Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ದೇಶಕ್ಕೆ ಆಗುವ ಮುಜುಗರ ತಪ್ಪಿಸಲು ರೈತರ...

​ದೇಶಕ್ಕೆ ಆಗುವ ಮುಜುಗರ ತಪ್ಪಿಸಲು ರೈತರ ಟ್ರ್ಯಾಕ್ಟರ್ ರ‍್ಯಾಲಿ ನಿಲ್ಲಿಸಿ: ಸುಪ್ರೀಂಗೆ ಕೇಂದ್ರ ಮೊರೆ

ವಾರ್ತಾಭಾರತಿವಾರ್ತಾಭಾರತಿ12 Jan 2021 9:12 AM IST
share
​ದೇಶಕ್ಕೆ ಆಗುವ ಮುಜುಗರ ತಪ್ಪಿಸಲು ರೈತರ ಟ್ರ್ಯಾಕ್ಟರ್ ರ‍್ಯಾಲಿ ನಿಲ್ಲಿಸಿ: ಸುಪ್ರೀಂಗೆ ಕೇಂದ್ರ ಮೊರೆ

 ಹೊಸದಿಲ್ಲಿ, ಜ. 12: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರಸ್ತಾವಿತ ಟ್ರಾಕ್ಟರ್ ರ್ಯಾಲಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಕೇಂದ್ರ ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.

ದೇಶದ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಪ್ರಯತ್ನ ಇದಾಗಿದೆ ಎಂದು ಮನವಿ ಹೇಳಿದೆ. ಪ್ರತಿಭಟನೆ ನಡೆಸುತ್ತಿರುವ ಸಣ್ಣ ಗುಂಪು ಅಥವಾ ಸಂಘಟನೆಗಳು ಗಣರಾಜ್ಯೋತ್ಸವದ ದಿನ ಟ್ರಾಕ್ಟರ್, ಟ್ರಾಲಿ, ವಾಹನ ರ್ಯಾಲಿ ನಡೆಸಲು ಯೋಜಿಸಿದೆ ಎಂದು ವಿವಿಧ ಮೂಲಗಳಿಂದ ಭದ್ರತಾ ಸಂಸ್ಥೆಗೆೆ ತಿಳಿದು ಬಂದಿದೆ. ಗಣರಾಜ್ಯೋತ್ಸವದ ದಿನದಂದು ರಾಷ್ಟ್ರದ ಸಂಭ್ರಮಾಚರಣೆಗೆ ಅಡ್ಡಿ ಉಂಟು ಮಾಡುವ ಉದ್ದೇಶವನ್ನು ಈ ಪ್ರಸ್ತಾವಿತ ರ್ಯಾಲಿ ಹೊಂದಿದೆ. ಅಲ್ಲದೆ, ಇದು ಕಾನೂನು ಸುವ್ಯಸ್ಥೆ ಕೂಡ ಅಡ್ಡಿ ಉಂಟು ಮಾಡುವ ಸಾಧ್ಯತೆ ಇದೆ. ಆದುದರಿಂದ ನಾಯಾಲಯ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರಕಾರದ ಮನವಿಯಲ್ಲಿ ಹೇಳಿದೆ.

 ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಅದರದ್ದೇ ಆದ ಸಾಂವಿಧಾನಿಕ ಹಾಗೂ ಚಾರಿತ್ರಿಕ ಮಹತ್ವ ಇದೆ. ಇದು ಪ್ರತ್ಯೇಕವಾದ ಸ್ವತಂತ್ರ ಕಾರ್ಯಕ್ರಮವಲ್ಲ. ಬದಲಾಗಿ ಜನವರಿ 26ರಂದು ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಪೂರ್ವಾಭ್ಯಾಸ ಜನವರಿ 23ರಂದು ನಡೆಯುತ್ತದೆ. ಜನವರಿ 28ರಂದು ಎನ್‌ಸಿಸಿ ರ್ಯಾಲಿ ಎಂದು ಕರೆಯಲಾಗುವ ವಿಧ್ಯುಕ್ತ ಕಾರ್ಯಕ್ರಮ ನಡೆಯಲಿದೆ. ಅದನ್ನು ಅನುಸರಿಸಿ ಜನವರಿ 29ರಂದು ‘ಬೀಟಿಂಗ್ ದಿ ರಿಟ್ರೀಟ್’ ಕಾರ್ಯಕ್ರಮ ನಡೆಯಲಿದೆ.

