Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು...

ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು ಅಗತ್ಯ: ವೈ.ಎಸ್.ವಿ. ದತ್ತ

ವಾರ್ತಾಭಾರತಿವಾರ್ತಾಭಾರತಿ11 Jan 2021 5:53 PM IST
share
ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು ಅಗತ್ಯ: ವೈ.ಎಸ್.ವಿ. ದತ್ತ

ಬಂಟ್ವಾಳ, ಜ.11: ಪ್ರಸಕ್ತ ಕಾಲದಲ್ಲಿ ಜಾತ್ಯತೀತ ಮೌಲ್ಯದ ಜೊತೆ ಗಟ್ಟಿಯಾಗಿ ನಿಂತಾಗ ಹತ್ತಾರು ಟೀಕೆ, ವಿರೋಧಗಳು ನಮ್ಮನ್ನು ಸುತ್ತುವರಿಯುತ್ತದೆ. ಆದರೂ ನಮ್ಮ ವೈಯಕ್ತಿಕ ಲಾಭ ನಷ್ಟಕ್ಕಿಂತ ನಾವು ನಂಬಿದ ಜಾತ್ಯತೀತ ತತ್ವ, ಸಿದ್ಧಾಂತದಲ್ಲಿ ಗಟ್ಟಿ ನಿಲುವು ತಾಳುವುದು ನಮ್ಮ ಇಂದಿ‌ನ ಅವಶ್ಯಕತೆಯಾಗಿದೆ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅಭಿಪ್ರಾಯ ವ್ಯಕ್ತಪಡಿಸಿದರು. 

ಬಂಟ್ವಾಳದ ಮಿತ್ತಬೈಲ್ ನಲ್ಲಿ ಸೋಮವಾರ ನಡೆದ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಹಮ್ಮಿಕೊಂಡಿರುವ ಅಸ್ತಿತ್ವ ಮತ್ತು ಹಕ್ಕು ಯುವಜನಾಂಗ ಮರಳಿ ಪಡೆಯುತ್ತಿದೆ ಅಭಿಯಾನದ ಮುನ್ನಡೆ ಯಾತ್ರೆಯ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. 

ಭಾರತದ ಮಣ್ಣಿನಲ್ಲಿಯೇ ಜಾತ್ಯತೀತತೆಯ ಸತ್ವ ಇದೆ. ಆದರೆ ಇದನ್ನು ಮೂಲಭೂತವಾದಿಗಳು ಒಡೆದು ಹಾಕುತ್ತಿದ್ದಾರೆ. ಮೂಲಭೂತವಾದವು ಈ ದೇಶಕ್ಕೆ ಅಪಾಯಕಾರಿ ಆಗಿದೆ. ಅದು ಈ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ. ಹಾಗಾಗಿ ಎಲ್ಲಾ ಧರ್ಮದವರು ಸೇರಿ ತಮ್ಮ ತಮ್ಮ ಧರ್ಮಕ್ಕೆ ಅಂಟಿರುವ ಮೂಲಭೂತವಾದವನ್ನು ವಿರೋಧಿಸಬೇಕು ಎಂದು ಹೇಳಿದರು. 

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಮನುಷ್ಯನಾಗಿ ಹುಟ್ಟಿದ ನಾವು ಮನುಷ್ಯ ದ್ವೇಷಿಯಾಗಿ ಬದುಕಬಾರದು. ದ್ವೇಷವನ್ನು ಸೋಲಿಸುವ ಪ್ರೀತಿಯನ್ನು ಗೆಲ್ಲಿಸುವ ಕೆಲಸ ಆಗಬೇಕು. ಯಾರೂ ಕೂಡಾ ಯಾವುದೇ ಪ್ರಚೋದನೆಗೆ ಒಳಗಾಗದೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಿದಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. 

