Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅನೈತಿಕ ಸಂಬಂಧ ಅಪರಾಧವಲ್ಲ’ ಎಂಬ...

‘ಅನೈತಿಕ ಸಂಬಂಧ ಅಪರಾಧವಲ್ಲ’ ಎಂಬ ತೀರ್ಪನ್ನು ಸಶಸ್ತ್ರ ಪಡೆಗಳಿಗೆ ಅನ್ವಯಿಸದಂತೆ ಸುಪ್ರೀಂಗೆ ಕೇಂದ್ರದ ಮನವಿ

ವಾರ್ತಾಭಾರತಿವಾರ್ತಾಭಾರತಿ13 Jan 2021 7:23 PM IST
share
‘ಅನೈತಿಕ ಸಂಬಂಧ ಅಪರಾಧವಲ್ಲ’ ಎಂಬ ತೀರ್ಪನ್ನು ಸಶಸ್ತ್ರ ಪಡೆಗಳಿಗೆ ಅನ್ವಯಿಸದಂತೆ ಸುಪ್ರೀಂಗೆ ಕೇಂದ್ರದ  ಮನವಿ

ಹೊಸದಿಲ್ಲಿ,ಜ.13: ಭಾರತೀಯ ದಂಡ ಸಂಹಿತೆ (ಐಪಿಸಿ)ಯಡಿ ವ್ಯಭಿಚಾರವನ್ನು ನಿರಪರಾಧೀಕರಣಗೊಳಿಸಿರುವ 2018ರ ತೀರ್ಪನ್ನು ಸಶಸ್ತ್ರ ಪಡೆಗಳಿಗೆ ಅನ್ವಯಿಸಬಾರದು ಎಂದು ಆಗ್ರಹಿಸಿ ಕೇಂದ್ರವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ನೋಟಿಸನ್ನು ಹೊರಡಿಸಿದೆ.

ತೀರ್ಪಿಗೆ ಕಾರಣವಾಗಿದ್ದ ಪಿಐಎಲ್‌ನ್ನು ಸಲ್ಲಿಸಿದ್ದ ಅರ್ಜಿದಾರರಿಗೆ ಮತ್ತು ಇತರರಿಗೆ ನೋಟಿಸನ್ನು ಹೊರಡಿಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್,ನವೀನ ಸಿನ್ಹಾ ಮತ್ತು ಕೆ.ಎಂ.ಜೋಸೆಫ್ ಅವರ ಪೀಠವು,ನ್ಯಾಯಾಲಯದ ನಿಲುವನ್ನು ಸ್ಪಷ್ಟಪಡಿಸಬಲ್ಲ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ರಚನೆಗಾಗಿ ವಿಷಯವನ್ನು ಮು.ನ್ಯಾ.ಎಸ್.ಎ.ಬೋಬ್ಡೆ ಅವರಿಗೆ ಒಪ್ಪಿಸಿತು. 2018ರ ಐತಿಹಾಸಿಕ ತೀರ್ಪಿನಲ್ಲಿ ಆಗಿನ ಮುಖ್ಯ ನ್ಯಾಯಾಧೀಶ ದೀಪಕ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಕಲಂ 497 (ವ್ಯಭಿಚಾರ)ನ್ನು ರದ್ದುಗೊಳಿಸಿ, ವ್ಯಭಿಚಾರವು ಅಪರಾಧವಲ್ಲ ಮತ್ತು ಮಹಿಳೆಯರ ಪ್ರತ್ಯೇಕತೆಗೆ ಘಾಸಿಯನ್ನುಂಟು ಮಾಡುವ ಹಾಗೂ ಅವರನ್ನು ಗಂಡಂದಿರ ಚರಾಸ್ತಿಗಳನ್ನಾಗಿ ಪರಿಗಣಿಸುವ ಕಲಂ 497 ಸಂವಿಧಾನ ವಿರೋಧಿಯಾಗಿದೆ ಎಂದು ಘೋಷಿಸಿತ್ತು. ಆದರೆ ಕೌಟುಂಬಿಕ ವಿವಾದಗಳಲ್ಲಿ ವಿವಾಹ ವಿಚ್ಛೇದನವನ್ನು ಕೋರಲು ವ್ಯಭಿಚಾರವು ಒಂದು ಕಾರಣವಾಗಿ ಮುಂದುವರಿಯುತ್ತದೆ ಎಂದು ಅದು ಸ್ಪಷ್ಟಪಡಿಸಿತ್ತು.

