ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಅಪ್ರಟಿತ ಕವನ ಸಂಕಲನಗಳ ಆಹ್ವಾನ
ಉಡುಪಿ, ಜ.13: ನಾಡಿನ ಹಿರಿಯ ಕವಿ, ಪತ್ರಕರ್ತ ಕಡೆಂಗೋಡ್ಲು ಶಂಕರ ಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ನಾಡಿನ ಕವಿಗಳಿಂದ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ.
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನವನ್ನು ಕಳುಹಿಸಿ ಕೊಡಲು ಕೊನೆಯ ದಿನ ಮಾರ್ಚ್ 15. ಕಳುಹಿಸಬೇಕಾದ ವಿಳಾಸ: ಸಂಯೋಜಕರು, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ- 576 102.
ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000 ರೂ.ಗಳ ಒಂದು ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ, 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುತ್ತದೆ. ಮೂವರು ವಿಮರ್ಶಕರುಳ್ಳ ಒಂದು ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್: - https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ: ಮೊ.ನಂ.:9448868868/ 9480575783; ಕಚೇರಿ: 0820-2521159ನ್ನು ಸಂಪರ್ಕಿಸಬಹುದು.
ನಿಯಮಗಳು: ಕಳೆದ ಐದು ವರ್ಷಗಳಲ್ಲಿ ಬರೆದ ಕನ್ನಡ ಕವಿತೆಗಳು, ಬಿಡಿ ಯಾಗಿ ಪತ್ರಿಕೆಗಳಲ್ಲಿ ಪೂರ್ವ ಪ್ರಕಟಿತವಾದುವು, ಹೊಸದಾಗಿ ರಚಿತವಾದುವೂ ಇರಬಹುದು. ಕವನ ಸಂಕಲನದಲ್ಲಿ ಕನಿಷ್ಠ 40 ಕವನಗಳು ಇರಲೇಬೇಕು. ಕವನಗಳು ಈ ಮೊದಲು ಯಾವುದೇ ಕವನಸಂಕಲನದಲ್ಲಿ ಪ್ರಕಟಗೊಂಡಿರ ಬಾರದು.
ಲೇಖಕರು ತಮ್ಮ ಸಂಗ್ರಹದ ಒಂದು ನಕಲು ಪ್ರತಿಯನ್ನು (ಬೆರಳಚ್ಚು ಮಾಡಿದ) 2021ರ ಮಾ.15ರೊಳಗೆ ಸಮಿತಿಯ ವಿಳಾಸಕ್ಕೆ ಕಳುಹಿಸಬೇಕು. ಮೇ ತಿಂಗಳಲ್ಲಿ ಸಮಿತಿಯ ನಿರ್ಣಯ ಪ್ರಕಟಗೊಳ್ಳಲಿದೆ. ಬಹುಮಾನಕ್ಕಾಗಿ ಆಯ್ಕೆಯಾದ ಕವನ ಸಂಕಲನವನ್ನು ಡೆಮ್ಮಿ 1/8, 1/12 ಅಥವಾ 1/8 ಆಕಾರದಲ್ಲಿ ಮುದ್ರಿಸಬೇಕು. ಒಬ್ಬರು ಒಂದು ಕವನ ಸಂಕಲನವನ್ನು ಮಾತ್ರ ಕಳುಹಿಸಬೇಕು.







