Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.15ರಿಂದ ಉನ್ನತ ಶಿಕ್ಷಣದ ಆಫ್‌ಲೈನ್‌...

ಜ.15ರಿಂದ ಉನ್ನತ ಶಿಕ್ಷಣದ ಆಫ್‌ಲೈನ್‌ ತರಗತಿಗಳು ಆರಂಭ: ಹೊಸ ಮಾರ್ಗಸೂಚಿ ಬಿಡುಗಡೆ

ಆಫ್‍ಲೈನ್-ಆನ್‍ಲೈನ್ ಹಾಜರಿ ಕಡ್ಡಾಯ, ಕೋವಿಡ್ ಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಅಗತ್ಯವಿಲ್ಲ: ಡಿಸಿಎಂ

ವಾರ್ತಾಭಾರತಿವಾರ್ತಾಭಾರತಿ12 Jan 2021 8:26 PM IST
share
ಜ.15ರಿಂದ ಉನ್ನತ ಶಿಕ್ಷಣದ ಆಫ್‌ಲೈನ್‌ ತರಗತಿಗಳು ಆರಂಭ: ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು, ಜ.12: ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿ ಮೀರುವಂತಿಲ್ಲ. ಶಿಕ್ಷಣ ಸಂಸ್ಥೆಗಳ ಜತೆಗೆ, ವಿದ್ಯಾರ್ಥಿಗಳು ಕೂಡ ಪಾಲಿಸಬೇಕು. ಇನ್ನು, ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು, ಆನ್‌ಲೈನ್‌ ತರಗತಿಗೂ ಹಾಜರಾಗಬಹದು. ಆ ಆಯ್ಕೆ ವಿದ್ಯಾರ್ಥಿಗಳಿಗೇ ಇರುತ್ತದೆ. ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ ಎಂದು ಅವರು ಹೇಳಿದರು.

ಹೊಸ ಎಸ್‌ಒಪಿ ಹೀಗಿದೆ:

► ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು. ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ.

► ಮಾರ್ಗಸೂಚಿಯಂತೆ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ. ದೈಹಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು.

► ಬೋಧನಾ, ಪ್ರಾಕ್ಟಿಕಲ್‌, ಪ್ರಾಜೆಕ್ಟ್‌ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು.

► ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗಬಹುದು. ಇಂಥ ವಿದ್ಯಾರ್ಥಿಗಳಿಗೆ ಪಠ್ಯದ ಬಗ್ಗೆ ಇರುವ ಅನುಮಾನ, ಗೊಂದಲಗಳನ್ನು ನಿವಾರಿಸಲು ಪ್ರತಿದಿನ ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸಬಹುದು. ಇಂಥ ಸಂಪರ್ಕ ತರಗತಿಗಳನ್ನು ನಡೆಸುವಾಗಲೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು. ಪ್ರತಿ ಹಂತದಲ್ಲೂ ದೈಹಿಕ ಅಂತರ ಬಹಳ ಮುಖ್ಯವಾಗಿರುತ್ತದೆ.

► ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಇಂದು ತಿಂಗಳ ಕಾಲ ಪ್ರತಿ ತರಗತಿಗೆ ಸಂಬಂಧಿಸಿದ ಅಧ್ಯಯನ ಸಾಮಗ್ರಿಯನ್ನು ವಾಟ್ಸ್ ಆ್ಯಪ್‌, ಇ ಮೇಲ್‌ ಅಥವಾ ಟೆಲಿಗ್ರಾಂ ಮೂಲಕ ಕಳಿಸಬೇಕು. ಇದು ಕಡ್ಡಾಯ. ಜತೆಗೆ, ವಿಡಿಯೋ ಪಾಠಗಳು, ಪವರ್‌ ಪಾಯಿಂಟ್‌ ಪ್ರೆಸೆಂಟೇಶನ್‌, ಇ-ಪುಸ್ತಕ, ಇ-ನೋಟ್ಸ್‌, ಆಡಿಯೋ ಪುಸ್ತಕ, ಅಭ್ಯಾಸ ಪ್ರಶ್ನೆಗಳನ್ನು ಇತ್ಯಾದಿ ಅಧ್ಯಯನ ಸಾಮಗ್ರಿಯನ್ನು ಕಡ್ಡಾಯವಾಗಿ ಕಾಲೇಜ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು.

► ಇನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಆನ್‌ ಕ್ಯಾಂಪಸ್‌ ಮತ್ತು ಆಫ್‌ ಕ್ಯಾಂಪಸ್‌ ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳಬಹುದು.

ಸಾಮಾನ್ಯ ಮಾರ್ಗಸೂಚಿ

► ತರಗತಿಗಳ ಆರಂಭಕ್ಕೆ ಮುನ್ನ ಕಾಲೇಜಿನ ಕಟ್ಟಡ, ಮುಖ್ಯದ್ವಾರ, ಗ್ರಂಥಾಲಯ, ಶೌಚಾಲಯ, ಕೊಠಡಿ, ಪೀಠೋಪಕರಣ ಹಾಗೂ ಆಧ್ಯಯನ ಪುಸ್ತಕಗಳನ್ನು ಸ್ಯಾನಿಟೈಸ್‌ ಮಾಡಬೇಕು. ಜತೆಗೆ, ದ್ವಾರದಲ್ಲಿಯೇ ಎಲ್ಲರ ಥರ್ಮಲ್‌ ಸ್ಕೀನಿಂಗ್‌ ಹಾಗೂ ಸ್ಯಾನಿಟೈಸ್‌ ವ್ಯವಸ್ಥೆ ಕಡ್ಡಾಯ. 

► ಎಲ್ಲ ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ಸಿಬ್ಬಂದಿ ಕೋವಿಡ್-‌19 ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ. ಆದರೆ, ಕೋವಿಡ್‌ ಲಕ್ಷಣಗಳು ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹತ್ತಿರದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಎಲ್ಲ ಕಾಲೇಜುಗಳು ಮ್ಯಾಪಿಂಗ್‌ ಮಾಡಿಕೊಳ್ಳಬೇಕು.

► ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.50 ಮೀರುವಂತಿಲ್ಲ. ಒಂದು ಹಾಜರಾತಿ ಹೆಚ್ಚಿದರೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು. ನೇರ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರು ತಂದುಕೊಳ್ಳಬೇಕು. ಮಾಸ್ಕ್‌, ಸ್ಯಾನಿಟೈಸರ್‌ ಕೂಡ ಕಡ್ಡಾಯ. ಬೋಧಕರಿಗೂ, ಇತರೆ ಎಲ್ಲ ಸಿಬ್ಬಂದಿಗೂ ಇದು ಅನ್ವಯವಾಗುತ್ತದೆ.

► ಲೈಬ್ರರಿ, ಕ್ಯಾಂಟೀನ್‌ ಆರಂಭಕ್ಕೆ ಅಡ್ಡಿ ಇಲ್ಲ. ಆದರೆ ಮಾರ್ಗಸೂಚಿ ಮೀರುವಂತಿಲ್ಲ. ಜತೆಗೆ, ಎನ್‌ಎಸ್‌ಎಸ್‌ ಹಾಗೂ ಎನ್‌ಸಿಸಿ ಚಟುವಟಿಕೆಗಳನ್ನು ಕೋವಿಡ್‌ ಮಾರ್ಗಸೂಚಿಯಂತೆ ಆರಂಭಿಸಬಹುದು. 

ನೂತನ ಮಾರ್ಗಸೂಚಿಯ ವಿವರವಾದ ಕರಡನ್ನು ಎಲ್ಲ ಶಿಕ್ಷಣ ಸಂಸ್ಥೆ, ಕಾಲೇಜುಗಳಿಗೆ ಕಳಿಸಲಾಗಿದ್ದು, ಆಯಾ ಸಂಸ್ಥೆಗಳ ಆಡಳತ ಮಂಡಳಿ, ಪ್ರಾಂಶುಪಾಲರು ಕೂಲಂಕಷವಾಗಿ ಗಮನಿಸಿ ಜಾರಿ ಮಾಡಬೇಕು ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X