Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾನೂನು ಪಾಲಕರಿಗೆ ರಕ್ಷಣೆ, ಸಮಾಜ...

ಕಾನೂನು ಪಾಲಕರಿಗೆ ರಕ್ಷಣೆ, ಸಮಾಜ ವಿರೋಧಿಗಳಿಗೆ ಎಚ್ಚರಿಕೆ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅಭಿಮತ

ವಾರ್ತಾಭಾರತಿವಾರ್ತಾಭಾರತಿ12 Jan 2021 1:50 PM IST
share
ಕಾನೂನು ಪಾಲಕರಿಗೆ ರಕ್ಷಣೆ, ಸಮಾಜ ವಿರೋಧಿಗಳಿಗೆ ಎಚ್ಚರಿಕೆ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅಭಿಮತ

ಮಂಗಳೂರು, ಜ.12: ‘‘ಸರಕಾರ ಹಾಗೂ ಇಲಾಖೆಯ ಆಶಯದಂತೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡುವ ಉದ್ದೇಶದಿಂದ ಕಾನೂನು ಪಾಲಕರಿಗೆ ರಕ್ಷಣೆ ನೀಡುವ ಜತೆಗೆ ಸಮಾಜ ವಿರೋಧಿಗಳು, ಕಾನೂನು ಮೀರಿ ವರ್ತಿಸುವವರಿಗೆ ಹಾಗೂ ಇತರರಿಗೆ ಅನಗತ್ಯ ತೊಂದರೆ ನೀಡುವರಿಗೆ ಕಾನೂನು ಕ್ರಮದ ಜತೆಗೆ ಎಚ್ಚರಿಕೆ ನೀಡುವುದು ತನ್ನ ಕಾರ್ಯಾಚರಣೆಗಳ ಉದ್ದೇಶ...’’ 

ಹೀಗೆಂದವರು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್. ಅವರಿಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದದಲ್ಲಿ ಅಭಿಪ್ರಾಯ ಹಂಚಿಕೊಂಡರು.

ಅಧಿಕಾರದ ಸ್ವೀಕರಿಸಿದ ಎರಡು ದಿನಗಳಿಂದಲೇ ನಗರದ ಬೀಚ್, ಮೈದಾನಗಳಲ್ಲಿ ರಾತ್ರಿ ಹೊತ್ತು ಮದ್ಯಪಾನ, ಲೌಡ್ ಸ್ಪೀಕರ್ ಹಾಡು, ಗಾಂಜಾ ಸೇವನೆ ಕುರಿತಂತೆ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದು ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದ ಮಾಡಲಾಗಿದೆ. ಇದಕ್ಕೆ ಬಹಳಷ್ಟು ಪ್ರಶಂಸೆ ವ್ಯಕ್ತವಾಗಿರುವ ಜತೆಗೆ ಕೆಲವರಿಂದ ಆಕ್ಷೇಪವೂ ವ್ಯಕ್ತವಾಗಿದೆ. ಡ್ರಗ್ಸ್ ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಿಂದಿನ ಪ್ರಕರಣಗಳ ಆರೋಪಿಗಳ ಪೆರೇಡ್ ನಡೆಸಿದ ಸಂದರ್ಭವೂ ಕೆಲವೊಂದು ಆಕ್ಷೇಪ ವ್ಯಕ್ತವಾಗಿದೆ. ಕಾರ್ಯಾಚರಣೆಯ ಮೇಲೆ ಯಾರಿಗೂ ಅವಮಾನ ಮಾಡುವ ಕೆಲಸವಾಗಲಿ, ಹೊಡೆಯುವ ಕೆಲಸವಾಗಿ ಇಲಾಖೆಯಿಂದ ಆಗಿಲ್ಲ. ಮಾತ್ರವಲ್ಲದೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಈ ಕಾರ್ಯಾಚರಣೆಗಳು ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಲಿದೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಿದೆ ಎಂದು ಅವರು ಹೇಳಿದರು.

