Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎಸ್ಡಿಪಿಐಯಿಂದ ಎಸ್ಪಿ ಕಚೇರಿ...

ಮಂಗಳೂರು: ಎಸ್ಡಿಪಿಐಯಿಂದ ಎಸ್ಪಿ ಕಚೇರಿ ಚಲೋ

ಶಾಂತಿಯುತ ಬೃಹತ್ ಪ್ರತಿಭಟನೆಗೆ ಪೊಲೀಸ್ ಆಯುಕ್ತರ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ15 Jan 2021 3:28 PM IST
share
ಮಂಗಳೂರು: ಎಸ್ಡಿಪಿಐಯಿಂದ ಎಸ್ಪಿ ಕಚೇರಿ ಚಲೋ

ಮಂಗಳೂರು, ಜ.15: ಉಜಿರೆಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಯ ಮತಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದಡಿ ಎಸ್‌ಡಿಪಿಐನ ಮೂವರು ಕಾರ್ಯಕರ್ತರನ್ನು ಬಂಧಿಸಿದ ಪ್ರಕರಣ ಖಂಡಿಸಿ ಎಸ್‌ಡಿಪಿಐ ವತಿಯಿಂದ ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ಜಾಥಾ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕ್ಲಾಕ್ ಟವರ್‌ನಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದಲೇ ಎಸ್‌ಡಿಪಿಐನ ಕಾರ್ಯಕರ್ತರು ಜಮಾವಣೆಗೊಳ್ಳ ತೊಡಗಿದ್ದರು. 2:30ರ ಸುಮಾರಿಗೆ ಬಹುತೇಕ ಕಾರ್ಯಕರ್ತರು ಸಮಾವೇಶಗೊಂಡು ಘೋಷಣೆ ಕೂಗುತ್ತಾ ಜಾಥಾ ನಡೆಸಲು ಮುಂದಾದರು.

ಕ್ಲಾಕ್‌ಟವರ್‌ನಿಂದ ಎಸ್ಪಿ ಕಚೇರಿಗೆ ತೆರಳಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ನಗರದ ಟೌನ್‌ಹಾಲ್ ಸಮೀಪ (ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದ ಬಳಿ) ಮಂಗಳೂರು ಪೊಲೀಸರು ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ಬಿಗಿ ಭದ್ರತೆಯೊಂದಿಗೆ ತಡೆಹಿಡಿದರು. ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಿಂದ ಕ್ಲಾಕ್‌ಟವರ್‌ವರೆಗೆ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ‘ಅಮಾಯಕ ಯುವಕರ ಬಿಡುಗಡೆ, ನೈಜ ಆರೋಪಿಗಳಾದ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರ ಬಂಧನ, ಕರ್ತವ್ಯಲೋಪ ಎಸಗಿದ ಬೆಳ್ತಂಗಡಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನಂದಕುಮಾರ್ ಅಮಾನತು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯುದ್ದಕ್ಕೂ ಪೊಲೀಸರು, ಬೆಳ್ತಂಗಡಿ ಶಾಸಕ, ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದರು. ‘ಎಸ್‌ಡಿಪಿಐ ಝಿಂದಾಬಾದ್’ ಘೋಷಣೆಯು ಏರುದನಿಯಲ್ಲಿ ಕೇಳಿಬರುತ್ತಿತ್ತು. ಬಹುತೇಕ ಕಾರ್ಯಕರ್ತರ ಕೈಯಲ್ಲಿ ಪಕ್ಷದ ಬಾವುಟ ರಾರಾಜಿಸುತ್ತಿದ್ದವು. ಪ್ರತಿಭಟನಾ ಮುಂಚೂಣಿಯಲ್ಲಿ ಹಲವು ಕಾರ್ಯಕರ್ತರು ಆಕ್ರೋಶದ ವಿವಿಧ ಬರಹಗಳ ಬ್ಯಾನರ್, ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸಿದರು.

ಕ್ಲಾಕ್ ಟವರ್ ಬಳಿಯೇ ಜಮಾವಣೆಗೊಂಡಿದ್ದ ಕಾರ್ಯಕರ್ತರು ಸುಮಾರು ಒಂದು ಗಂಟೆಯವರೆಗೆ ಪ್ರತಿಭಟನೆ ನಡೆಸಿದರು. ಬಳಿಕ 3:30ರ ಸುಮಾರಿಗೆ ಎಸ್ಪಿ ಕಚೇರಿಯತ್ತ ಹೆಜ್ಜೆ ಹಾಕತೊಡಗಿದರು. ಅತ್ತ ಪೊಲೀಸರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸನ್ನದ್ಧರಾಗಿದ್ದರು. ಕ್ಲಾಕ್ ಟವರ್‌ನಿಂದ 100 ಮೀಟರ್ ದೂರದಲ್ಲಿ ಟೌನ್‌ಹಾಲ್ ಬಳಿ ರಸ್ತೆಗೆ ಅಡ್ಡಲಾಗಿ ಪೊಲೀಸರು ಬ್ಯಾರಿಕೇಡ್ ಅವಳವಡಿಸಿ, ಪ್ರತಿಭಟನಾಕಾರರ ಜಾಥಾ ತಡೆಹಿಡಿದರು.

ಡಿಸಿಪಿಗಳಾದ ಹರಿರಾಮ್ ಶಂಕರ್, ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸರು ರಸ್ತೆಗೆ ಅಡ್ಡಲಾಗಿ ನಿಂತಿದ್ದರು. ಪ್ರತಿಭಟನಾಕಾರರು ಸಮೀಪಿಸುತ್ತಿದ್ದಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ, ಕೇಂದ್ರ ವಿಭಾಗದ ಎಸಿಪಿ ಎಂ.ಜಗದೀಶ್ ಪ್ರತಿಭಟನಾಕಾರರ ಮನವೊಲಿಸಿ, ಅದೇ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯುದ್ದಕ್ಕೂ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದರು. ಮನವಿಯನ್ನು ಹಿರಿಯ ಅಧಿಕಾರಿಗಳಿಗೆ ತಲುಪಿಸುವುದಾಗಿ ಆಯುಕ್ತರು ಭರವಸೆ ನೀಡಿದರು.

ಪ್ರತಿಭಟನೆಯುದ್ದಕ್ಕೂ ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಶಾಂತಿ ಕಾಯ್ದುಕೊಳ್ಳಲು ಮನವಿ ಮಾಡುತ್ತಿದ್ದುದು ಕಂಡುಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X