Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ರಂಪ್ ತಪ್ಪಾಗಿ ವಿವೇಕಾನಂದರ ಹೆಸರು...

ಟ್ರಂಪ್ ತಪ್ಪಾಗಿ ವಿವೇಕಾನಂದರ ಹೆಸರು ಉಚ್ಚರಿಸಿದಾಗ ಬಿಜೆಪಿ ನಾಯಕರು ಪ್ರತಿಭಟಿಸಲಿಲ್ಲವೇಕೆ?: ಅಭಿಷೇಕ್ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ12 Jan 2021 11:29 PM IST
share
ಟ್ರಂಪ್ ತಪ್ಪಾಗಿ ವಿವೇಕಾನಂದರ ಹೆಸರು ಉಚ್ಚರಿಸಿದಾಗ ಬಿಜೆಪಿ ನಾಯಕರು ಪ್ರತಿಭಟಿಸಲಿಲ್ಲವೇಕೆ?: ಅಭಿಷೇಕ್ ಬ್ಯಾನರ್ಜಿ

ಕೋಲ್ಕತಾ: ಬಂಗಾಳದ ಐಕಾನ್ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆಯ ದಿನದಂದು ಬಿಜೆಪಿ ಹಾಗೂ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಗಳು ರಾಜಕೀಯ ಕಾಳಗವನ್ನು ಮುಂದುವರಿಸಿವೆ. ವಿವೇಕಾನಂದರ ಜನ್ಮದಿನವಾಗಿರುವ ಇಂದು ರಾಜಕೀಯ ನಾಯಕರು ಸೆಂಟ್ರಲ್ ಕೋಲ್ಕತಾದಲ್ಲಿರುವ ವಿವೇಕಾನಂದರ ಪೂರ್ವಜರ ಮನೆಗೆ ಧಾವಿಸಿ ನಮನ ಸಲ್ಲಿಸಿದರು.

ಸ್ವಾಮಿ ವಿವೇಕಾನಂದರ ಗೌರವಾರ್ಥ ದಕ್ಷಿಣ  ಕೋಲ್ಕತಾದಲ್ಲಿ ಮೆರವಣಿಗೆ ನಡೆಸಿದ ತೃಣಮೂಲ ಕಾಂಗ್ರೆಸ್ ಸಂಸದ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.

"ಬಿಜೆಪಿಗೆ ಸ್ವಾಮಿ ವಿವೇಕಾನಂದರ ಫೋಟೊಗಳನ್ನು ಪ್ರದರ್ಶಿಸಲು ಹಾಗೂ ಮೆರವಣಿಗೆ ನಡೆಸುವ ಹಕ್ಕಿಲ್ಲ. ಅವರ ಹೆಸರು ಹೇಳುವ ಹಕ್ಕು ಆ ಪಕ್ಷಕ್ಕಿಲ್ಲ. ರಾಜಕೀಯ ಲಾಭಕ್ಕಾಗಿ ದೇಶದಲ್ಲಿ ದ್ವೇಷ ಹಾಗೂ ಕೋಮುವಾದದ ವಾತಾವರಣ ನಿರ್ಮಿಸಿರುವ ಆಡಳಿರೂಢ ಬಿಜೆಪಿಗೆ ನಾಚಿಕೆಯಾಗಬೇಕು'' ಎಂದರು.

"ಕಳೆದ ವರ್ಷ ಫೆ.24ರಂದು ಕೇಂದ್ರ ಸರಕಾರ ಡೊನಾಲ್ಡ್ ಟ್ರಂಪ್ ರನ್ನು ಅಹ್ಮದಾಬಾದ್ ಗೆ ಕರೆಸಿಕೊಂಡಿತ್ತು. ಕಾರ್ಯಕ್ರಮದಲ್ಲಿ ಟ್ರಂಪ್  ಅವರು ಸ್ವಾಮಿ ವಿವೇಕಾನಂದರ ಹೆಸರನ್ನು ‘ವಿವೇಕಾ ಮುಂಡನ’  ಎಂದು ತಪ್ಪು ತಪ್ಪಾಗಿ ಉಚ್ಚರಿಸಿದ್ದರು. ಹಿಂದೂ ಧರ್ಮದ ದೊಡ್ಡ ಚಾಂಪಿಯನ್ ಎಂದು ಕರೆಸಿಕೊಳ್ಳುವವರು(ಪ್ರಧಾನಿಯನ್ನು ಉಲ್ಲೇಖಿಸಿ)ಟ್ರಂಪ್ ಪಕ್ಕದಲ್ಲೇ ಕುಳಿತುಕೊಂಡು ಚಪ್ಪಾಳೆ ತಟ್ಟುತ್ತಿದ್ದರು. ಇದಕ್ಕಿಂತ ಹೆಚ್ಚು ನಾಚಿಕೆಯ ವಿಚಾರ ಬೇರೊಂದಿಲ್ಲ. ಆಗ ಯಾವೊಬ್ಬ ಬಿಜೆಪಿ ನಾಯಕ ಎದ್ದುನಿಂತು ಪ್ರತಿಭಟಿಸಿದ್ದಾನೆಯೇ? ಪ್ರಧಾನಿಯವರು ಡೊನಾಲ್ಡ್ ಟ್ರಂಪ್ ರಿಂದ ಮೈಕ್ ಕಸಿದು ಕೊಂಡು ಸ್ವಾಮಿಯವರ ಹೆಸರನ್ನು ಸರಿಯಾಗಿ ಉಚ್ಚರಿಸಬಹುದಿತ್ತು. ಆದರೆ ಅವರು ಕುಳಿತುಕೊಂಡು ಚಪ್ಪಾಳೆ ತಟ್ಟುತ್ತಿದ್ದರು. ಇಲ್ಲಿನ ಬಿಜೆಪಿ ನಾಯಕರು ಟ್ರಂಪ್ ರನ್ನು ಭಾರತಕ್ಕೆ ಕರೆತಂದಿದ್ದಕ್ಕೆ ಪ್ರಧಾನಿಯನ್ನು ಹೊಗಳುತ್ತಿದ್ದರು. ಈಗ ಟ್ರಂಪ್ ನಿರ್ಗಮಿಸಿದ್ದಾರೆ. ಕೆಲವರು ಉಳಿದಿದ್ದಾರೆ. ಅವರನ್ನು ನಾವು ರಾಜಕೀಯವಾಗಿ ನಿಭಾಯಿಸುತ್ತೇವೆ'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X