ಕಾರ್ಕಳ, ಜ.12: ಬೈಲೂರು ಗ್ರಾಮದ ಬಸ್ರಿ ಶಾಲೆಯ ಬಳಿ ಜ.11ರಂದು ಇಸ್ಪೀಟ್ ಜುಗಾರಿ ಆಡುತ್ತಿದ್ದ ನಾಲ್ವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ, ಮಣಿಕಂಠ ಅಣ್ಣಯ್ಯ, ಅಜೇಯ, ರಂಜಿತ್ ಬಂಧಿತ ಆರೋಪಿ ಗಳು. ಇವರಿಂದ 3500ರೂ. ನಗದು ವಶಪಡಿಸಿಕೊಳ್ಳ ಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.