ್ರ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಿಪಂ ಸದಸ್ಯ ಯು ಪಿ ಇಬ್ರಾಹಿಂ, ತಾಪಂ ಸದಸ್ಯ ಸಚಿನ್ ಅಡಪ ಮತ್ತು ಗುರುಪುರ ಗ್ರಾಪಂ ನೂತನ ಸದಸ್ಯ ಜಿಎಂ ಉದಯ ಭಟ್ ನೇತೃತ್ವದ ನಿಯೋಗವು ಸೋಮವಾರ ಗುರುಪುರ ಕೈಕಂಬದ ನಾಡ ಕಚೇರಿಯಲ್ಲಿ ಉಪತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.

ಈ ಹಿಂದೆ ನೀಡಲಾದ ಮನವಿಗೆ ಜಿಲ್ಲಾಡಳಿತದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ತಜ್ಞರ ತಂಡದಿಂದ ಮಠದಗುಡ್ಡೆ ಸೈಟ್ ಪರಿಸರದ ಮಣ್ಣು ಪರೀಕ್ಷೆ ನಡೆಸಿ ನೈಜ ವರದಿ ಪಡೆದು ಅಲ್ಲಿ ವಾಸಕ್ಕೆ ಯೋಗ್ಯವಿರುವ ಮನೆಗಳನ್ನು ಗುರುತಿಸಿ, ಉಳಿದ ಅಪಾಯದಲ್ಲಿರುವ ಅಥವಾ ಭೂಕುಸಿತಕ್ಕೆ ಒಳಗಾಗಬಹುದಾದ ಪ್ರದೇಶದ ಮನೆಗಳ ನಿವಾಸಿಗರಿಗೆ ಶೀಘ್ರ ಪುನರ್ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಪಂ ಸದಸ್ಯ ಸಚಿನ್ ಅಡಪ ಆಗ್ರಹಿಸಿದರು.

ಎರಡನೇ ಬಾರಿ ಸಲ್ಲಿಸಲಾದ ಈ ಮನವಿಗೆ ಜನವರಿಯೊಳಗೆ ಸ್ಪಂದಿಸದಿದ್ದರೆ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಸಂತ್ರಸ್ತ ಕುಟುಂಬಗಳ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ನಿಯೋಗ ಎಚ್ಚರಿಕೆ ನೀಡಿದೆ.

ಮುಗಿಯದ ಸಂತ್ರಸ್ತರ ಗೋಳು !

2020ರ ಜುಲೈಯಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರಕಾರ ಈವರೆಗೆ ತಲಾ 10,000 ರೂ. ಪರಿಹಾರ ನೀಡಿದೆ. ಗುಡ್ಡದ ಸುಮಾರು 71 ಮನೆಯವರು ಬೇರೆಡೆಗೆ ಸ್ಥಳಾಂತರಗೊಂಡು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿ ಸ್ಥಳಕ್ಕೆ ಭೆಟಿ ನೀಡಿ ‘ಸಂತ್ರಸ್ತರಿಗೆ ಗಂಜಿಮಠ ಗ್ರಾಪಂ ವ್ಯಾಪ್ತಿಯ ಸರಕಾರಿ ಜಾಗದಲ್ಲಿ ನಿವೇಶನ ಗುರುತಿಸಿದ್ದೇವೆ. ಶೀಘ್ರ ಮನೆ ನಿರ್ಮಿಸಿ ಕೊಡಲಾಗುವುದು. ಬಾಡಿಗೆ ಮನೆಯಲ್ಲಿರುವವರಿಗೆ ಆಯಾ ತಿಂಗಳಲ್ಲಿ ತಿಂಗಳ ಬಾಡಿಗೆ ಬರಲಿದೆ’ ಎಂದು ಭರವಸೆ ನೀಡಿದ್ದರು. ಆದರೆ ತಹಶೀಲ್ದಾರರ ಉದಾಸೀನತೆಯಿಂದ ಇದುವರೆಗೆ ಡಿಸಿ ಆದೇಶ ಪಾಲನೆಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಗುಡ್ಡ ಕುಸಿತದಿಂದ ಮನೆ ಹಾಗೂ ರಿಕ್ಷಾ ಕಳೆದುಕೊಂಡಿರುವ ಮುಹಮ್ಮದ್ ಯಾನೆ ಮಾಮು ಮಾಧ್ಯಮದೊಂದಿಗೆ ಮಾತನಾಡಿ ‘ನಾನೀಗ ಗುರುಪುರದಲ್ಲಿ 4,500 ರೂ. ಬಾಡಿಗೆ ಮನೆಯಲ್ಲಿದ್ದೇನೆ. ಬಾಡಿಗೆ ಹೊರತಾಗಿ ತಿಂಗಳಿಗೆ 1,800 ರೂ. ವಿದ್ಯುತ್ ಬಿಲ್ ಬರುತ್ತಿದೆ. ಬಾಡಿಗೆ ಹಾಗೂ ನಿವೇಶನಕ್ಕಾಗಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕಳೆದ ಏಳು ತಿಂಗಳಿಂದ ಗುರುಪುರದಲ್ಲಿ ಬಾಡಿಗೆ ಮನೆಯಲ್ಲಿದ್ದೇನೆ. 10,000 ರೂ. ಪರಿಹಾರ ಧನದ ಹೊರತು ಈವರೆಗೆ ಚಿಕ್ಕಾಸು ಸಿಕ್ಕಿಲ್ಲ. ನಾನಿರುವ ಬಾಡಿಗೆ ಮನೆಗೆ ತಿಂಗಳಿಗೆ 7,000 ರೂ. ಮತ್ತು 1,000 ರೂ. ವಿದ್ಯುತ್ ಬಿಲ್ ನೀಡುತ್ತಿದ್ದೇನೆ. ಕೆಲಸವಿಲ್ಲದ ಕಾರಣ ಬದುಕು ಸಾಗಿಸುವುದು ಕಷ್ಟವಾಗಿದೆ’ ಎಂದು ಕೈಕಂಬದ ಮರ್ಕಸ್ ಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿರುವ ಇಸ್ಮಾಯಿಲ್ ಗುರುಪುರ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X