ಜೋಸೆಫ್ ಶೈನ್ ಅವರು ಸಲ್ಲಿಸಿದ್ದ ಪಿಐಎಲ್‌ನಲ್ಲಿ ತನ್ನ ಮಧ್ಯಂತರ ಅರ್ಜಿಯಲ್ಲಿ ತೀರ್ಪಿನ ಬಗ್ಗೆ ಸ್ಪಷ್ಟನೆಯನ್ನು ಕೋರಿರುವ ಕೇಂದ್ರವು,ಪಡೆಗಳಲ್ಲಿ ಶಿಸ್ತು ಕಾಯ್ದುಕೊಳ್ಳಲು ಅನೈತಿಕ ಸಂಬಂಧಗಳಲ್ಲಿ ತೊಡಗಿಕೊಂಡಿದ್ದಕ್ಕಾಗಿ ತನ್ನ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳುವ ಸಶಸ್ತ್ರ ಪಡೆಗಳ ವಿಶೇಷ ಕಾನೂನುಗಳು ಮತ್ತು ನಿಯಮಗಳಿಗೆ ಈ ತೀರ್ಪನ್ನು ಅನ್ವಯಿಸದಂತೆ ನಿರ್ದೇಶವನ್ನು ಹೊರಡಿಸುವಂತೆ ಕೇಳಿಕೊಂಡಿದೆ.

ಯೋಧರು ಮತ್ತು ಅಧಿಕಾರಿಗಳನ್ನು ಮುಂಚೂಣಿಯ ದುರ್ಗಮ ಪ್ರದೇಶಗಳಲ್ಲಿ ನಿಯೋಜಿಸಿದ ಸಂದರ್ಭಗಳಲ್ಲಿ ಮೂಲಶಿಬಿರಗಳಲ್ಲಿ ಅವರ ಕುಟುಂಬಗಳ ಕಾಳಜಿಯನ್ನು ಇತರ ಅಧಿಕಾರಿಗಳು ವಹಿಸುತ್ತಾರೆ ಮತ್ತು ವ್ಯಭಿಚಾರ ಅಥವಾ ಅನೈತಿಕ ಸಂಬಂಧಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳುವ ಅವಕಾಶಗಳನ್ನು ಒದಗಿಸಿರುವ ಕಾನೂನುಗಳು ಮತ್ತು ನಿಯಮಗಳನ್ನು ಶಿಸ್ತನ್ನು ಕಾಯ್ದುಕೊಳ್ಳಲು ನೆರವಾಗುತ್ತವೆ. ಸಹೋದ್ಯೋಗಿಯ ಪತ್ನಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಕ್ಕಾಗಿ ಅನುಚಿತ ವರ್ತನೆಯ ಆರೋಪದಲ್ಲಿ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಬಹುದಾಗಿದೆ ಎಂದು ಕೇಂದ್ರವು ಅರ್ಜಿಯಲ್ಲಿ ವಿವರಿಸಿದೆ.

ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಿದ್ದ ಐಪಿಸಿಯ ಕಲಂ 497ರಡಿ ಗರಿಷ್ಠ ಐದು ವರ್ಷಗಳ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿತ್ತು.

ಕಲಂ 497 ನಿರಂಕುಶ ಮತ್ತು ಪುರಾತನ ಕಾನೂನು ಆಗಿದ್ದು, ಮಹಿಳೆಯರ ಸಮಾನತೆಯ ಮತ್ತು ಸಮಾನ ಅವಕಾಶಗಳ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಸರ್ವೋಚ್ಚ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X