Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತರ್ ಧರ್ಮೀಯ ವಿವಾಹಗಳಿಗೆ ನೋಟಿಸು...

ಅಂತರ್ ಧರ್ಮೀಯ ವಿವಾಹಗಳಿಗೆ ನೋಟಿಸು ಪ್ರದರ್ಶಿಸುವ ಅಗತ್ಯವಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Jan 2021 10:44 PM IST
share
ಅಂತರ್ ಧರ್ಮೀಯ ವಿವಾಹಗಳಿಗೆ ನೋಟಿಸು ಪ್ರದರ್ಶಿಸುವ ಅಗತ್ಯವಿಲ್ಲ: ಹೈಕೋರ್ಟ್

ಲಕ್ನೋ, ಜ. 12: ಅಂತರ್ ಧರ್ಮೀಯ ಜೋಡಿಗಳ ವಿವಾಹಗಳಿಗೆ ನೋಟಿಸ್ ಅನ್ನು ಕಡ್ಡಾಯವಾಗಿ ಪ್ರದರ್ಶಿಸುವುದು ಇನ್ನು ಮುಂದೆ ಐಚ್ಛಿಕವಾಗಿರಲಿದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಬುಧವಾರ ಹೇಳಿದೆ. ಇದರಿಂದ ಅಂತರ್ ಧರ್ಮೀಯ ಜೋಡಿಗಳು ನಿಟ್ಟುಸಿರು ಬಿಡುವಂತಾಗಿದೆ. ಇಂತಹ ನೋಟಿಸುಗಳ ಪ್ರಕಟಣೆ ‘‘ಸ್ವಾತಂತ್ರ ಹಾಗೂ ಗೌಪ್ಯತೆಯ ಮೂಲಭೂತ ಹಕ್ಕಿನ ಮೇಲೆ ಆಕ್ರಮಣ ಮಾಡುತ್ತದೆ’’ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಇದು ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳ ಹಸ್ತಕ್ಷೇಪವಿಲ್ಲದೆ ವಿವಾಹವನ್ನು ಆಯ್ಕೆ ಮಾಡುವ ಜೋಡಿಗಳ ಸ್ವಾತಂತ್ರದ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

1954ರ ವಿಶೇಷ ವಿವಾಹ ಕಾಯ್ದೆಯ ಕಲಂ ಅಂತರ್ ಧರ್ಮೀಯ ಜೋಡಿಗಳು ವಿವಾಹವಾಗುವಾಗ ಲಿಖಿತ ನೋಟಿಸನ್ನು ಜಿಲ್ಲಾ ದಂಡಾಧಿಕಾರಿಗೆ ಸಲ್ಲಿಸಬೇಕು. ಪ್ರಾಯ, ಮಾನಸಿಕ ಆರೋಗ್ಯ ಹಾಗೂ ತಮ್ಮ ಸುಮುದಾಯಗಳ ಸಂಪ್ರದಾಯ ಸೇರಿದಂತೆ ಸಾಮಾನ್ಯ ನಿಯಮಗಳ ಉಲ್ಲಂಘನೆಯ ನೆಲೆಯಲ್ಲಿ 30 ದಿನಗಳ ಒಳಗೆ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಲು ಅವಕಾಶವಾಗುವಂತೆ ಕಚೇರಿಯಲ್ಲಿ ಅಧಿಕಾರಿಗಳು ಈ ನೋಟಿಸನ್ನು ಪ್ರದರ್ಶಿಸಬೇಕು ಎಂದು ಕಾನೂನು ಹೇಳುತ್ತದೆ.

ಮಂಗಳವಾರ ನೀಡಿದ 47 ಪುಟಗಳ ತೀರ್ಪಿನಲ್ಲಿ ನ್ಯಾಯಮೂರ್ತಿ ವಿವೇಕ್ ಚೌಧರಿ, ನೋಟಿಸನ್ನು ಪ್ರಕಟಿಸುವಂತೆ ಅಥವಾ ಪ್ರಕಟಿಸದಿರುವಂತೆ ಜೋಡಿಗಳು ಲಿಖಿತ ಮನವಿಯನ್ನು ವಿವಾಹ ನೋಂದಣಿ ಅಧಿಕಾರಿಗೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಅವರು ನೋಟಿಸನ್ನು ಪ್ರಕಟಿಸುವ ಮನವಿ ಮಾಡದೇ ಇದ್ದ ಸಂದರ್ಭದಲ್ಲಿ ವಿವಾಹ ನೋಂದಣಿ ಅಧಿಕಾರಿ, ಅಂತಹ ಯಾವುದೇ ನೋಟಿಸನ್ನು ಪ್ರಕಟಿಸಬಾರದು ಅಥವಾ ವಿವಾಹಕ್ಕೆ ಸಂಬಂಧಿಸಿದ ಆಕ್ಷೇಪಕ್ಕೆ ಅವಕಾಶ ನೀಡಬಾರದು ಹಾಗೂ ವಿವಾಹ ನೆರವೇರಲು ಅವಕಾಶ ನೀಡಬೇಕು ಎಂದು ತೀರ್ಪು ಹೇಳಿದೆ.

ಹಿಂದೂ ವ್ಯಕ್ತಿಯನ್ನು ವಿವಾಹವಾಗಲು ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಮ್ ಮಹಿಳೆ ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ತನ್ನ ಪತಿಯೊಂದಿಗೆ ಜೀವಿಸಲು ತಂದೆ ಅವಕಾಶ ನೀಡುತ್ತಿಲ್ಲ ಎಂದು ಮನವಿಯಲ್ಲಿ ಮಹಿಳೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X