Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಪರ ಪಿತೂರಿ ಸಿದ್ಧಾಂತ ಪ್ರಚಾರ:...

ಟ್ರಂಪ್ ಪರ ಪಿತೂರಿ ಸಿದ್ಧಾಂತ ಪ್ರಚಾರ: 70,000 ಟ್ವಿಟರ್ ಖಾತೆಗಳು ಬಂದ್

ವಾರ್ತಾಭಾರತಿವಾರ್ತಾಭಾರತಿ12 Jan 2021 8:53 PM IST
share
ಟ್ರಂಪ್ ಪರ ಪಿತೂರಿ ಸಿದ್ಧಾಂತ ಪ್ರಚಾರ: 70,000 ಟ್ವಿಟರ್ ಖಾತೆಗಳು ಬಂದ್

ಲಾಸ್ ಏಂಜಲಿಸ್ (ಅಮೆರಿಕ), ಜ. 12: ಅಮೆರಿಕದ ಸಂಸತ್‌ನ ಮೇಲೆ ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ದಾಳಿಯ ಬಳಿಕ, ‘ಕ್ಯೂಅನಾನ್’ ಎಂಬ ಸಿದ್ಧಾಂತದ ಪ್ರಚಾರಕ್ಕೆ ಮೀಸಲಾಗಿರುವ 70,000ಕ್ಕೂ ಅಧಿಕ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಟ್ವಿಟರ್ ಇಂಕ್ ಕಂಪೆನಿ ತಿಳಿಸಿದೆ.

‘‘ಸಂಸತ್‌ನ ಮೇಲೆ ನಡೆದ ದಾಳಿ ಹಾಗೂ ಅಪಾಯ ಸಾಧ್ಯತೆಯ ಹೆಚ್ಚಳದ ಹಿನ್ನೆಲೆಯಲ್ಲಿ, ‘ಕ್ಯೂಅನಾನ್’ ಬರಹಗಳನ್ನು ಹಂಚುವುದಕ್ಕೆ ಮೀಸಲಾಗಿರುವ ಸಾವಿರಾರು ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವ ಕಾರ್ಯವನ್ನು ನಾವು ಶುಕ್ರವಾರ ಆರಂಭಿಸಿದ್ದೇವೆ’’ ಎಂದು ಟ್ವಿಟರ್ ಸೋಮವಾರ ಬ್ಲಾಗ್ ಒಂದರಲ್ಲಿ ತಿಳಿಸಿದೆ.

‘‘ಈ ಖಾತೆಗಳು ಅಪಾಯಕಾರಿ ಕ್ಯೂಅನಾನ್ ಬರಹಗಳನ್ನು ಹಂಚುವ ಏಕೈಕ ಉದ್ದೇಶವನ್ನು ಹೊಂದಿದ್ದವು’’ ಎಂದು ಟ್ವಿಟರ್ ಹೇಳಿದೆ.

ಏನಿದು ‘ಕ್ಯೂಅನಾನ್’ ಸಿದ್ದಾಂತ?

   ‘ಕ್ಯೂಅನಾನ್’ ಎನ್ನುವುದು ಕಡುಬಲಪಂಥೀಯರ ಆಧಾರರಹಿತ ಪಿತೂರಿ ಸಿದ್ಧಾಂತ. ಸೈತಾನನನ್ನು ಪೂಜಿಸುವ, ನರಮಾಂಸ ತಿನ್ನುವ ಶಿಶುಕಾಮಿಗಳ ಗುಂಪೊಂದು ಜಾಗತಿಕ ಮಟ್ಟದಲ್ಲಿ ಮಕ್ಕಳ ಕಳ್ಳಸಾಗಾಣಿಕೆಯಲ್ಲಿ ನಿರತವಾಗಿದೆ ಹಾಗೂ ಈ ಗುಂಪಿನ ವಿರುದ್ಧ ಡೊನಾಲ್ಡ್ ಟ್ರಂಪ್ ಹೋರಾಡುತ್ತಿದ್ದಾರೆ ಹಾಗೂ ಅದಕ್ಕಾಗಿ ಟ್ರಂಪ್ ವಿರುದ್ಧ ಈ ಗುಂಪು ಪಿತೂರಿ ನಡೆಸುತ್ತಿದೆ ಎನ್ನುವುದು ‘ಕ್ಯೂಅನಾನ್’ನ ಮೂಲ ಸಿದ್ಧಾಂತ.

ಈ ತಥಾಕಥಿತ ಗುಂಪಿನ ಸಾವಿರಾರು ಸದಸ್ಯರನ್ನು ಬಂಧಿಸಲು ‘ಸ್ಟಾರ್ಮ್’ (ಬಿರುಗಾಳಿ) ಎಂಬ ಹೆಸರಿನ ಕಾರ್ಯಾಚರಣೆಯೊಂದನ್ನು ನಡೆಸಲು ಟ್ರಂಪ್ ದಿನ ನಿಗದಿಪಡಿಸುತ್ತಿದ್ದಾರೆ ಎಂದು ಈ ಪಿತೂರಿ ಸಿದ್ಧಾಂತವು ಹೇಳಿಕೊಳ್ಳುತ್ತದೆ.

ಹಲವು ಪ್ರಗತಿಪರ ಹಾಲಿವುಡ್ ನಟರು, ಡೆಮಾಕ್ರಟಿಕ್ ಪಕ್ಷದ ರಾಜಕಾರಣಿಗಳು ಹಾಗೂ ಉನ್ನತ ಸ್ತರದ ಸರಕಾರಿ ಅಧಿಕಾರಿಗಳು ಈ ಗುಂಪಿನ ಸದಸ್ಯರು ಎಂದು ಕ್ಯೂಅನಾನ್ ಬೆಂಬಲಿಗರು ಹೇಳಿಕೊಳ್ಳುತ್ತಾರೆ.

ಈ ನಕಲಿ ಸಿದ್ಧಾಂತವನ್ನು ಪಚಾರಪಡಿಸುವುದಕ್ಕಾಗಿ ಹಾಗೂ ಇದಕ್ಕೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಹರಡುವುದಕ್ಕಾಗಿ ಟ್ರಂಪ್ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X