ಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜ.12: ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾವಂತ ನಿರುದ್ಯೋಗ ಯುವಕ- ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ (ವಿದ್ಯಾರ್ಹತೆ:ಪದವಿ) ಹಾಗೂ ಕ್ಯಾಮರಾಮ್ಯಾನ್ (ಎಸೆಸೆಲ್ಸಿ) ತರಬೇತಿಯನ್ನು ಅನನ್ಯ ಕ್ರಿಯೇಷನ್ಸ್, ಮಂಡ್ಯ ಇವರ ಮೂಲಕ ಮೂರು ತಿಂಗಳ ಅವಧಿಗೆ ನೀಡಲಾಗುವುದು.
18ರಿಂದ 30 ವರ್ಷದೊಳಗಿನ ಅರ್ಹ ಅ್ಯರ್ಥಿಗಳು ಜಿಲ್ಲಾ ಕಚೇರಿಯಿಂದ ಅರ್ಜಿಯನ್ನು ಪಡೆದು, ಜನವರಿ 25ರೊಳಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರಿಗೆ ಮುದ್ದಾಂ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸುವಂತೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story