Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರು, ರಸ್ತೆ, ಇಂಗಾಲದ ಹೊರಸೂಸುವಿಕೆ...

ಕಾರು, ರಸ್ತೆ, ಇಂಗಾಲದ ಹೊರಸೂಸುವಿಕೆ ಇಲ್ಲದ ನಗರವನ್ನು ಸೃಷ್ಟಿಸಲಿರುವ ಸೌದಿ ಅರೇಬಿಯಾ

ಯುವರಾಜನ ಕಲ್ಪನೆಯ ಕೂಸು

ವಾರ್ತಾಭಾರತಿವಾರ್ತಾಭಾರತಿ11 Jan 2021 8:50 PM IST
share
ಕಾರು, ರಸ್ತೆ, ಇಂಗಾಲದ ಹೊರಸೂಸುವಿಕೆ ಇಲ್ಲದ ನಗರವನ್ನು ಸೃಷ್ಟಿಸಲಿರುವ ಸೌದಿ ಅರೇಬಿಯಾ

ರಿಯಾದ್ (ಸೌದಿ ಅರೇಬಿಯ), ಜ. 11: ತೈಲವನ್ನು ಹೊರತುಪಡಿಸಿದ ಸೌದಿ ಅರೇಬಿಯದ ಭವಿಷ್ಯಕ್ಕೆ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಹೊಸ ಕಲ್ಪನೆಯೊಂದನ್ನು ಸೇರಿಸಿದ್ದಾರೆ. ಕಾರುಗಳು, ರಸ್ತೆಗಳು ಮತ್ತು ಇಂಗಾಲ ಅನಿಲಗಳ ಹೊರಸೂಸುವಿಕೆಯಿಲ್ಲದ ನಗರವೊಂದರ ಕಲ್ಪನೆಯನ್ನು ಅವರು ಮುಂದಿಟ್ಟಿದ್ದಾರೆ.

‘ನಿಯೋಮ್’ ಎಂಬ 500 ಬಿಲಿಯ ಡಾಲರ್ (36.72 ಲಕ್ಷ ಕೋಟಿ ರೂಪಾಯಿ) ಯೋಜನೆಯ ಭಾಗವಾಗಿ 170 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ‘ದ ಲೈನ್’ ಎಂಬ ವಲಯವೊಂದನ್ನು ಸೃಷ್ಟಿಸಲಾಗುತ್ತದೆ ಎಂದು ರವಿವಾರ ಟೆಲಿವಿಶನ್‌ನಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಯುವರಾಜ ಹೇಳಿದರು. 2021ರ ಪ್ರಥಮ ತ್ರೈಮಾಸಿಕದಲ್ಲಿ ಯೋಜನೆಯ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.

‘ದ ಲೈನ್’ ಎನ್ನುವುದು ನಡೆದಾಡುವ ವಲಯವಾಗಿರುತ್ತದೆ. ಅಲ್ಲಿ ಕಾರುಗಳು ಮತ್ತು ರಸ್ತೆಗಳು ಇರುವುದಿಲ್ಲ. ಹಾಗೂ ಪ್ರಕೃತಿಯ ನಡುವೆ ಅದನ್ನು ನಿರ್ಮಿಸಲಾಗುತ್ತದೆ’’ ಎಂದು ಪ್ರಕಟನೆಯೊಂದು ತಿಳಿಸಿದೆ. ನಗರದಲ್ಲಿ 2030ರ ವೇಳೆಗೆ 10 ಲಕ್ಷ ನಿವಾಸಿಗಳಿರುತ್ತಾರೆ ಹಾಗೂ 3,80,000 ಉದ್ಯೋಗಗಳ ಸೃಷ್ಟಿಯಾಗುತ್ತದೆ.

ಈ ಯೋಜನೆಯನ್ನು 2017ರಲ್ಲಿ ಘೋಷಿಸಲಾಗಿದ್ದು, ವಾಯುವ್ಯ ಸೌದಿ ಅರೇಬಿಯದ ಕಡಿಮೆ ಸಂಪರ್ಕಿತ ಪ್ರದೇಶವೊಂದರಲ್ಲಿ 10,000 ಚದರ ಮೈಲಿಗೂ ಅಧಿಕ ವಿಸ್ತೀರ್ಣವನ್ನು ಹೊಂದಿರುತ್ತದೆ.

ಈ ಯೋಜನೆ ಘೋಷಣೆಯಾದಂದಿನಿಂದಲೂ ವಿವಾದಕ್ಕೆ ಗುರಿಯಾಗುತ್ತಾ ಬಂದಿದೆ ಹಾಗೂ ಅದರ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ. ಯೋಜನೆಯು ವಾಸ್ತವಿಕವೇ ಎಂಬುದಾಗಿ ಹಲವು ವಿಶ್ಲೇಷಕರು ಪ್ರಶ್ನಿಸಿದ್ದಾರೆ.

ಎಲ್ಲ ಮೂಲಸೌಕರ್ಯ ಲಭ್ಯ

►ಕೇವಲ 5 ನಿಮಿಷ ನಡೆದರೆ ಹಸಿರು ಪರಿಸರ

‘ದ ಲೈನ್’ ನಗರವು ನಗರಾಭಿವೃದ್ಧಿಯ ಕಲ್ಪನೆಯನ್ನೇ ಬದಲಿಸುತ್ತದೆ. ಇಲ್ಲಿ ಮಾನವರೇ ಪ್ರಮುಖ ಆಧಾರಸ್ತಂಭಗಳು.

ಜೀವನ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶವನ್ನು ಅದು ಹೊಂದಿದೆ. ಆರೋಗ್ಯ ಕೇಂದ್ರಗಳು, ಶಾಲೆಗಳು ಮತ್ತು ಇತರ ಮೂಲಸೌಕರ್ಯಗಳು ಲಭ್ಯವಿರುತ್ತವೆ. ಮನರಂಜನೆ ಹಾಗೂ ಅತಿ ವೇಗದ ಪರ್ಯಾಯ ಸಾರಿಗೆ ವ್ಯವಸ್ಥೆ ಲಭಿಸುತ್ತದೆ. ಅದೂ ಅಲ್ಲದೆ, ಕೇವಲ 5 ನಿಮಿಷ ನಡೆದರೆ ಹಸಿರು ಪರಿಸರ ಸಿಗುವಂಥ ವಿನ್ಯಾಸ ರೂಪಿಸಲಾಗುವುದು.

ನಗರದಲ್ಲಿ ಕೃತಕ ಬುದ್ಧಿಮತ್ತೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ ಹಾಗೂ ಈ ಮೂಲಕ ಮಾನವರ ನಡುವಿನ ಸಂಪರ್ಕ ವಿಧಾನದಲ್ಲಿ ಕ್ರಾಂತಿಯನ್ನೇ ಮಾಡಲಿದೆ. ಇದು ನಿವಾಸಿಗಳು ಮತ್ತು ಕಂಪೆನಿಗಳ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X