ಬೀಚ್ ಟೂರಿಸಂ ಮಂಗಳೂರಿನ ಪ್ರಮುಖ ಆಕರ್ಷಣೆ. ಆದರೆ ರಾತ್ರಿ ಹೊತ್ತಿನಲ್ಲಿ ಬೀಚ್‌ನಿಂದ ಸುಮಾರು ಒಂದರಿಂದ ಒಂದೂವರೆ ಕಿ.ಮೀ. ದೂರದ ಕತ್ತಲು ಪ್ರದೇಶದಲ್ಲಿ ಮದ್ಯಪಾನ ಮಾಡುವುದು ಅಥವಾ ಹೆಣ್ಣು ಮಕ್ಕಳೊಂದಿಗೆ ಇರುವುದು ಸುರಕ್ಷತೆಯ ದೃಷ್ಟಿಯಿಂದಲೂ ಅಪಾಯಕಾರಿ. ರೈಲು ನಿಲ್ದಾಣಗಳಲ್ಲಿ ನಿರಾಶ್ರಿತರು ಇರುವುದು ಸಹಜ. ಆದರೆ ರೈಲು ಹಳಿಗಳಲ್ಲಿ ರಾತ್ರಿ ಹೊತ್ತು ತಿರುಗಾಡುವುದು, ಮಾದಕ ದ್ರವ್ಯಗಳನ್ನು ಬಳಸುವುದು ಎಷ್ಟು ಸರಿ ಎಂದವರು ಪ್ರಶ್ನಿಸಿದರು. ನಗರದಲ್ಲಿ ಮಾದಕ ದ್ರವ್ಯಗಳ ಸಮಸ್ಯೆ ಹೆಚ್ಚಿದೆ. ಇದರಿಂದ ಯುವ ಸಮೂಹ ದಿಕ್ಕು ತಪ್ಪುವ ಸಾಧ್ಯೆ ಇರುವುದರಿಂದ ಅದನ್ನು ಬೇರು ಸಹಿತ ಕಿತ್ತು ಹಾಕುವ ಪ್ರಯತ್ನ ಮಾಡಲಾಗುವುದು. ಮಂಗಳೂರಿನಲ್ಲಿ ಪ್ರತಿನಿತ್ಯ ಅಲ್ಲಲ್ಲಿ ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಜನ ರಾತ್ರಿ ಹೊತ್ತಿನಲ್ಲೂ ತಿರುಗಾಡುತ್ತಿರುತ್ತಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ ಈ ಕಾರ್ಯಾಚರಣೆಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಇಲಾಖೆಯಿಂದ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಪೊಲೀಸರ ಜತೆ ಸಹಕರಿಸಿ

 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಕುಟುಂಬ, ವೈಯಕ್ತಿಕ ಜೀವನ ಬಿಟ್ಟು ಕರ್ತವ್ಯದಲ್ಲಿರುತ್ತಾರೆ. ಅವರನ್ನೂ ನಿಮ್ಮ ಮನೆಯ ಕುಟುಂಬದ ಸದಸ್ಯರಂತೆ ಕಾಣಿರಿ ಹಾಗೂ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಅವರಿಗೆ ಸಹಕರಿಸಿ ಎಂದು ಮನವಿ ಮಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಕರ್ತವ್ಯನಿರತ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಯುವಂತಹ ಕೃತ್ಯಗಳು ನಡೆದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು. ಬೀಚ್‌ಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದ ಅವರು, ಜನಸಾಮಾನ್ಯರು ಅಪರಾದ ಕೃತ್ಯಗಳಿಗಿಂತಲೂ ಹೆಚ್ಚು ಸಮಸ್ಯೆ ಅನುಭವಿಸುವುದು ಸುಗಮ ಸಂಚಾರದಲ್ಲಿನ ಅಡಚಣೆಯಿಂದಾಗಿ. ಹಾಗಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದರು.

ಟೋಯಿಂಗ್ ಕುರಿತಂತೆ ಸ್ಪಷ್ಟ ಚಿತ್ರಣ ತನಗೆ ಇನ್ನೂ ಇಲ್ಲವಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಸಾರ್ವಜನಿಕರು ಯಾವುದೇ ಸಮಸ್ಯೆ, ದೂರುಗಳಿದ್ದಲ್ಲಿ 112ಗೆ ಕರೆ ಮಾಡಿದರೆ ಸೂಕ್ತ ಸ್ಪಂದನದ ಜತೆಗೆ ಫೀಡ್‌ಬ್ಯಾಕ್ ಕೂಡಾ ದೊರೆಯುತ್ತದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X