Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾರಕೂರು: ಕೃಷಿ ಸಂಸ್ಕೃತಿಗೆ ಹೊಸ...

ಬಾರಕೂರು: ಕೃಷಿ ಸಂಸ್ಕೃತಿಗೆ ಹೊಸ ಪರಿಕಲ್ಪನೆ ನೀಡಿದ ಮದುವೆ ದಿಬ್ಬಣ

ವಾರ್ತಾಭಾರತಿವಾರ್ತಾಭಾರತಿ11 Jan 2021 9:22 PM IST
share
ಬಾರಕೂರು: ಕೃಷಿ ಸಂಸ್ಕೃತಿಗೆ ಹೊಸ ಪರಿಕಲ್ಪನೆ ನೀಡಿದ ಮದುವೆ ದಿಬ್ಬಣ

ಉಡುಪಿ, ಜ11: ವಿವಾದಾತ್ಮಕ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ರಾಷ್ಟ್ರದ ರಾಜಧಾನಿಯಲ್ಲಿ ನಡೆಸುತ್ತಿರುವ ಶಾಂತಿಯುತ ಧರಣಿ ಕೃಷಿ, ಕೃಷಿಕ ಹಾಗೂ ಕೃಷಿಕನ ಬದುಕನ್ನು ಮತ್ತೆ ದೇಶದ ಜನರ ಮನದಂಗಳಕ್ಕೆ ತಂದು ನಿಲ್ಲಿಸಿವೆ.

ಕೃಷಿ ಇಂದು ಮತ್ತೆ ಚರ್ಚೆಯ ವಿಷಯವಾಗಿದೆ. ಕೃಷಿ ಬದುಕಿನ ಸಂಕಷ್ಟಗಳು, ಕೃಷಿ ಸಂಸ್ಕೃತಿ ಕುರಿತಂತೆ ಹೊಸ ಹೊಸ ಚಿಂತನೆಗಳು ದೇಶಾದ್ಯಂತ ನಡೆಯಲು ಈ ಚಳುವಳಿ ಪ್ರೇರೇಪಣೆ ನೀಡಿದೆ. ಇದರ ಹಿನ್ನೆಲೆಯಲ್ಲಿ ಬಾರಕೂರಿನ ಕೃಷಿಕ ಕುಟುಂಬವೊಂದು ಮದುವೆಯಲ್ಲೂ ಕೃಷಿ ಸಂಸ್ಕೃತಿಯ ಪರಿಕಲ್ಪನೆಯನ್ನು ಹೊಸ ರೀತಿಯಲ್ಲಿ ಜಾರಿಗೊಳಿಸಿ ಎಲ್ಲರ ಗಮನ ಸೆಳೆದಿದೆ.

ಕಳೆದ ಶುಕ್ರವಾರ ಬಾರಕೂರಿನ ಶಿವಗಿರಿ ಕ್ಷೇತ್ರದ ಗುರುದೇವ ಭವನದಲ್ಲಿ ನಡೆದ ಎರಡು ಜೋಡಿಯ ಮದುವೆ ಇಂಥ ಒಂದು ಪರಿಕಲ್ಪನೆಗೆ ಸಾಕ್ಷಿ ಯಾಯಿತು. ಬಾರಕೂರಿನ ಕಾಳಿಕಾಂಬಾ ದೇವಸ್ಥಾನ ಸಮೀಪದ ಕೃಷಿಕ ಕುಟುಂಬದ ಇಬ್ಬರು ಯುವಕರ ಮದುವೆ ದಿಬ್ಬಣಕ್ಕೆ ಕೃಷಿಗೆ ಬಳಸುವ ಹಚ್ಚ ಹೊಸ ಟ್ರಾಕ್ಟರ್ ಬಳಸಿದ್ದು, ಮದುಮಕ್ಕಳ ಟ್ರಾಕ್ಟರ್ ಮೆರವಣಿಗೆಯನ್ನು ಅಚ್ಚರಿಯಿಂದ ವೀಕ್ಷಿಸಿದ ಊರಿನ ಜನರ ಮೆಚ್ಚುಗೆಗೆ ಪಾತ್ರವಾಯಿತು.

ಬಾರಕೂರಿನ ದಿ.ಜಾರು ಪೂಜಾರಿ ಅವರು ದೊಡ್ಡ ಕೃಷಿಕರು. ಈ ಮನೆಯಲ್ಲಿ ಭತ್ತದ ತಿರಿ ಮಾಡುವ ಹಳೆ ಪದ್ಧತಿ, ಪರಂಪರೆ ಈಗಲೂ ಜೀವಂತವಿದೆ. ಇಂಥ ಕುಟುಂಬದ ಮದುವೆ ದಿಬ್ಬಣದ ಮೆರವಣಿಗೆ ಕೃಷಿ ಪದ್ಧತಿಯ ಹೊಸ ಪರಿಕಲ್ಪನೆಯೊಂದಿಗೆ ನಡೆಯಿತು.

 ಎರಡೂ ಜೋಡಿ ಮದುಮಕ್ಕಳನ್ನು ಹೊಸದಾಗಿ ಖರೀದಿಸಿದ ಟ್ರಾಕ್ಟರ್ನಲ್ಲಿ ಕೂರಿಸಿ ಕಲ್ಯಾಣ ಮಂಟಪಕ್ಕೆ ಕರೆ ತರಲಾಯಿತು. ಐಷಾರಾಮಿ ವಾಹನಗಳಲ್ಲಿ, ಕುದುರೆ ಸಾರೋಟುಗಳಲ್ಲಿ ಮದುಮಕ್ಕಳು ಹೋಗುವುದನ್ನು ನೋಡಿದ್ದ, ಕೇಳಿದ್ದ ಬಾರಕೂರಿನ ಜನತೆ ಐತಿಹಾಸಿಕ ಕಲ್ಲುಚಪ್ಪರದ ಎದುರಿನಿಂದ ಟ್ರಾಕ್ಟರ್‌ನಲ್ಲಿ ತೆರಳುವುದನ್ನು ಅಚ್ಚರಿಯ ಕಣ್ಣುಗಳಿಂದ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮೂಲಕ ಕೃಷಿ ಸಂಸ್ಕೃತಿ ಹೊಸ ಪರಿಕಲ್ಪನೆ ಮೂಲಕ ಬಾರಕೂರಿನಲ್ಲಿ ಸಾಕಾರಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X