 ಜನವರಿ 30ರಂದು ಹುತಾತ್ಮರ ದಿನ ಆಚರಿಸಲಾಗುತ್ತದೆ. ಅಂದು ವಿದ್ಯುಕ್ತ ಕಾರ್ಯಕ್ರಮಗಳು ಅಂತ್ಯಗೊಳ್ಳುತ್ತದೆ ಎಂದು ಮನವಿ ಹೇಳಿದೆ. ಈ ಕಾರ್ಯಕ್ರಮಕ್ಕೆ ಉಂಟಾಗುವ ಯಾವುದೇ ಅಡ್ಡಿ ಕೇವಲ ಕಾನೂನು ಹಾಗೂ ಸುವ್ಯವಸ್ಥೆ, ಸಾರ್ವಜನಿಕ ವ್ಯವಸ್ಥೆ, ಸಾರ್ವಜನಿಕ ಹಿತಾಸಕ್ತಿ ವಿರುದ್ಧ ಮಾತ್ರವಲ್ಲ, ಬದಲಾಗಿ ಇದು ದೇಶಕ್ಕೆ ಅತಿ ದೊಡ್ಡ ಮುಜುಗರ ಉಂಟು ಮಾಡಲಿದೆ ಎಂದು ಹೇಳಿರುವ ಕೇಂದ್ರ ಸರಕಾರ, ಯಾರೇ ಆಯೋಜಿಸುವ ಯಾವುದೇ ಪ್ರತಿಭಟನಾ ರ್ಯಾಲಿ ಅಥವಾ ಟ್ರಾಕ್ಟರ್ ರ್ಯಾಲಿ, ಟ್ರೋಲಿ ರ್ಯಾಲಿ, ವಾಹನ ರ್ಯಾಲಿ ಅಥವಾ ಇತರ ಯಾವುದೇ ರೀತಿಯ ರ್ಯಾಲಿ (ಯಾವುದೇ ಪ್ರತಿಭಟನಾ ರ್ಯಾಲಿ ಯಾವುದೇ ರೀತಿಯಲ್ಲಿ )ದಿಲ್ಲಿ ಎನ್‌ಸಿಆರ್ ಪ್ರವೇಶಿಸದಂತೆ ತಡೆಯಾಜ್ಞೆ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ. ರಾಷ್ಟ್ರೀಯ ಸಂಭ್ರಮಾಚರಣೆಯ ದಿನ ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಕೇಂದ್ರ ಸರಕಾರ, ರ್ಯಾಲಿ ಗಂಭೀರ ಕಾನೂನು ಸುವ್ಯವಸ್ಥೆಯ ಸಮಸ್ಯೆ ಸೃಷ್ಟಿಸಬಹುದು ಹಾಗೂ ದೇಶಕ್ಕೆ ಮುಜುಗರ ಉಂಟು ಮಾಡಬಹುದು ಎಂದು ಹೇಳಿದೆ.

ಪ್ರತಿಭಟಿಸುವ ಹಕ್ಕು ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ವ್ಯವಸ್ಥೆಯ ರಕ್ಷಣೆಯನ್ನು ಹೊಂದಿಕೊಂಡಿದೆ. ಪ್ರತಿಭಟನೆಯ ಹಕ್ಕಿನಲ್ಲಿ ಜಾಗತಿಕ ಮಟ್ಟದಲ್ಲಿ ದೇಶವನ್ನು ಮುಜುಗರ ಉಂಟು ಮಾಡುವ ವಿಚಾರ ಒಳಗೊಂಡಿಲ್ಲ ಎಂದು ಕೇಂದ್ರ ಸರಕಾರ ತನ್ನ ಮನವಿಯಲ್ಲಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X