Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಜ.29ರಂದು ಕಾಪು ತಾಲೂಕು...

ಪಡುಬಿದ್ರಿ: ಜ.29ರಂದು ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ11 Jan 2021 5:29 PM IST
share

ಪಡುಬಿದ್ರಿ: ಕಾಪು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 29 ಶುಕ್ರವಾರ ಪಡುಬಿದ್ರಿ ಶ್ರೀಮಹಾಲಿಂಗೇಶ್ವರ, ಶ್ರೀಮಹಾಗಣಪತಿ ದೇವಳದ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡ ನಾಡು ನುಡಿ ಸಂಸ್ಕಂತಿ, ಪರಂಪರೆಯನ್ನು  ಪ್ರತಿಬಿಂಬಿಸುವ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ  ನೇತೃತ್ವದಲ್ಲಿ ನಡೆಯಲಿದೆ.

ಶನಿವಾರ ಶಾಲಾ ಸಭಾಂಗಣದಲ್ಲಿ ಊರಿನ ಗಣ್ಯರ ಸಹಭಾಗಿತ್ವದಲ್ಲಿ ಜರುಗಿದ ಸಮ್ಮೇಳನಾ ಪೂರ್ವಸಿದ್ಧತಾ ಸಭೆಯು ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆಯವರ ಅಧ್ಯಕ್ಷತೆಯಲ್ಲಿ ಜರುಗಿತು. 

ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು, ಸಮ್ಮೇಳನಗಳ ಉದ್ದೇಶ ಹಾಗೂ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.

ಸಮ್ಮೇಳನವನ್ನು ಅರ್ಥಪೂರ್ಣವಾಗಿ ನೆರವೇರವೇರಿಸಲು ಸ್ವಾಗತ ಸಮಿತಿ ಹಾಗೂ ವಿವಿಧ ಉಪಸಮಿತಿಗಳ ರಚನೆ ಮಾಡಲಾಯಿತು.

ಸಮ್ಮೇಳನದ ಗೌರವ ಅಧ್ಯಕ್ಷರುಗಳಾಗಿ ಶ್ರೀಕ್ಷೇತ್ರದ ಅನುವಂಶಿಕ ಮೊಕ್ತೇಸರರುಗಳಾದ ರತ್ನಾಕರರಾಜ ಅರಸು ಕಿನ್ಯಕ್ಕ ಬಲ್ಲಾಳರು,  ಮತ್ತು ಪಿ.ವಿಶ್ವನಾಥ ಹೆಗ್ಡೆ ಪೇಟೆಮನೆ. ಸಮ್ಮೇಳನ ಕಾರ್ಯಾಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ  ಕೆ. ಅನಂತಪಟ್ಟಾಭಿ ರಾವ್, ಕಾರ್ಯದರ್ಶಿಯಾಗಿ ಕಸ್ತೂರಿ ರಾಮಚಂದ್ರ, ಜತೆಕಾರ್ಯದರ್ಶಿಗಳಾಗಿ ಯಶೋದಾ, ರಾಜೇಶ ಶೇರಿಗಾರ್ ಪಡುಬಿದ್ರೆ, ಉಪಾಧ್ಯಕ್ಷರುಗಳು, ವಿವಿಧ ಉಪಸಮಿತಿಗಳ ಸಂಚಾಲಕರುಗಳನ್ನು ಆಯ್ಕೆ ಮಾಡಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಪರವಾಗಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿರವರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ರಂಗಕರ್ಮಿ ಡಾ.ಭರತ್‍ಕುಮಾರ್ ಪೊಲಿಪುರವರ ಆಯ್ಕೆಯನ್ನು ಘೋಷಿಸಿದರು.

ಸಭೆಯಲ್ಲಿ ಹಿರಿಯ ಜಾನಪದ ವಿದ್ವಾಂಸ, 2ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಕೆ.ಎಲ್.ಕುಂಡಂತಾಯ, ವೈದ್ಯರಾದ ಡಾ.ವೈ.ಎನ್.ಶೆಟ್ಟಿ,ನಿಕಟಪೂರ್ವ ಸಮ್ಮೇಳನದ ಕಾರ್ಯಾಧ್ಯಕ್ಷ  ದೇವದಾಸ ಹೆಬ್ಬಾರ್, ಕಟ್ಟಿಂಗೇರಿ, ಕಾರ್ಯದರ್ಶಿ ಅಶ್ವಿನ್ ಮಾರೆನ್ಸ್ ಮೂಡುಬೆಳ್ಳೆ, ಪ್ರೌಢ ಶಾಲಾ ಮುಖ್ಯಶಿಕ್ಷಕ ಪಿ.ಕೆ.ಗಣಪತಿ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಮತಿ ಹೆಗಡೆ, ಇನ್ನಾ ಉದಯಕುಮಾರ್ ಶೆಟ್ಟಿ, ಗಣೇಶ ಕೊಟ್ಯಾನ್, ರಮಾಕಾಂತ ಪಿ. ಪಿ.ರಾಮಚಂದ್ರ ನಾವಡ, ಕು.ಯಶೋದಾ, ಸುಧಾ ಆರ್, ನಾವಡ, ಕಸಾಪ ತಾಲೂಕು ಕಾರ್ಯದರ್ಶಿಗಳಾದ ವಿದ್ಯಾಧರ್ ಪುರಾಣಿಕ್, ವಿದ್ಯಾ ಅಮ್ಮಣ್ಣಾಯ, ಕೃಷ್ಣಕುಮಾರ್ ಮಟ್ಟು, ಸುದಕ್ಷಿಣೆ, ನೀಲಾನಂದ ನಾಯ್ಕ್, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಮ್ಮೇಳನ ಕಾರ್ಯದರ್ಶಿ ಕಸ್ತೂರಿ ರಾಮಚಂದ್ರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X