ಬೊಳ್ಳೂರು ಉಸ್ತಾದ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಸೈಯದ್ ಹುಸೇನ್ ಬಾಅಲವಿ ತಂಙಳ್ ದುಅ ನೆರವೇರಿಸಿದರು. ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಉದ್ಘಾಟಿಸಿದರು. ಸೈಯದ್ ಹಮೀದ್ ಅಲಿ ಶಿಹಾಬ್ ತಂಙಳ್ ಪಾಲಕ್ಕಾಡ್ ಯಾತ್ರ ನಾಯಕರ ಸಂದೇಶ ನೀಡಿದರು. ಮುಹಮ್ಮದ್ ಸಾಗರ್ ಪರ್ಲಿಯಾ ಅಧ್ಯಕ್ಷತೆ ವಹಿಸಿದ್ದರು. ಇರ್ಷಾದ್ ದಾರಿಮಿ ಅಲ್ ಜಝಿರಿ ಮಿತ್ತಬೈಲ್ ಅಧ್ಯಕ್ಷತೆ ಭಾಷಣ ಮಾಡಿದರು. ಅಶ್ರಫ್ ಫೈಝಿ ಮಿತ್ತಬೈಲ್ ಪ್ರಸ್ತಾವಿತ ಭಾಷಣ ಮಾಡಿದರು. ಯು.ಕೆ.ಅಝೀಝ್ ದಾರಿಮಿ ಚೋಕ್ಕಬೆಟ್ಟು ದಿಕ್ಸೂಚಿ ಭಾಷಣ ಮಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ರಿಯಾಝ್ ರಹ್ಮಾನಿ ಕಿನ್ಯ ಭಾಗವಹಿಸಿದರು. ಪ್ರಮುಖರಾದ ಸೈಯದ್ ಫಕ್ರುದ್ದೀನ್ ದಾರಿಮಿ ತಂಙಳ್ ತಾನೂರ್, ಸೈಯದ್ ಅಮೀರ್ ತಂಙಳ್, ಅನೀಸ್ ಕೌಸರಿ, ಇಸ್ಮಾಯೀಲ್ ಯಮಾನಿ, ಖಾಸಿಂ ದಾರಿಮಿ, ಕುಕ್ಕಿಲ ದಾರಿಮಿ ವಳಚ್ಚಿಲ್, ಅಬ್ಬಾಸ್ ದಾರಿಮಿ ಫರಂಗಿಪೇಟೆ, ಹನೀಫ್ ಮುಸ್ಲಿಯಾರ್, ಉಬೈದುಲ್ಲಾ ಹಾಜಿ, ಅಶ್ರಫ್ ಮರೋಡಿ ಮೂಡಬಿದ್ರೆ, ಅಬ್ದುಲ್ ಸಲಾಂ ಕೈಕಂಬ, ಸಿದ್ದೀಕ್ ಅಬ್ದುಲ್ ಖಾದರ್, ಅಬೂಸ್ವಾಲಿ ಫೈಝಿ, ಅಝೀಝ್ ಮಲಿಕ್, ಸೈಯದ್ ಇಸ್ಮಾಯೀಲ್ ತಂಙಳ್, ಆರೀಫ್ ಬಡಕಬೈಲ್, ಹನೀಫ್ ದೂಮಳಿಕೆ, ಹಕೀಂ ಬಂಗೇರಕಟ್ಟೆ, ರಿಯಾಝ್ ಫೈಝಿ ಕಕ್ಕಿಂಜೆ, ಫಾರೂಕ್ ಮೂಡಬಿದರೆ, ಬಶೀರ್ ಮಜಲ್, ಮುಸ್ತಫ ಕಟ್ಟದಪಡ್ಪು, ಆಸಿಫ್ ಕಬಕ, ಹಾರೂನ್ ರಶೀದ್ ಬಂಟ್ವಾಳ, ಎ.ಆರ್.ಮುಹಮ್ಮದ್ ಅಲಿ, ಶಾಕಿರ್ ಮಿತ್ತಬೈಲ್, ಸವಾಝ್ ಬಂಟ್ವಾಳ, ಬಂಟ್ವಾಳ ಪುರಸಭಾ ಅಧ್ಯಕ್ಷ ಮುಹಮ್ಮದ್ ಶರೀಫ್ ಉಪಸ್ಥಿತರಿದ್ದರು. 

ಜಮಾಲುದ್ದೀನ್ ದಾರಿಮಿ ಕೈಕಂಬ ಸ್ವಾಗತಿಸಿದರು. ನಝೀರ್ ಅಝ್ ಹರಿ ಬೊಳ್ಮಿನಾರ್ ಧನ್ಯವಾದಗೈದರು. ಖಲಂದರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X